ವಿರಾಜಪೇಟೆ ನ.4 : ಓದುವ ಹವ್ಯಾಸವು ಬದುಕನ್ನು ಸುಂದರಗೊಳಿಸುತ್ತದೆ ಎಂದು ಮಡಿಕೇರಿಯ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಮಡಿಕೇರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಕೋರನ ಸರಸ್ವತಿ ಅಭಿಪ್ರಾಯಪಟ್ಟರು.
ವಿರಾಜಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕ್ರೀಡಾ ಹಾಗೂ ಸಾಂಸ್ಕೃತಿಕ ಸಮಿತಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವಿದ್ಯಾರ್ಥಿಗಳು ನಿರಂತರವಾಗಿ ಕಠಿಣ ಪರಿಶ್ರಮದಿಂದ ಅಭ್ಯಸಿಸಬೇಕು. ಕಾಲೇಜಿನಲ್ಲಿ ಕ್ರಿಯಾಶೀಲ ಕಾರ್ಯಕ್ರಮಗಳನ್ನು ಸದಾ ಹಮ್ಮಿಕೊಳ್ಳಲಾಗುತ್ತಿದೆ. ವಿದ್ಯಾರ್ಥಿಗಳು ಅದರ ಪ್ರಯೋಜನ ಪಡೆಯಬೇಕು ಎಂದರು.
ವಿದ್ಯಾರ್ಥಿಗಳ ಸೂಪ್ತ ಪ್ರತಿಭೆಯನ್ನು ಹೊರ ತೆಗುಯುವುದೇ ಕಾಲೇಜಿನ ಉದ್ದೇಶವಾಗಿರುತ್ತದೆ. ವಿದ್ಯಾರ್ಥಿಗಳು ಅಂಕಗಳನ್ನು ಪಡೆಯುದರ ಜೊತೆಗೆ ನೆಲ, ಜಲ, ಭಾಷೆ ಸಂಸ್ಕೃತಿ ಯನ್ನು ಉಳಿಸಿ ಬೆಳೆಸಬೇಕು. ಎಲ್ಲರೂ ಸಮಾನರೆಂಬ ಭಾವನೆ ಹೊಂದಬೇಕು ಎಂದು ತಿಳಿಸಿದರು.
ಕರ್ನಾಟಕ ಭಾಷಾ ಅಲ್ಪ ಸಂಖ್ಯಾತರ ಒಕ್ಕೂಟದ ಅಧ್ಯಕ್ಷ ಪ್ರತೀಕ್ ಪೊನ್ನಣ್ಣ ಮಾತನಾಡಿ, ವಿದ್ಯಾರ್ಥಿಗಳಿಗೆ ಕೌಶಲ್ಯ ಶಿಕ್ಷಣ ಅಗತ್ಯ ಎಂದ ಅವರು, ಯುವಕರು ರಾಷ್ಟ್ರದ ಏಳಿಗೆಗಾಗಿ ಶ್ರಮಿಸಬೇಕೆಂದು ಕಿವಿಮಾತು ಹೇಳಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಡಾ. ಕೆ.ಸಿ.ದಯಾನಂದ, ವಿದ್ಯಾರ್ಥಿಗಳು ಶಿಸ್ತು ನಿಯಮಗಳನ್ನು ರೂಪಿಸಿಕೊಂಡು ಕಾಲೇಜಿನ ಅಭಿವೃದ್ಧಿಗೆ ಶ್ರಮಿಸಬೇಕೆಂದರು.
ವೇದಿಕೆಯಲ್ಲಿ ಕ್ರೀಡಾ ಸಂಚಾಲಕಿ ರಾಖಿ ಪೂವಣ್ಣ, ಸಾಂಸ್ಕೃತಿಕ ಸಂಚಾಲಕ ಡಾ. ಕೆ.ಬಸವರಾಜು. ಐಕ್ಯೂಎಸಿ ಸಂಚಾಲಕ ನಾಗರಾಜಮೂರ್ತಿ ಹಾಜರಿದ್ದರು.
ಡಾ. ಬಸವರಾಜು ಸ್ವಾಗತಿಸಿದರು. ವೇಣುಗೋಪಾಲ್ ವಂದಿಸಿದರು. ವಿದ್ಯಾರ್ಥಿನಿ ಧನ್ಯ ನಿರೂಪಿಸಿದರು. ಸಭಾ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.










