Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*
  • *ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*
  • *ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*
  • *ಕ.ಸಾ.ಪ ದತ್ತಿ ಕಾರ್ಯಕ್ರಮ : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ : ಮಧೋಶ್ ಪೂವಯ್ಯ*
  • *ಪಂಜರಪೇಟೆ ಕೊಡವ ಕೇರಿಯಿಂದ ವೃದ್ಧಾಶ್ರಮಕ್ಕೆ ಭೇಟಿ*
  • *ಕೊಡವ ಕೂಟಾಳಿಯಡ ಕೂಟದಿಂದ ಸಾಧಕ ಮಹಿಳೆಯರಿಗೆ ಸನ್ಮಾನ*
  • *ಆಫ್ ರೋಡ್ ಚಾಲೆಂಜರ್ಸ್ ಸ್ಪರ್ಧೆ : ಮಡಿಕೇರಿಯ ಜತೀನ್ ಕರ್ಕೆರ ಹಾಗೂ ಹಾರ್ಧಿಕ್ ಕರ್ಕೆರ ದ್ವಿತೀಯ*
  • *ಸೋಮವಾರಪೇಟೆಯಲ್ಲಿ ಬಿಜೆಪಿ ಮಂಡಲ ಯುವ ಮೋರ್ಚಾದಿಂದ ಪ್ರತಿಭಟನೆ*
  • *ಕಾಡಾನೆ ದಾಳಿಗೆ ಗ್ರಾ.ಪಂ ಮಾಜಿ ಸದಸ್ಯೆ ಬಲಿ*
  • *ಅನಾರೋಗ್ಯದಿಂದ ಅಭಿ ಸಾವು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಹಿಂದಿನವರು ಹಿಂಬಾಲಕರಿಗಾಗಿ ಕಾಮಗಾರಿ ಕೈಗೊಂಡರು : ನಾವು ಜನರಿಗಾಗಿ ಬದಲಾಯಿಸಿದ್ದೇವೆ : ಮಾಜಿ ಶಾಸಕರಿಗೆ ಕಾಂಗ್ರೆಸ್ ತಿರುಗೇಟು*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಹಿಂದಿನವರು ಹಿಂಬಾಲಕರಿಗಾಗಿ ಕಾಮಗಾರಿ ಕೈಗೊಂಡರು : ನಾವು ಜನರಿಗಾಗಿ ಬದಲಾಯಿಸಿದ್ದೇವೆ : ಮಾಜಿ ಶಾಸಕರಿಗೆ ಕಾಂಗ್ರೆಸ್ ತಿರುಗೇಟು*

