ಮಡಿಕೇರಿ ನ.25 : ವಿರಾಜಪೇಟೆ ತಾಲ್ಲೂಕಿನ ಬಾಳುಗೋಡು ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಆದಿವಾಸಿ ಬುಡಕಟ್ಟು ಜನ ಮೂಲಭೂತ ಸೌಲಭ್ಯಗಳಿಂದ ವಂಚಿತರಾಗಿದ್ದು, ಜಿಲ್ಲಾಡಳಿತ ತಕ್ಷಣ ಸೂಕ್ತ ಕ್ರಮ ಕೈಗೊಂಡು ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕೆಂದು ಬೆಂಗಳೂರಿನ ನೈಜ ಹೋರಾಟಗಾರರ ವೇದಿಕೆ ಒತ್ತಾಯಿಸಿದೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೇದಿಕೆಯ ಮುಖಂಡ, ಹೆಚ್.ಎಂ.ವೆಂಕಟೇಶ್, ನಮ್ಮ ನೈಜ ಹೋರಾಟಗಾರರ ವೇದಿಕೆಯ ಸದಸ್ಯರು ಬಾಳುಗೋಡು ಆದಿವಾಸಿ ಜನರು ವಾಸಿಸುವ ಸ್ಥಳಕ್ಕೆ ಭೇಟಿ ನೀಡಿ ಅಲ್ಲಿನ ಆಗುಹೋಗಗಳನ್ನು ಪರಿಶೀಲಿಸಲಾಗಿದೆ ಎಂದು ತಿಳಿಸಿದರು.
ಶುದ್ಧ ಕುಡಿಯುವ ನೀರು, ಶೌಚಾಲಯ, ವಿದ್ಯುತ್ ಸೌಲಭ್ಯವಿಲ್ಲದೆ ಆದಿವಾಸಿಗಳು ಸಂಕಷ್ಟದ ಜೀವನ ನಡೆಸುತ್ತಿದ್ದಾರೆ. ಜಿಲ್ಲಾಡಳಿತ ಆದಿವಾಸಿ ಜನರಿಗೆ ಹಕ್ಕುಪತ್ರ ಮತ್ತು ಯಾವುದೇ ಮೂಲಭೂತ ಸೌಲಭ್ಯ ನೀಡದೆ ಇರುವುದು ದುರಾದೃಷ್ಟಕರ. ಶುದ್ಧ ಕುಡಿಯವ ನೀರಿಲ್ಲದೆ ಅಲ್ಲಿನ ಮಹಿಳೆಯರು ನೀರಿಗಾಗಿ ದೂರದ ಪ್ರದೇಶಕ್ಕೆ ತೆರಳಬೇಕಾಗಿದೆ. ಶೌಚಾಲಯವೂ ಇಲ್ಲದೆ ಕಷ್ಟ ಪಡಬೇಕಾಗಿದೆ. ಕೇಂದ್ರ ಸರ್ಕಾರದ ಜಲಜೀವನ್ ಮಿಷನ್, ಸ್ವಚ್ಛ ಭಾರತ್ ಯೋಜನೆಗಳು ಪ್ರಚಾರಕಷ್ಟೇ ಸೀಮಿತವಾಗಿದೆ ಎಂದು ಎಂದು ಆರೋಪಿಸಿದರು.
ಇನ್ನಾದರು ಜಿಲ್ಲಾಡಳಿತ ಆದಿವಾಸಿಗಳಿಗೆ ಟಾರ್ಪಲ್ಗಳನ್ನು ನೀಡುವುದನ್ನು ನಿಲ್ಲಿಸಿ ಹಕ್ಕುಪತ್ರ ಮತ್ತು ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಕಾಳಜಿ ತೋರಲಿ ಎಂದು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ವೇದಿಕೆಯ ಪ್ರಮುಖರಾದ ಪ್ರೊ.ನಂಜರಾಜ ಅರಸ್, ಹಂದ್ರಾಳ್ ನಾಗಭೂಷಣ್, ಬಿ.ಎಸ್.ಲೋಕೇಶ್ ಹಾಗೂ ಕುಣಿಗಲ್ ನರಸಿಂಹಮೂರ್ತಿ ಉಪಸ್ಥಿತರಿದ್ದರು.
Breaking News
- *ಮೇಕೇರಿ ಪ್ರೀಮಿಯರ್ ಲೀಗ್ ಸೀಸನ್-5 : ಕ್ರೀಡೆಯಿಂದ ದೈಹಿಕ, ಮಾನಸಿಕ ಸಧೃಡತೆ ಸಾಧ್ಯ : ಶಾಸಕ ಎ.ಎಸ್.ಪೊನ್ನಣ್ಣ*
- *ಭಾಗಮಂಡಲ : ಎಲ್ಲಾ ಜಾತಿ, ಧರ್ಮ, ಭಾಷೆಗಳಿರುವ ನಾಡಿನಲ್ಲಿ ಮನುಷ್ಯ ಮನುಷ್ಯನನ್ನು ಪ್ರೀತಿಸಬೇಕು. ಯಾವುದೇ ಕಾರಣಕ್ಕೂ ಧ್ವೇಷ ಮಾಡಬಾರದು : ಸಿಎಂ*
- *ರೂ.1.50 ಕೋಟಿ ಅನುದಾನ ಬಿಡುಗಡೆಗೆ ಸಿಎಂ ಗೆ ಮನವಿ ಸಲ್ಲಿಸಿದ ಮುದ್ದಂಡ ಹಾಕಿ ಉತ್ಸವ ಸಮಿತಿ*
- *ಅರ್ಚಕರ ಮೇಲೆ ಹಲ್ಲೆ : ಹೋರಾಟದ ಎಚ್ಚರಿಕೆ ನೀಡಿದ ವಿಶ್ವ ಹಿಂದು ಪರಿಷತ್ ಮಠ-ಮಂದಿರ್ ಘಟಕ*
- *ಫೆ.7 ರ ಪಾದಯಾತ್ರೆಗೆ ಸಿಎನ್ಸಿ ಬೆಂಬಲ*
- *ಕೊಡಗು : ಕಾರ್ಮಿಕರ ಸಾಮಾಜಿಕ ಭದ್ರತಾ ಕುರಿತು ಜನಜಾಗೃತಿ : ಆಟೋ ಪ್ರಚಾರ ಕಾರ್ಯಕ್ರಮಕ್ಕೆ ಚಾಲನೆ*
- *ಜಿಲ್ಲೆಯ ಸಮಗ್ರ ಮಾಹಿತಿ ಹೊಂದಿರುವ ಅಧಿಕೃತ ವೆಬ್ಸೈಟ್ ಬಿಡುಗಡೆ*
- *ಕೊಡಗಿಗೆ ಸಚಿವ ಸ್ಥಾನ ನೀಡಲು ಒತ್ತಾಯ*
- *ಮರಗೋಡಿನಲ್ಲಿ ಗೌಡ ಕುಟುಂಬಗಳ ಟೆನ್ನಿಸ್ ಬಾಲ್ ಕ್ರಿಕೆಟ್*
- *ತಲಕಾವೇರಿಗೆ ಭೇಟಿ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ*