Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾರತ vs ಪಾಕಿಸ್ತಾನ ಪಂದ್ಯಕ್ಕೆ ಮಳೆ ಭೀತಿ! ಶ್ರೀಲಂಕಾ ಹವಾಮಾನ ಇಲಾಖೆ ನೀಡಿದ ಆ ಒಂದು ಎಚ್ಚರಿಕೆ ಅಭಿಮಾನಿಗಳಿಗೆ ಬಿಗ್ ಶಾಕ್!*
  • *ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*
  • *ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಪೌರ ಕಾರ್ಮಿಕರ ದಿನಾಚರಣೆ : ಪೌರ ಕಾರ್ಮಿಕರಿಗೆ ನಿವೇಶನ, ವಸತಿ ಸೇರಿದಂತೆ ಅಗತ್ಯ ಸೌಲಭ್ಯ ಕಲ್ಪಿಸಲು ಪ್ರಯತ್ನ : ಶಾಸಕ ಡಾ.ಮಂತರ್ ಗೌಡ*
ಇತ್ತೀಚಿನ ಸುದ್ದಿಗಳು

*ಪೌರ ಕಾರ್ಮಿಕರ ದಿನಾಚರಣೆ : ಪೌರ ಕಾರ್ಮಿಕರಿಗೆ ನಿವೇಶನ, ವಸತಿ ಸೇರಿದಂತೆ ಅಗತ್ಯ ಸೌಲಭ್ಯ ಕಲ್ಪಿಸಲು ಪ್ರಯತ್ನ : ಶಾಸಕ ಡಾ.ಮಂತರ್ ಗೌಡ*