ನವೆಂಬರ್ 21, 20232 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ನ.21 : ಮುಖ್ಯಮಂತ್ರಿಗಳ ನಿಧಿ ಮತ್ತು ಪ್ರಾಕೃತಿಕ ವಿಕೋಪ ನಿಧಿಯಡಿ ಬಂದ ಅನುದಾನದಲ್ಲಿ ಹಿಂದಿನ ಶಾಸಕರುಗಳು ತಮ್ಮ ಹಿಂಬಾಲಕರಿಗಾಗಿ ಕಾಮಗಾರಿಗಳನ್ನು ಕೈಗೊಂಡಿದ್ದರು. ಆದರೆ ಇಂದಿನ ಕಾಂಗ್ರೆಸ್ ಶಾಸಕರುಗಳು ಜನರಿಗಾಗಿ ಕಾಮಗಾರಿಯನ್ನು ಕೈಗೆತ್ತಿಕೊಂಡಿದ್ದಾರೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿ ತಿರುಗೇಟು ನೀಡಿದೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಮಾಜಿ ಶಾಸಕರುಗಳು ಕಳೆದ 20 ವರ್ಷಗಳಲ್ಲಿ ಕೊಡಗು ಜಿಲ್ಲೆಗೆ ಯಾವ ಉಪಕಾರ ಮಾಡಿದ್ದಾರೆ ಎನ್ನುವುದನ್ನು ಮೊದಲು ಆತ್ಮಾವಲೋಕನ ಮಾಡಿಕೊಳ್ಳಲಿ. ಇವರುಗಳು ಮಾಡಿರುವ ಅಭಿವೃದ್ಧಿ ಕಾರ್ಯದ ಬಗ್ಗೆ ಮೊದಲು ಶ್ವೇತಪತ್ರ ಹೊರಡಿಸಲಿ, ನಂತರ ನಾವು ಹೊರಡಿಸುತ್ತೇವೆ ಎಂದರು.
ಕಾಂಗ್ರೆಸ್ ಶಾಸಕರುಗಳು ಬಂದು ಆರು ತಿಂಗಳುಗಳಷ್ಟೇ ಆಗಿದೆ, ಮಾಜಿ ಶಾಸಕರುಗಳು ಆತುರ ಪಡದೆ ಸ್ವಲ್ಪ ಸಹನೆಯಿಂದ ಕಾದು ನೋಡಬೇಕು. ಅಭಿವೃದ್ಧಿ ಎಂದರೆ ಏನು ಎನ್ನುವುದನ್ನು ಮುಂದಿನ ಒಂದು ವರ್ಷದಲ್ಲಿ ಇಬ್ಬರು ಶಾಸಕರು ತೋರಿಸಿಕೊಡಲಿದ್ದಾರೆ ಎಂದು ತಿಳಿಸಿದರು.
ಹಿಂದಿನ ಶಾಸಕರು ಲಭ್ಯ ಅನುದಾನವನ್ನು ಜನರ ಹಿತಕ್ಕೆ ಪೂರಕವಾದ ಕಾಮಗಾರಿಗಳಿಗೆ ಬಳಸಲು ಚಿಂತಿಸದೆ, ತಮ್ಮ ಹಿತ ಚಿಂತಕರಿಗೆ ಅನುಕೂಲವಾಗುವ ಕಾಮಗಾರಿಗಳಿಗೆ ಬಳಸಲು ಉದ್ದೇಶಿಸಿದ್ದರು. ಇಂತಹ ಕಾಮಗಾರಿಗಳನ್ನು ಬದಲಿಸಿ ಜನಪರವಾಗಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ನೂತನ ಶಾಸಕರು ಮುಂದಾಗಿದ್ದಾರೆ ಎಂದು ಸ್ಪಷ್ಟಪಡಿಸಿದರು.
ಈ ಹಿಂದೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿ ಕೊಡಗಿಗೆ 50 ಕೋಟಿ ಪ್ಯಾಕೇಜ್ ಒದಗಿಸಿದ್ದರು. ಆ ಸಂದರ್ಭ ಸೂಚಿಸಿದ ಕಾಮಗಾರಿಗಳನ್ನು ಹಿಂದಿನ ಶಾಸಕರು ಬದಲಾಯಿಸಿಲ್ಲವೆ ಎಂದು ತೀಕ್ಷ್ಣವಾಗಿ ಪ್ರಶ್ನಿಸಿದ ಧರ್ಮಜ ಉತ್ತಪ್ಪ, ಇಂದು ಸಾರ್ವಜನಿಕ ಹಿತದೃಷ್ಟಿಯಿಂದ ಕಾಮಗಾರಿಗಳನ್ನು ಬದಲಿಸಿದ್ದಕ್ಕೆ ಕಾನೂನು ಕ್ರಮದ ಬಗ್ಗೆ ಶಾಸಕರು ಮಾತನಾಡುತ್ತಿದ್ದಾರೆ. ಅದನ್ನು ಎದುರಿಸಲು ನಮಗೂ ತಿಳಿದಿದೆ, ನಾವೂ ಕಾನೂನು ಹೋರಾಟ ಮಾಡುತ್ತೇವೆ ಎಂದು ತಿರುಗೇಟು ನೀಡಿದರು.
