Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬಾಳೆಲೆ : ರೂ. 27.23 ಕೋಟಿ ವೆಚ್ಚದ ವಿದ್ಯುತ್ ವಿತರಣಾ ಕೇಂದ್ರ ಸ್ಥಾಪನೆಗೆ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*
  • *ಶ್ರೀಮಂಗಲದಲ್ಲಿ ಮಹಿಳಾ ದಿನಾಚರಣೆ : ಮಹಿಳಾ ಸಬಲೀಕರಣವು ಸರ್ಕಾರದ ಪ್ರಮುಖ ಆಶಯ : ಶಾಸಕ ಎ.ಎಸ್.ಪೊನ್ನಣ್ಣ*
  • *ಮಾ.8 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ*
  • *ಮಾ.8 ರಂದು ಬಿಟ್ಟಂಗಾಲದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ*
  • *ಕೊಡವ ಅಭಿವೃದ್ಧಿ ನಿಗಮ ಘೋಷಣೆ : ಯುಕೊ ಸಂಭ್ರಮಾಚರಣೆ : ಶಾಸಕ ಪೊನ್ನಣ್ಣ, ಮಂಜು ಚಿಣ್ಣಪ್ಪಗೆ ಸನ್ಮಾನ
  • *ಜಾತಿಧರ್ಮಗಳ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನಗಳ ಬಗ್ಗೆ ಜಾಗೃತರಾಗಿರಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ*
  • *ತಿತಿಮತಿ : ರೈಲ್ವೆ ಬ್ಯಾರಿಕೆಡ್ ಅಳವಡಿಸುವ ಕಾಮಗಾರಿ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*
  • *ಪ್ರೊ.ಅಶೋಕ ಸಂಗಪ್ಪ ಆಲೂರ ಅವರಿಗೆ ಭಾರತರತ್ನ ಡಾ.ಸರ್.ಎಂ.ವಿಶ್ವೇಶ್ವರಯ್ಯ ವಿಜ್ಞಾನ ಪುರಸ್ಕಾರ*
  • *ಸುಂಟಿಕೊಪ್ಪ : ಮಕ್ಕಳಲ್ಲಿ ಸಾಹಿತ್ಯ ಅಭಿರುಚಿಯನ್ನು ಹೆಚ್ಚಿಸಬೇಕು : ಎಸ್.ಐ.ಮುನಿರ್‍ಅಹ್ಮದ್*
  • *ವಿರಾಜಪೇಟೆಯ ಸೈಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಎಸ್ ವಾರ್ಷಿಕ ಶಿಬಿರದಲ್ಲಿ ವಿದ್ಯಾರ್ಥಿಗಳಿಂದ ಗ್ರಾಮ ಸ್ವಚ್ಛತಾ ಅಭಿಯಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಡಿಕೇರಿ ದಸರಾ ಪ್ರಾಧಿಕಾರ ರಚಿಸಿ ಬಜೆಟ್ ನಲ್ಲಿ ಅನುದಾನ ಮೀಸಲಿರಿಸಿ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಡಿಕೇರಿ ದಸರಾ ಪ್ರಾಧಿಕಾರ ರಚಿಸಿ ಬಜೆಟ್ ನಲ್ಲಿ ಅನುದಾನ ಮೀಸಲಿರಿಸಿ*

