ಮಡಿಕೇರಿ ಅ.31 : ಶ್ರೀಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ ಪ್ರತೀ ವರ್ಷ ಸಂಪ್ರದಾಯದಂತೆ ನಡೆಸಿಕೊಂಡು ಬರುತ್ತಿರುವ “ವಿಷ್ಣುಮೂರ್ತಿ ಕೋಲ” (ಚಾಮುಂಡಿ)ವು ನ.5 ರಂದು ಬೆಳಗ್ಗೆ 10 ಗಂಟೆಗೆ ನಡೆಯಲಿದೆ. ಆದ್ದರಿಂದ ಸಾರ್ವಜನಿಕ ಭಕ್ತಾದಿಗಳು “ವಿಷ್ಣುಮೂರ್ತಿ ಕೋಲ” ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ದೇವರ ಕೃಪೆಗೆ ಪಾತ್ರರಾಗುವಂತೆ ದೇವಾಲಯದ ಆಡಳಿತಾಧಿಕಾರಿಗಳ ಪರವಾಗಿ ಕಾರ್ಯನಿರ್ವಾಹಣಾಧಿಕಾರಿ ಚಂದ್ರಶೇಖರ್ ಕೋರಿದ್ದಾರೆ.









