ಮಡಿಕೇರಿ ನ.2 : ಸ್ಪಿಕ್ ಮೆಕೆ ಮತ್ತು ಭಾರತೀಯ ವಿದ್ಯಾಭವನ ಕೊಡಗು ಘಟಕದ ವತಿಯಿಂದ ನವಂಬರ್ 6 ರಂದು ಸೋಮವಾರ ನಗರದಲ್ಲಿ ಖ್ಯಾತ ವೇಣುವಾದಕ ಪ್ರವೀಣ್ ಗೋಡ್ಕಿಂಡಿ ಅವರ ಕೊಳಲು ವಾದನ ಆಯೋಜಿಸಲಾಗಿದೆ. ನಗರದ ಶ್ರೀ ಓಂಕಾರೇಶ್ವರ ದೇವಾಲಯ ಬಳಿಯ ಭಾರತೀಯ ವಿದ್ಯಾಭವನ ಸಭಾಂಗಣದಲ್ಲಿ ಸಂಜೆ 6 ಗಂಟೆಗೆ ಕಾಯ೯ಕ್ರಮ ನಡೆಯಲಿದೆ. ಖ್ಯಾತ ಕೊಳಲು ವಾದಕ ಪ್ರವೀಣ್ ಗೋಡ್ಕಿಂಡಿ ಅವರೊಂದಿಗೆ ತಬಲದಲ್ಲಿ ಕಿರಣ್ ಗೋಡ್ಕಿಂಡಿ ಜತೆಯಾಗಲಿದ್ದಾರೆ ಎಂದು ಭಾರತೀಯ ವಿದ್ಯಾಭವನ ಕೊಡಗು ಘಟಕದ ಕಾಯ೯ದಶಿ೯ ಬಾಲಾಜಿ ಕಶ್ಯಪ್ ತಿಳಿಸಿದ್ದಾರೆ .