ನವೆಂಬರ್ 6, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.6 : ಸುಮಾರು 150 ವರ್ಷಗಳ ಇತಿಹಾಸ ಹೊಂದಿರುವ ವಿಶ್ವ ವಿಖ್ಯಾತ ಮಡಿಕೇರಿ ದಸರಾ ಮಹೋತ್ಸವವನ್ನು ಮತ್ತಷ್ಟು ಅರ್ಥಪೂರ್ಣ ಮತ್ತು ವಿಜೃಂಭಣೆಯಿಂದ ನಡೆಸಲು ಬಜೆಟ್ ನಲ್ಲಿ ಸರಕಾರ ಅನುದಾನ ಮೀಸಲಿಡಬೇಕು. ಇದಕ್ಕಾಗಿ ದಸರಾ ಪ್ರಾಧಿಕಾರ ರಚಿಸಬೇಕು ಎಂದು ಮಡಿಕೇರಿ ದಸರಾ ಸಮಿತಿಯ ಕಾರ್ಯಾಧ್ಯಕ್ಷ ಕೆ.ಎಂ.ಗಣೇಶ್ ಒತ್ತಾಯಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಬಾರಿಯ ದಸರಾ ಮಹೋತ್ಸವ ಜಿಲ್ಲೆಯ ಶಾಸಕದ್ವಯರ ಸಂಪೂರ್ಣ ಸಹಕಾರದಿಂದ ಅದ್ದೂರಿಯಾಗಿ ನಡೆದು ಜನ ಮೆಚ್ಚುಗೆಗೆ ಪಾತ್ರವಾಗಿದೆ. ಮುಂದಿನ ವರ್ಷಗಳಲ್ಲಿ ದಸರಾ ಆಚರಣೆಗೆ ಬಜೆಟ್ ನಲ್ಲೇ ಹಣವನ್ನು ಮೀಸಲಿಟ್ಟರೆ ದಸರಾ ಸಮಿತಿಗಳ ಕಾರ್ಯ ಸುಗಮವಾಗಲಿದೆ ಎಂದು ಅಭಿಪ್ರಾಯಪಟ್ಟರು.
ವರ್ಷದಿಂದ ವರ್ಷಕ್ಕೆ ದಸರಾ ಆಚರಣೆಯ ಖರ್ಚು ಹೆಚ್ಚಾಗುತ್ತಿದೆ, ಜನರಿಂದ ವಂತಿಗೆ ಸಂಗ್ರಹಿಸಲು ಸಾಧ್ಯವಾಗುತ್ತಿಲ್ಲ. ಪ್ರತಿವರ್ಷ ಅನುದಾನಕ್ಕಾಗಿ ಸರಕಾರಕ್ಕೆ ಮನವಿ ಸಲ್ಲಿಸಬೇಕಾಗಿದೆ. ಬಿಡುಗಡೆಯಾಗುತ್ತಿರುವ ಅನುದಾನ ದಸರಾ ಸಮಿತಿ, ದಶಮಂಟಪ ಸಮಿತಿಗಳು ಹಾಗೂ ಕರಗೋತ್ಸವಗಳಿಗೆ ಸಾಕಾಗುತ್ತಿಲ್ಲ. ಲಕ್ಷಾಂತರ ಹಣ ಖರ್ಚು ಮಾಡಿ 10 ದಿನಗಳ ಕಾಲ ಹಬ್ಬವನ್ನು ಆಚರಿಸಲಾಗುತ್ತಿದ್ದು, ರಾಜ್ಯ ಮಾತ್ರವಲ್ಲದೆ ಹೊರ ರಾಜ್ಯದಿಂದಲೂ ಹೆಚ್ಚಿನ ಸಂಖ್ಯೆಯಲ್ಲಿ ಜನರು ಜಿಲ್ಲೆಗೆ ಬರುತ್ತಿದ್ದಾರೆ. ಮೈಸೂರು ದಸರಾ ಹಗಲಿನಲ್ಲಿ ನಡೆದು ವಿಶ್ವ ವಿಖ್ಯಾತವಾಗಿದೆ, ಮಡಿಕೇರಿ ದಸರಾ ದಶಮಂಟಪಗಳ ರಾತ್ರಿಯ ಶೋಭಾಯಾತ್ರೆಯಿಂದ ಪ್ರಸಿದ್ಧಿಯನ್ನು ಪಡೆದಿದೆ.
ಮಡಿಕೇರಿ ದಸರಾದಂತೆ ಗೋಣಿಕೊಪ್ಪ ದಸರಾ ಕೂಡ ವಿಜೃಂಭಣೆಯಿಂದ ನಡೆಯುತ್ತಿದೆ. ಆದ್ದರಿಂದ ಈ ಎರಡೂ ದಸರಾ ಮಹೋತ್ಸವಗಳಿಗೆ ಬಜೆಟ್ ನಲ್ಲಿ ಹಣ ಮೀಸಲಿಡುವ ಅಗತ್ಯವಿದ್ದು, ಪ್ರಾಧಿಕಾರ ರಚನೆ ಅನಿವಾರ್ಯವಾಗುತ್ತದೆ. ಈ ಪ್ರಕ್ರಿಯೆಗೆ ಮುಖ್ಯಮಂತ್ರಿಗಳು ಹಾಗೂ ಉಪ ಮುಖ್ಯಮಂತ್ರಿಗಳು ಚಾಲನೆ ನೀಡಬೇಕು. ಜಿಲ್ಲೆಯ ಇಬ್ಬರು ಶಾಸಕರು ಪ್ರಾಧಿಕಾರ ರಚನೆಯ ಕುರಿತು ಸರಕಾರದೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.
