ಮಡಿಕೇರಿ ನ.24 : ಭಾಗಮಂಡಲದ ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ನ.27 ರಂದು ಸಂಜೆ 4.00 ಗಂಟೆಯಿಂದ “ಸಾಮೂಹಿಕ ಸತ್ಯನಾರಾಯಣ” ಪೂಜೆ ನಡೆಯಲಿದೆ.
ಆದ್ದರಿಂದ ಸಾರ್ವಜನಿಕ ಭಕ್ತಾದಿಗಳು ದೇವಾಲಯಗಳಲ್ಲಿ ನಡೆಯಲಿರುವ “ಸಾಮೂಹಿಕ ಸತ್ಯನಾರಾಯಣ” ಪೂಜೆಯಲ್ಲಿ ಭಾಗವಹಿಸಿ, ಪೂಜೆಯನ್ನು ಯಶಸ್ವಿಗೊಳಿಸುವಂತೆ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿಯವರಾದ ಚಂದ್ರಶೇಖರ್ ಎನ್.ಜಿ ಕೋರಿದ್ದಾರೆ.









