ಮಡಿಕೇರಿ ನ.6 : ಪ್ರಸಕ್ತ (2023-24) ಸಾಲಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ವೃತ್ತಿ ರಂಗಭೂಮಿ ಕಾಯಕಲ್ಪ ಯೋಜನೆಯಡಿ ಧನಸಹಾಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಕನಿಷ್ಠ 5 ವರ್ಷಗಳ ನೋಂದಾಯಿತ ವೃತ್ತಿ ನಾಟಕ ಕಂಪನಿಗಳು ಅರ್ಜಿ ಸಲ್ಲಿಸಬಹುದು. ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ (ನಿಗದಿತ ಅರ್ಜಿ ನಮೂನೆ ಹಾಗೂ ಮಾರ್ಗಸೂಚಿಯನ್ನು ವೆಬ್ಸೈಟ್ kannadasiri.karnataka.gov.in ನಲ್ಲಿ ಪಡೆಯಬಹುದು) ಅಗತ್ಯ ದಾಖಲೆಗಳನ್ನು ಲಗತ್ತಿಸಿ, ಡಿಸೆಂಬರ್, 7 ರೊಳಗೆ ಅರ್ಜಿಯನ್ನು ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು ಇವರಿಗೆ ಸಲ್ಲಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರಾದ ಧರಣಿದೇವಿ ಮಾಲಗತ್ತಿ ತಿಳಿಸಿದ್ದಾರೆ.









