ಸೋಮವಾರಪೇಟೆ ನ.18 : ಸೋಮವಾರಪೇಟೆ ಜೇಸಿಐ ಪುಷ್ಪಗಿರಿ ಸಂಸ್ಥೆಯ ವತಿಯಿಂದ ನಂಜಮ್ಮ ಸಮುದಾಯ ಭವನದಲ್ಲಿ ನಡೆಸಲಾಗುತ್ತಿರುವ ಜೇಸಿ ಸಪ್ತಾಹದ ಅಂಗವಾಗಿ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರಿಗೆ ಚದುರಂಗ ಸ್ಪರ್ಧೆ ನಡೆಯಿತು. ಈ ಸಂದರ್ಭ ಜೇಸಿ ಸಂಸ್ಥೆಯ ಅಧ್ಯಕ್ಷೆ ಎಂ.ಎ. ರುಬೀನಾ, ಕಾರ್ಯದರ್ಶಿ ಜಗದಾಂಭ ಗುರುಪ್ರಸಾದ್, ಮಹಿಳಾ ಘಟಕದ ಅಧ್ಯಕ್ಷೆ ಪವಿತ್ರಾ ಲಕ್ಷ್ಮೀ ಕುಮಾರ್, ಕಾರ್ಯಕ್ರಮ ಯೋಜನಾಧಿಕಾರಿ ವಿನುತಾ ಸುದೀಪ್ ಸದಸ್ಯರಾದ ಬಿ.ಈ. ಅರಣ್ಕುಮಾರ್ ಇದ್ದರು.