November 7, 20233 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ನ.7 : ಪೌರ ಕಾರ್ಮಿಕರಿಗೆ ನಿವೇಶನ, ವಸತಿ ಸೇರಿದಂತೆ ಸರ್ಕಾರದಿಂದ ಅಗತ್ಯ ಮೂಲ ಸೌಲಭ್ಯಗಳನ್ನು ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ತಿಳಿಸಿದ್ದಾರೆ.
ಮಡಿಕೇರಿ ನಗರಸಭೆ ವತಿಯಿಂದ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ‘ಪೌರ ಕಾರ್ಮಿಕರ’ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಪೌರಕಾರ್ಮಿಕರಿಗಾಗಿ ಸರ್ಕಾರ ಹಲವು ಸೌಲಭ್ಯಗಳನ್ನು ಕಲ್ಪಿಸಿದ್ದು, ಅವುಗಳನ್ನು ಬಳಸಿಕೊಂಡು ಉತ್ತಮ ಜೀವನ ನಡೆಸಬೇಕು. ತಾವು ಕರ್ತವ್ಯ ಸಂದರ್ಭದಲ್ಲಿ ಸೂಕ್ತ ರಕ್ಷಣಾ ಸಾಮಾಗ್ರಿಗಳನ್ನು ಬಳಸಿ ಕಾರ್ಯನಿರ್ವಹಿಸಬೇಕು ಎಂದು ಶಾಸಕರು ಸಲಹೆ ನೀಡಿದರು.
ಪೌರಕಾರ್ಮಿಕರು ರಜೆ ಕೇಳಿದ್ದಲ್ಲಿ ನೀಡಬೇಕು. ಯಾವುದೇ ಕಾರಣಕ್ಕೂ ಸತಾಯಿಸಬಾರದು. ಆರೋಗ್ಯದ ಕಡೆ ಹೆಚ್ಚಿನ ಗಮನಹರಿಸುವುದರ ಜೊತೆಗೆ, ಮಕ್ಕಳ ವಿದ್ಯಾಭ್ಯಾಸಕ್ಕೆ ಒತ್ತು ನೀಡಬೇಕು ಎಂದು ಡಾ.ಮಂತರ್ ಗೌಡ ಕರೆ ನೀಡಿದರು.
ಸಾರ್ವಜನಿಕ ಸ್ಥಳಗಳಲ್ಲಿ ಕಸವನ್ನು ಎಲ್ಲೆಂದರಲ್ಲಿ ಬಿಸಾಡುವವರಿಂದ ದಂಡ ವಸೂಲಿ ಮಾಡಬೇಕು. ಈ ರೀತಿ ಆದಲ್ಲಿ ಪ್ರತಿಯೊಬ್ಬರೂ ಎಚ್ಚರವಹಿಸಲು ಸಾಧ್ಯ ಎಂದು ಶಾಸಕರಾದ ಡಾ.ಮಂತರ್ ಗೌಡ ಅವರು ನುಡಿದರು.
ನಗರಸಭೆಯಲ್ಲಿ ಓಬಳಿಯಂತ ಪೌರಕಾರ್ಮಿಕರು ನಾಲ್ಕು ದಶಕಗಳ ಕಾಲ ದುಡಿದಿದ್ದಾರೆ. ಅವರ ಆರೋಗ್ಯಕ್ಕೆ ಅಗತ್ಯ ನೆರವು ನೀಡಬೇಕು ಎಂದ ಶಾಸಕರು, ಓಬಳಿ ಅವರಿಗೆ ವೈಯಕ್ತಿಕವಾಗಿ 10 ಸಾವಿರ ರೂ.ವನ್ನು ಇದೇ ಸಂದರ್ಭದಲ್ಲಿ ನೀಡಿದರು. ಜೊತೆಗೆ ಹುಟ್ಟುಹಬ್ಬದ ಪ್ರಯುಕ್ತ ಪೌರಕಾರ್ಮಿಕರಿಗೆ ಶಾಸಕರು ವಸ್ತ್ರ ವಿತರಿಸಿದರು.
ನಗರಸಭೆ ಅಧ್ಯಕ್ಷರಾದ ಅನಿತಾ ಪೂವಯ್ಯ ಅವರು ಮಾತನಾಡಿ ಪೌರಕಾರ್ಮಿಕರು ಮಡಿಕೇರಿ ನಗರದ ಕಿರೀಟವಿದ್ದಂತೆ, ಪೌರಕಾರ್ಮಿಕರು ಒಂದು ದಿನ ಸ್ವಚ್ಛತಾ ಕಾರ್ಯ ಕೈಗೊಳ್ಳದಿದ್ದಲ್ಲಿ ಊಹಿಸಿಕೊಳ್ಳುವುದು ಕಷ್ಟಸಾಧ್ಯ. ಆದ್ದರಿಂದ ಪೌರಕಾರ್ಮಿಕರನ್ನು ಗೌರವಿಸಬೇಕು ಎಂದರು.
ಮಡಿಕೇರಿ ದಸರಾ ಸೇರಿದಂತೆ ಹಲವು ಸಂದರ್ಭಗಳಲ್ಲಿ ಪೌರಕಾರ್ಮಿಕರು ಹೆಚ್ಚಿನ ಕೆಲಸ ನಿರ್ವಹಿಸಿದ್ದಾರೆ. ಮಡಿಕೇರಿ ನಗರದ ಪೌರಕಾರ್ಮಿಕರು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು ಇದೇ ಸಂದರ್ಭದಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದರು.
ಪೌರಕಾರ್ಮಿಕರಿಗೆ ಸರ್ಕಾರದಿಂದ ದೊರೆಯುವ ಸೌಲಭ್ಯಗಳನ್ನು ತಲುಪಿಸಲು ಪ್ರಯತ್ನಿಸಲಾಗುತ್ತಿದೆ. ಗೃಹಭಾಗ್ಯ ಯೋಜನೆಯಡಿ ಮನೆ ನಿರ್ಮಿಸಿಕೊಡುವ ಕೆಲಸ ಆಗಬೇಕಿದೆ. ಎಲ್ಲಾ ಪೌರಕಾರ್ಮಿಕರಿಗೂ ವಸತಿ ಸೌಲಭ್ಯ ಕಲ್ಪಿಸುವುದು ಆದ್ಯತೆಯಾಗಿದ್ದು, ಆ ನಿಟ್ಟಿನಲ್ಲಿ ಜಿಲ್ಲಾಡಳಿತದಿಂದ ನಿವೇಶನ ಒದಗಿಸುವಂತಾಗಬೇಕು ಎಂದು ಕೋರಿದರು.
ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಮಾತನಾಡಿ ನಗರ, ಪಟ್ಟಣಗಳು ಸ್ವಚ್ಛವಾಗಿರಲು ಪೌರಕಾರ್ಮಿಕರ ಕರ್ತವ್ಯ ನಿಷ್ಠೆ ಹೆಚ್ಚಿನದ್ದಾಗಿದೆ. ಮಡಿಕೇರಿ ನಗರದಲ್ಲಿ ಉತ್ತಮ ವಾತಾವರಣ ಇರಲು ಪೌರಕಾರ್ಮಿಕರ ಪಾತ್ರ ಹೆಚ್ಚಿನದ್ದಾಗಿದೆ ಎಂದರು.
ದಸರಾ ಸಮಯದಲ್ಲಿ ಹೆಚ್ಚಿನ ಕೆಲಸವನ್ನು ಪೌರಕಾರ್ಮಿಕರು ನಿರ್ವಹಿಸಿದ್ದಾರೆ. ಮುಂದಿನ ಗಣರಾಜ್ಯೋತ್ಸವ ಸಂದರ್ಭದಲ್ಲಿ ಪೌರಕಾರ್ಮಿಕರನ್ನು ಗೌರವಿಸುವಂತಾಗಬೇಕು ಎಂದು ಹೇಳಿದರು.
‘ನಗರಸಭೆ ಉಪಾಧ್ಯಕ್ಷರಾದ ಸವಿತಾ ರಾಕೇಶ್ ಅವರು ಮಾತನಾಡಿ ಚಳಿ, ಮಳೆ, ಗಾಳಿಯನ್ನು ಲೆಕ್ಕಿಸದೆ ಪೌರಕಾರ್ಮಿಕರು ಪ್ರತಿನಿತ್ಯ ಬೆಳಗಿನ ಜಾವ ಕರ್ತವ್ಯ ನಿರ್ವಹಿಸುವುದು ಶ್ಲಾಘನೀಯ ಕಾರ್ಯವಾಗಿದೆ ಎಂದು ಹೇಳಿದರು.’
ನಗರಸಭೆ ಸದಸ್ಯರಾದ ರಾಜೇಶ್ ಯಲ್ಲಪ್ಪ ಅವರು ಮಾತನಾಡಿ ಪೌರಕಾರ್ಮಿಕರಿಗೆ ಶೀಘ್ರ ವಸತಿ ಸೌಲಭ್ಯ ಕಲ್ಪಿಸಬೇಕು. ಪೌರಕಾರ್ಮಿಕರ ಜೀವನ ಮಟ್ಟ ಸುಧಾರಿಸಬೇಕು ಎಂದರು.
ಪೌರಾಯುಕ್ತರಾದ ವಿಜಯ್ ಅವರು ಮಾತನಾಡಿ ‘ಪೌರಕಾರ್ಮಿಕರು ಸ್ವಚ್ಛತಾ ಸೇನಾನಿಗಳು’ ಎಂಬುದನ್ನು ಯಾರೂ ಸಹ ಮರೆಯಬಾರದು. ನಗರದ ನೈರ್ಮಲ್ಯ, ಆರೋಗ್ಯ ಹಾಗೂ ಶುಚಿತ್ವ ಕಾಪಾಡುವಲ್ಲಿ ಪೌರಕಾರ್ಮಿಕರ ಕಾರ್ಯ ಹೆಚ್ಚಿನದ್ದಾಗಿದೆ. ಪೌರಕಾರ್ಮಿಕರು ಕೆಲಸದಿಂದ ಒಂದು ದಿನ ದೂರ ಉಳಿದರೆ ಪರಿಸ್ಥಿತಿಯನ್ನು ಊಹಿಸಿಕೊಳ್ಳುವುದು ಕಷ್ಟಸಾಧ್ಯ ಎಂದರು.
ಪೌರಕಾರ್ಮಿಕರ ಕೆಲಸದ ಸಂದರ್ಭದಲ್ಲಿ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಲಾಗಿದೆ. ಕಾಲ ಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಲಾಗುತ್ತದೆ. ಮಕ್ಕಳ ವಿದ್ಯಾಭ್ಯಾಸಕ್ಕೆ ಸಹಕಾರ ನೀಡಲಾಗುತ್ತಿದೆ ಎಂದು ಪೌರಾಯುಕ್ತರು ತಿಳಿಸಿದರು.
ಮಡಿಕೇರಿ ನಗರಸಭೆ ಅಭಿವೃದ್ಧಿಯಲ್ಲಿ ಪೌರಕಾರ್ಮಿಕರ ಪಾತ್ರ ಹೆಚ್ಚಿನದ್ದಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲಿ ಒಂದು ಕೋಟಿ ರೂ. ತೆರಿಗೆ ಸಂಗ್ರಹವಾಗಿರುವುದು ವಿಶೇಷವಾಗಿದೆ. ಪೌರಕಾರ್ಮಿಕರು ತಮ್ಮ ಹಕ್ಕುಗಳನ್ನು ಪಡೆಯುವುದರ ಜೊತೆಗೆ ಕರ್ತವ್ಯವನ್ನು ಮರೆಯಬಾರದು ಎಂದು ಪೌರಾಯುಕ್ತರಾದ ಕಿವಿಮಾತು ಹೇಳಿದರು.

