ಮಡಿಕೇರಿ ಡಿ.14 : ಪ್ರಸಕ್ತ (2023-24) ಸಾಲಿಗೆ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1ರ ಅಲೆಮಾರಿ/ ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದು,್ದ ಅರ್ಜಿ ಸಲ್ಲಿಸಲು 2024 ರ ಜ.10 ಕೊನೆಯ ದಿನವಾಗಿದೆ.
ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವೆಬ್ಸೈಟ್ ವಿಳಾಸ https://ssp.postmatric.karnataka.gov.in ಕಾರ್ಯಕ್ರಮಗಳ ವಿವರ, ಸೌಲಭ್ಯ ಪಡೆಯಲು ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ಕಾರ್ಯಕ್ರಮಗಳ ಸರ್ಕಾರಿ ಆದೇಶಗಳಿಗೆ ಇಲಾಖಾ ವೆಬ್ಸೈಟ್ https://bcwd.karnataka.gov.in ನ್ನು ನೋಡಬಹುದು. ಹೆಚ್ಚಿನ ಮಾಹಿತಿಗೆ ಇಲಾಖಾ ಸಹಾಯವಾಣಿ ಸಂಖ್ಯೆ: 8050770005, ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶದ ಸಹಾಯವಾಣಿ ಇಮೇಲ್: postmatrichelp@karnataka.gov.in ದೂ.ಸಂ.1902 ನ್ನು ಸಂಪರ್ಕಿಸಬಹುದು. ಅರ್ಹ ವಿದ್ಯಾರ್ಥಿಗಳು ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಳ್ಳುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಎನ್.ಮಂಜುನಾಥ್ ತಿಳಿಸಿದ್ದಾರೆ.









