ಮೂರ್ನಾಡು ಡಿ.8 : ಸಾಂದೀಪಿನಿ ವಿದ್ಯಾಪೀಠದದಲ್ಲಿ ನಡೆದ ಕರಾಟೆ ಪರೀಕ್ಷೆಯಲ್ಲಿ ವಿದ್ಯಾಪೀಠದ ವಿದ್ಯಾರ್ಥಿಗಳು ತೇರ್ಗಡೆ ಹೊಂದಿ ಪದಕ ಮತ್ತು ವಿವಿಧ ಬೆಲ್ಟ್ಗಳನ್ನು ಪಡೆದುಕೊಂಡಿದ್ದಾರೆ.
ಅಂತರಾಷ್ಟ್ರೀಯ ಶಾವೊಲಿನ್ ಕುಂಗ್-ಫುಕರಾಟೆ ಶಾಲೆಯ ವತಿಯಿಂದ ನಡೆಸಲಾದ ಕರಾಟೆ ಪರೀಕ್ಷೆಯಲ್ಲಿ 19 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು, ವಿದ್ಯಾಪೀಠದ ಶಾಲಾ ಮುಖ್ಯ ಶಿಕ್ಷಕಿ ಸೀತಮ್ಮ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಪದಕ ಮತ್ತು ವಿವಿಧ ರೀತಿಯ ಕರಾಟೆ ಬೆಲ್ಟ್ಗಳನ್ನು ವಿತರಿಸಿದರು.
ಅಂತರಾಷ್ಟ್ರೀಯ ಶಾವೊಲಿನ್ ಕುಂಗ್-ಫುಕರಾಟೆ ಶಾಲೆಯ ಭಾರತದ ಮುಖ್ಯ ತರಬೇತುದಾರ ದೇವರಾಜ್, ಸಾಂದೀಪಿನಿ ವಿದ್ಯಾಪೀಠದ ಕಾರ್ಯದರ್ಶಿ ಕೆ.ಆರ್ಯೋಗೇಶ್, ಸೌಜನ್ಯಯೋಗೇಶ್, ಕರ್ನಾಟಕ ತರಬೇತುದಾರ ಹಾಗೂ ವಿದ್ಯಾಪೀಠದ ಕರಾಟೆ ಶಿಕ್ಷಕ ನಾಟೋಳಂಡ ನಂಜುಂಡ, ಕೊಡಗು ಜಿಲ್ಲಾ ತರಬೇತುದಾರರಾದ ವೇಣು ಮತ್ತು ಸತೀಶ್ ಈ ಸಂದರ್ಭದಲ್ಲಿ ಹಾಜರಿದ್ದರು.









