ಸುಂಟಿಕೊಪ್ಪ, ಡಿ.20 : ಚಾಮುಂಡೇಶ್ವರಿ ಮತ್ತು ಮುತ್ತಪ್ಪ ದೇವಾಲಯ ಸಮಿತಿ ವತಿಯಿಂದ ಮುತ್ತಪ್ಪ ದೇವರ ಪುತ್ತರಿ ವೆಳ್ಳಾಟಂ ಶ್ರದ್ಧಾಭಕ್ತಿಯಿಂದ ಜರುಗಿತು.
ಸಂಜೆ ಮುತ್ತಪ್ಪ ದೇವರ ಮಲೆ ಇಳಿಸುವಿಕೆ ಹಾಗೂ ರಾತ್ರಿ ಮುತ್ತಪ್ಪ ವೆಳ್ಳಾಟಂ ನಡೆಯಿತು. ನಂತರ ಚಾಮುಂಡೇಶ್ವರಿ ಮತ್ತು ಮುತ್ತಪ್ಪ ದೇವಾಲಯದಲ್ಲಿ ವಿಶೇಷ ಪೂಜೆ, ಮಹಾ ಪೂಜೆ, ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ನಡೆಯಿತು. ನೆರೆದಿದ್ದ ಭಕ್ತರಿಗೆ ಅನ್ನ ಸಂತರ್ಪಣೆ ನೇರವೇರಿತು.
ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವರ ತೀರ್ಥ ಪ್ರಸಾದ ಸ್ವೀಕರಿಸಿದರು.

ನಂತರ ಕುಂದನ ನೃತ್ಯಾಲಯ ತಂಡದಿಂದ ನಡೆದ ಅತ್ಯಕರ್ಷ ನೃತ್ಯ ವೈವಿಧ್ಯಗಳು ಸಾರ್ವಜನಿಕರ ಗಮನ ಸೆಳೆಯಿತು.
ಈ ಸಂದರ್ಭ ದೇವಾಲಯ ಸಮಿತಿಯ ಅಧ್ಯಕ್ಷ ಪಟ್ಟೆಮನೆ ಉದಯಕುಮಾರ್, ರಮೇಶ್ ಪಿಳ್ಳೆ, ಮಾಗಲು ವಸಂತ, ಶ್ರೀನಿವಾಸ್, ಪಿ.ಸಿ.ಮೋಹನ ಮುತ್ತಪ್ಪ ದೇವಾಲಯದ ಪೂಜಾರಿ ಶಿವರಾಮು, ಚಾಮುಂಡೇಶ್ವರಿ ದೇವಾಲಯದ ಮುಖ್ಯ ಅರ್ಚಕ ಮಂಜುನಾಥ್ ಉಡುಪ ಸೇರಿದಂತೆ ಸಮಿತಿ ಸದಸ್ಯರು ಹಾಜರಿದ್ದರು.