::: ಟೆಂಡರ್ ವಜಾ ಯಾರಿಂದ :::
ಕಾವೇರಿಯ ಕ್ಷೇತ್ರ ಭಾಗಮಂಡಲದಲ್ಲಿ ನಡೆಯುತ್ತಿದ್ದ ಅಭಿವೃದ್ಧಿ ಕಾಮಗಾರಿಗಳ ಟೆಂಡರ್ ವಜಾಗೊಳ್ಳಲು ಹಿಂದಿನ ಶಾಸಕರೇ ಕಾರಣವೆಂದು ಆರೋಪಿಸಿದ ಅವರು, ಈಗಿನ ಶಾಸಕರುಗಳ ಕಾರ್ಯಕ್ಷಮತೆಯನ್ನು ಪ್ರಶ್ನಿಸುವ ಅಗತ್ಯವಿಲ್ಲವೆಂದರು.
ಜಿಲ್ಲೆಯ ಅಭಿವೃದ್ಧಿ ಕಾರ್ಯಗಳಿಗೆ ಅಗತ್ಯ ಕಾರ್ಯಕ್ರಮಗಳನ್ನು ಯೋಜಿಸಲಾಗಿದ್ದು, ಮುಂದೆ ಆರು ತಿಂಗಳ ಬಳಿಕ ಬೇಕಾದರೆ ಪ್ರಶ್ನಿಸಲಿ ಎಂದು ಸವಾಲೆಸೆದರು.
ಸೋಮವಾರಪೇಟೆಗೆ 2012 ರಲ್ಲೆ ಮಂಜೂರಾಗಿದ್ದ ಹಾಕಿ ಆಸ್ಟ್ರೋ ಟರ್ಫ್ ಕಾಮಗಾರಿ ಪೂರ್ಣಗೊಳ್ಳದಿರುವುದು, ಸುವರ್ಣ ಸಮುಚ್ಛಯ ಭವನ ಅರ್ಧಕ್ಕೆ ನಿಂತಿರುವುದು, ಕುಶಾಲನಗರ ಬಸ್ ನಿಲ್ದಾಣ ಕಾಮಗಾರಿ ನಡೆಯದಿರುವುದು ಹಿಂದಿನ ಶಾಸಕರ ಗಮನಕ್ಕೆ ಬಂದಿಲ್ಲವೆ ಎಂದು ಪ್ರಶ್ನಿಸಿದರು.
ಬಿಜೆಪಿ ಅವಧಿಯಲ್ಲಿ ಯಾವೆಲ್ಲ ಅಭಿವೃದ್ಧಿ ಆಗಿದೆ ಎನ್ನುವ ಬಗ್ಗೆ ಮೊದಲು ‘ಶ್ವೇತ ಪತ್ರ’ ಬಿಡುಗಡೆ ಮಾಡಲಿ ಎಂದರು.
::: ‘ಜಲ್ ಜೀವನ್’ ವಿಫಲ :::
ಜಿಲ್ಲೆಯಲ್ಲಿ ಜಲ್ ಜೀವನ್ ಮಿಷನ್ ಯೋಜನೆಗಾಗಿ 400 ಕೋಟಿ ರೂ. ವೆಚ್ಚ ಮಾಡಲಾಗುತ್ತಿದೆ. ಬಿಜೆಪಿ ಅವಧಿಯಲ್ಲಿ ಈ ಯೋಜನೆಯಡಿ ಒಂದೇ ಒಂದು ಕಡೆ ಸಮರ್ಪಕವಾಗಿ ಕಾಮಗಾರಿ ನಡೆದಿಲ್ಲ, ಮನೆ ಮನೆಗೆ ನೀರು ತಲುಪಿಲ್ಲ ಎಂದು ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್, ನೈಋತ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೆ.ಕೆ.ಮಂಜುನಾಥ್ ಕುಮಾರ್, ಜಿಲ್ಲಾ ವಕ್ತಾರ ಟಾಟು ಮೊಣ್ಣಪ್ಪ, ಉಪಾಧ್ಯಕ್ಷ ಅರವಿಂದ್ ಕುಟ್ಟಪ್ಪ, ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷ ಬಿ.ಎನ್.ಪ್ರಥ್ಯು ಹಾಗೂ ಪ್ರಮುಖರಾದ ನರೇಂದ್ರ ಕಾಮತ್ ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೆಎಸ್‌ಐಸಿ ಆವರಣದಲ್ಲಿ ಸ್ಡೇಡಿಯಂ ನಿರ್ಮಾಣ ಯೋಜನೆಗೆ ತಿಲಾಂಜಲಿ : ಸಂಘಟಿತ ಹೋರಾಟಕ್ಕೆ ಸಂದ ಜಯ : ಧನ್ಯವಾದ ಸಲ್ಲಿಸಿದ ಸಂಸದ ಯದುವೀರ್‌ ಒಡೆಯರ್‌*