::: ಸಂಪ್ರದಾಯ ಮುರಿಯಬಾರದು :::
ಮಡಿಕೇರಿ ದಸರಾಕ್ಕೆ ತನ್ನದೇ ಆದ ಆಚಾರ, ವಿಚಾರ, ಸಂಪ್ರದಾಯವಿದೆ, ವರ್ಷ ಕಳೆದಂತೆ ಇದರ ಆಚರಣೆ ಮತ್ತಷ್ಟು ಅರ್ಥಗರ್ಭಿತವಾಗಬೇಕೆ ಹೊರತು ಸಂಪ್ರದಾಯವನ್ನು ಮುರಿಯಬಾರದು. ದಶಮಂಟಪಗಳು ನಗರದ ಪ್ರಮುಖ ರಸ್ತೆಗಳಲ್ಲಿ ಶೋಭಾಯಾತ್ರೆ ನಡೆಸುವುದು ಖಡ್ಡಾಯವಾಗಿತ್ತು. ಸೂರ್ಯೋದಯಕ್ಕೂ ಮೊದಲು ಮಹದೇವಪೇಟೆ ರಸ್ತೆ ಮೂಲಕ ಸಾಗಿ ಬನ್ನಿ ಮಂಟಪದಲ್ಲಿ ಬನ್ನಿ ಕಡಿದು ಗಣಪತಿ ಬೀದಿಯಲ್ಲಿ ಮರಳುತ್ತಿದ್ದವು. ಮಂಟಪದಲ್ಲಿರುವ ಕಳಶಕ್ಕೆ ನಗರದ ಜನ ಪೂಜೆ ಸಲ್ಲಿಸುತ್ತಿದ್ದರು.
ಆದರೆ ಇತ್ತೀಚಿನ ವರ್ಷಗಳಲ್ಲಿ ಮಂಟಪಗಳು ಶೋಭಾಯಾತ್ರೆ ನಡೆಸದೆ ನಿಂತಲ್ಲೇ ನಿಂತಿರುತ್ತವೆ. ದಸರಾ ವೈಭವವನ್ನು ಕಣ್ತುಂಬಿಕೊಳ್ಳಲು ಎಲ್ಲಾ ಜನರಿಗೆ ಸಾಧ್ಯವಾಗುತ್ತಿಲ್ಲ ಎಂದು ಗಣೇಶ್ ಬೇಸರ ವ್ಯಕ್ತಪಡಿಸಿದರು.
ಡಿಜೆ ಧ್ವನಿವರ್ಧಕಗಳಿಂದ ದುಷ್ಪರಿಣಾಮ ಉಂಟಾಗುತ್ತಿದೆ, ಇದರ ಬದಲು ಸ್ಥಳೀಯ ಕಲಾವಿದರಿಗೆ ಅವಕಾಶ ನೀಡಲಿ ಎಂದು ಅಭಿಪ್ರಾಯಪಟ್ಟರು.
ಮತ್ತೊಬ್ಬ ಮಾಜಿ ಕಾರ್ಯಾಧ್ಯಕ್ಷ ಎಂ.ಪಿ.ಕೃಷ್ಣರಾಜು ಮಾತನಾಡಿ ಮಡಿಕೇರಿ ದಸರಾದ ಗತವೈಭವದ ಉಳಿವಿಗೆ ಸರಕಾರದ ಸಹಕಾರ ಅಗತ್ಯ ಎಂದರು.
ಮಡಿಕೇರಿ ದಸರಾ ಸಾಗಿ ಬಂದ ಹಾದಿಯನ್ನು ವಿವರಿಸಿದರು. ಸುದ್ದಿಗೋಷ್ಠಿಯಲ್ಲಿ ದಸರಾ ಸಮಿತಿಗಳಲ್ಲಿ ಸಕ್ರಿಯರಾಗಿರುವ ಡಿ.ಕೆ.ಮೋಹನ್, ಆರ್.ಎಸ್.ಬಾಬು ನಾಯ್ಡು, ಬೈಶ್ರೀ ಪ್ರಕಾಶ್ ಹಾಗೂ ಎನ್.ಸಿ.ಸುನೀಲ್ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಬಾಳೆಲೆ : ರೂ. 27.23 ಕೋಟಿ ವೆಚ್ಚದ ವಿದ್ಯುತ್ ವಿತರಣಾ ಕೇಂದ್ರ ಸ್ಥಾಪನೆಗೆ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*

