ವಿರಾಜಪೇಟೆ ನ.6 : ವಿದ್ಯಾರ್ಥಿಗಳು ಕೌಶಲ್ಯ ಅಭಿವೃದ್ಧಿ ತರಬೇತಿಯನ್ನು ಪಡೆಯುದರ ಮೂಲಕ ಉದ್ಯೋಗ ಪಡೆಯುವಂತಾಗಬೇಕು ಎಂದು ವಿರಾಜಪೇಟೆ ಸಂತ ಅನ್ನಮ್ಮ ವಿದ್ಯಾಸಂಸ್ಥೆಗಳ ವ್ಯವಸ್ಥಾಪಕ ರೆ.ಫಾ. ಐಸಾಕ್ ರತ್ನಕರ್ ಅಭಿಪ್ರಾಯಪಟ್ಟರು.
ಮುಂಬೈ ಯ ಬಜಾಜ್ ಫಿಂಸೆರ್ವ್ ಕಂಪನಿ ವತಿಯಿಂದ ವಿರಾಜಪೇಟೆ ಪದವಿ ಕಾಲೇಜಿನ ಅಂತಿಮ ಪದವಿ ವಿದ್ಯಾರ್ಥಿಗಳಿಗೆ ನಡೆದ ಸರ್ಟಿಫಿಕೇಟ್ ಕೋರ್ಸ್ ನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕೌಶಲ್ಯವು ಮಹತ್ವದ್ದಾಗಿದ್ದು, ವಿದ್ಯಾರ್ಥಿಗಳು ಉದ್ಯೋಗ ಕೌಶಲ್ಯ ತರಬೇರಿ ಪಡೆಯಬೇಕು ಎಂದರು. ಆ ಮೂಲಕ ಸೂಕ್ತ ಉದ್ಯೋಗದ ಆಯ್ಕೆ ಮಾಡಬಹುದು ಎಂದು ತಿಳಿಸಿದರು.
ಪ್ರಾಂಶುಪಾಲೆ ತೃಪ್ತಿ ಬೋಪಣ್ಣ ಮಾತನಾಡಿ, ಕೌಶಲ್ಯ ಆಧಾರಿತ ಉದ್ಯೋಗ ಇಂದು ಅತೀ ಮುಖ್ಯವಾಗಿದ್ದು, ವಿದ್ಯಾರ್ಥಿಗಳು ತರಬೇತಿ ಪಡೆಯುವಂತಾಗಲು ಈ ಕಾರ್ಯಕ್ರಮವನ್ನು ಎಂ. ಓ. ಯು ಅಡಿಯಲ್ಲಿ ಆಯೋಜಿಸಲಾಗಿದೆ ಎಂದು ಹೇಳಿದರು.
ಈ ಸಂದರ್ಭ ತರಬೇತುದಾರೆ ಬಜಾಜ್ ಫಿಂಸೆರ್ವ್ ಕಂಪನಿಯ ಪ್ರಾಜೆಕ್ಟ್ ಮ್ಯಾನೇಜರ್ ರಶ್ಮಿ ಮನ್ಸುಖಾನಿ, ಐಕ್ಯೂಎಸಿ ಸಂಚಾಲಕಿ ಹೇಮ, ವಾಣಿಜ್ಯ ವಿಭಾಗ ಮುಖ್ಯಸ್ಥೆ ದೃಶ್ಯ ಹಾಜರಿದ್ದರು. ವಿದ್ಯಾರ್ಥಿನಿ ದಿಯಾ ನಿರೂಪಿಸಿದರು.
ಅಂತಿಮ ಪದವಿ ವಿದ್ಯಾರ್ಥಿಗಳಿಗೆ ಬ್ಯಾಂಕಿಂಗ್, ಹಣಕಾಸು, ಇನ್ಸೂರೆನ್ಸ್ ವಿಷಯದ ಬಗ್ಗೆ ಪದವಿ ವಿದ್ಯಾರ್ಥಿಗಳಿಗೆ ಈ ಸರ್ಟಿಫಿಕೇಟ್ ಕೋರ್ಸ್ ನಡೆಯಿತು.