ಮಾರ್ಚ್ 9, 2026

*ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*

ಮಾರ್ಚ್ 9, 2026

*ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*

ಮಾರ್ಚ್ 9, 2026

*ಮಡಿಕೇರಿ : ಮಾ.11 ರಂದು ನಗರಸಭೆಯ ಆಯವ್ಯಯ ಸಭೆ*

ಮಾರ್ಚ್ 9, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಮಾ.9 NEWS DESK : ನಗರಸಭೆಯ 2026-27ನೇ ಸಾಲಿನ ಆಯವ್ಯಯ ಮಂಜೂರಾತಿಗೆ ಮಾರ್ಚ್, 11 ರಂದು ಬೆಳಗ್ಗೆ 11.30…

*ಮಾ.12ರ ಹೋರಾಟಕ್ಕೆ ಸಿಪಿಐಎಂ ಪಕ್ಷದ ವಿರಾಜಪೇಟೆ ಘಟಕ ಬೆಂಬಲ : ಕೆ.ಎಸ್ ರಮೇಶ್*

ಮಾರ್ಚ್ 9, 2026

*ಕ.ಸಾ.ಪ ದತ್ತಿ ಕಾರ್ಯಕ್ರಮ : ಕೊಡಗಿನ ಸಂಸ್ಕೃತಿಯ ಮೂಲ ಸ್ವರೂಪ ಪ್ರಕೃತಿ ಆರಾಧನೆ : ಮಧೋಶ್ ಪೂವಯ್ಯ*

ಮಾರ್ಚ್ 9, 2026

*ಪಂಜರಪೇಟೆ ಕೊಡವ ಕೇರಿಯಿಂದ ವೃದ್ಧಾಶ್ರಮಕ್ಕೆ ಭೇಟಿ*

ಮಾರ್ಚ್ 9, 2026

*ಕೊಡವ ಕೂಟಾಳಿಯಡ ಕೂಟದಿಂದ ಸಾಧಕ ಮಹಿಳೆಯರಿಗೆ ಸನ್ಮಾನ*

ಮಾರ್ಚ್ 9, 2026

*ಆಫ್ ರೋಡ್ ಚಾಲೆಂಜರ್ಸ್ ಸ್ಪರ್ಧೆ : ಮಡಿಕೇರಿಯ ಜತೀನ್ ಕರ್ಕೆರ ಹಾಗೂ ಹಾರ್ಧಿಕ್ ಕರ್ಕೆರ ದ್ವಿತೀಯ*

ಮಾರ್ಚ್ 9, 2026

*ಸೋಮವಾರಪೇಟೆಯಲ್ಲಿ ಬಿಜೆಪಿ ಮಂಡಲ ಯುವ ಮೋರ್ಚಾದಿಂದ ಪ್ರತಿಭಟನೆ*

ಮಾರ್ಚ್ 9, 2026

*ಕಾಡಾನೆ ದಾಳಿಗೆ ಗ್ರಾ.ಪಂ ಮಾಜಿ ಸದಸ್ಯೆ ಬಲಿ*

ಮಾರ್ಚ್ 9, 2026

*ಅನಾರೋಗ್ಯದಿಂದ ಅಭಿ ಸಾವು*

ಮಾರ್ಚ್ 9, 2026

*ಕಾಡಾನೆ ಹಾವಳಿ ನಿಯಂತ್ರಿಸಲು ಸರ್ಕಾರ ವಿಫಲ : ಕೂಡಲೇ ಕೊಡಗಿಗೆ ಅರಣ್ಯ ಸಚಿವರು ಭೇಟಿ ನೀಡಲಿ : ಎಡಿಕೇರಿ ಪ್ರಸನ್ನ ಒತ್ತಾಯ*

ಮಾರ್ಚ್ 9, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.