ಮಾರ್ಚ್ 7, 2026

*ಶ್ರೀಮಂಗಲದಲ್ಲಿ ಮಹಿಳಾ ದಿನಾಚರಣೆ : ಮಹಿಳಾ ಸಬಲೀಕರಣವು ಸರ್ಕಾರದ ಪ್ರಮುಖ ಆಶಯ : ಶಾಸಕ ಎ.ಎಸ್.ಪೊನ್ನಣ್ಣ*

ಮಾರ್ಚ್ 7, 2026

*ಮಾ.8 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ*

ಮಾರ್ಚ್ 7, 2026

*ಶ್ರೀಮಂಗಲದಲ್ಲಿ ಮಹಿಳಾ ದಿನಾಚರಣೆ : ಮಹಿಳಾ ಸಬಲೀಕರಣವು ಸರ್ಕಾರದ ಪ್ರಮುಖ ಆಶಯ : ಶಾಸಕ ಎ.ಎಸ್.ಪೊನ್ನಣ್ಣ*

ಮಾರ್ಚ್ 7, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.7 NEWS DESK : ಆಧುನಿಕ ಸಮಾಜದಲ್ಲಿ ಮಹಿಳೆಯರಿಗೆ ಅತ್ಯಂತ ಪ್ರಮುಖವಾದ ಸ್ಥಾನವಿದೆ. ಮಹಿಳೆಯರು ಸಮಾಜದ ಮುನ್ನೆಲೆಗೆ ಬಂದಲ್ಲಿ…

*ಮಾ.8 ರಂದು ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ*

ಮಾರ್ಚ್ 7, 2026

*ಮಾ.8 ರಂದು ಬಿಟ್ಟಂಗಾಲದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ*

ಮಾರ್ಚ್ 7, 2026

*ಕೊಡವ ಅಭಿವೃದ್ಧಿ ನಿಗಮ ಘೋಷಣೆ : ಯುಕೊ ಸಂಭ್ರಮಾಚರಣೆ : ಶಾಸಕ ಪೊನ್ನಣ್ಣ, ಮಂಜು ಚಿಣ್ಣಪ್ಪಗೆ ಸನ್ಮಾನ

ಮಾರ್ಚ್ 7, 2026

*ಜಾತಿಧರ್ಮಗಳ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನಗಳ ಬಗ್ಗೆ ಜಾಗೃತರಾಗಿರಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ*

ಮಾರ್ಚ್ 7, 2026

*ತಿತಿಮತಿ : ರೈಲ್ವೆ ಬ್ಯಾರಿಕೆಡ್ ಅಳವಡಿಸುವ ಕಾಮಗಾರಿ ಶಾಸಕ ಎ.ಎಸ್.ಪೊನ್ನಣ್ಣ ಚಾಲನೆ*

ಮಾರ್ಚ್ 7, 2026

*ಪ್ರೊ.ಅಶೋಕ ಸಂಗಪ್ಪ ಆಲೂರ ಅವರಿಗೆ ಭಾರತರತ್ನ ಡಾ.ಸರ್.ಎಂ.ವಿಶ್ವೇಶ್ವರಯ್ಯ ವಿಜ್ಞಾನ ಪುರಸ್ಕಾರ*

ಮಾರ್ಚ್ 7, 2026

*ಸುಂಟಿಕೊಪ್ಪ : ಮಕ್ಕಳಲ್ಲಿ ಸಾಹಿತ್ಯ ಅಭಿರುಚಿಯನ್ನು ಹೆಚ್ಚಿಸಬೇಕು : ಎಸ್.ಐ.ಮುನಿರ್‍ಅಹ್ಮದ್*

ಮಾರ್ಚ್ 7, 2026

*ವಿರಾಜಪೇಟೆಯ ಸೈಂಟ್ ಆನ್ಸ್ ಪದವಿ ಕಾಲೇಜಿನ ಎನ್ ಎಸ್ ಎಸ್ ಎಸ್ ವಾರ್ಷಿಕ ಶಿಬಿರದಲ್ಲಿ ವಿದ್ಯಾರ್ಥಿಗಳಿಂದ ಗ್ರಾಮ ಸ್ವಚ್ಛತಾ ಅಭಿಯಾನ*

ಮಾರ್ಚ್ 7, 2026

*ಹವ್ಯಕ ಅಕಾಡೆಮಿ, ಕೊಡವ ನಿಗಮ : ಸಾಂಸ್ಕೃತಿಕ ಪರಂಪರೆಯ ರಕ್ಷಣೆ ಮತ್ತು ಸಮುದಾಯದ ಅಭಿವೃದ್ಧಿಯನ್ನು ಉತ್ತೇಜಿಸುವ ಮಹತ್ವದ ಹೆಜ್ಜೆ : ಸರಕಾರದ ಕ್ರಮವನ್ನು ಸ್ವಾಗತಿಸಿದ ಸಿಎನ್‌ಸಿ*

ಮಾರ್ಚ್ 7, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.