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ 22 ಖಾಯಂ ಪೌರಕಾರ್ಮಿಕರಿದ್ದು, 18 ಮಂದಿ ಹೊರಗುತ್ತಿಗೆಯಡಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಮಡಿಕೇರಿಯಲ್ಲಿ 6 ಮಂದಿ ಪೌರಕಾರ್ಮಿಕರನ್ನು ಖಾಯಂ ಮಾಡಲಾಗಿದೆ ಎಂದು ವಿವರಿಸಿದರು.
ಖಾಯಂ ಪೌರಕಾರ್ಮಿಕರಿಗೆ ತಲಾ 7 ಸಾವಿರ ವಿಶೇಷ ಭತ್ಯೆ ಚೆಕ್ ವಿತರಿಸಲಾಯಿತು. ಎಸ್‍ಎಸ್‍ಎಲ್‍ಸಿ, ಪಿಯುಸಿ ಮತ್ತು ಪದವಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸಲಾಯಿತು. ಕ್ರೀಡಾಕೂಟದಲ್ಲಿ ಪಾಲ್ಗೊಂಡು ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.
ನಗರಸಭೆ ಸದಸ್ಯರಾದ ಮಹೇಶ್ ಜೈನಿ ಅವರು ಮಾತನಾಡಿದರು. ಶಾಸಕರಾದ ಡಾ.ಮಂತರ್ ಗೌಡ ಮತ್ತು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರಿಗೆ ಇದೇ ಸಂದರ್ಭದಲ್ಲಿ ಪೌರ ಸನ್ಮಾನ ನೀಡಿ ಗೌರವಿಸಲಾಯಿತು.
ನಗರಸಭೆ ಸದಸ್ಯರಾದ ಉಮೇಶ್ ಸುಬ್ರಮಣಿ, ಚಿತ್ರಾವತಿ, ಕಲಾವತಿ, ಉಷಾ, ಶ್ವೇತಾ, ಸಬಿತಾ, ಅರುಣ್ ಶೆಟ್ಟಿ, ಶಾರದ, ಚಂದ್ರಶೇಖರ್, ಪೌರ ಸೇವಾ ನೌಕರರ ಜಿಲ್ಲಾಧ್ಯಕ್ಷರಾದ ಪಿ.ಕೆ.ಸತೀಶ್, ತಾಲ್ಲೂಕು ಅಧ್ಯಕ್ಷರಾದ ಎಸ್.ಕೆ.ಸತ್ಯನಾರಾಯಣ, ಇತರರು ಇದ್ದರು.
ಪರಿಸರ ಎಂಜಿನಿಯರ್ ಸೌಮ್ಯ ನಿರೂಪಿಸಿದರು. ಸಹಾಯಕ ಎಂಜಿನಿಯರ್ ಹೇಮಂತ್ ಕುಮಾರ್ ಸ್ವಾಗತಿಸಿದರು. ನಗರಸಭೆ ಕಂದಾಯ ಅಧಿಕಾರಿ ತಾಹೀರ್ ವಂದಿಸಿದರು.

Share. Facebook Twitter Pinterest LinkedIn Tumblr Email WhatsApp
Previous Article*ನ.10 ರಂದು ರಾಷ್ಟ್ರೀಯ ಆಯುರ್ವೇದ ದಿನ ಆಚರಣೆ*
Next Article *ಮಡಿಕೇರಿಯಲ್ಲಿ ಭಾರತ್ ಸ್ಕೌಟ್ಸ್ ಧ್ವಜ ದಿನಾಚರಣೆ : ಸಮಾಜದ ಅಭಿವೃದ್ಧಿ ಬಗ್ಗೆ ಪ್ರತಿಯೊಬ್ಬರಲ್ಲಿಯೂ ಆತ್ಮವಲೋಕನ ಅಗತ್ಯ : ನ್ಯಾಯಾಧೀಶ ಹೆಚ್.ಸಿ.ಶ್ಯಾಮ್ ಪ್ರಸಾದ್*

Website design development company services in Mangalore

Forex Trading Teacher in India

Related Posts

*ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*

February 14, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

ಬೆಂಗಳೂರು: ಸಿಲಿಕಾನ್ ಸಿಟಿಯ ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2026ರ ಐಪಿಎಲ್ (IPL) ಪಂದ್ಯಗಳನ್ನು…

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.