Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಎಚ್1-ಎನ್1 : ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸೂಚನೆ*
  • *ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟು, ವ್ಯಾಕರಣದ ಶಿಸ್ತು ರೂಢಿಸಿದವರು ಕೋಡಿ ಕುಶಾಲಪ್ಪ ಗೌಡರು : ಸದಾನಂದ ಮಾವಜಿ*
  • *ಅಂತರ ಶಾಲಾ ಶಟಲ್ ಬ್ಯಾಡ್ಮಿಂಟನ್: ಶ್ರೀ ರಾಜರಾಜೇಶ್ವರಿ ಶಾಲೆ ವಿದ್ಯಾರ್ಥಿಗಳ ಸಾಧನೆ*
  • ಕೊಡಗಿನಲ್ಲಿ ಕರವೇ ಸ್ವಾಭಿಮಾನಿ ಸೇನೆಗೆ ನೂತನ ಸದಸ್ಯರ ಸೇರ್ಪಡೆ
  • *ತೀವ್ರಗೊಳಿಸಿದ ಐಇಸಿ ಅಭಿಯಾನ : ಮ್ಯಾರಥಾನ್ ಮೂಲಕ ಎಚ್‌ಐವಿ/ಏಡ್ಸ್ ಜಾಗೃತಿ*
  • *ಮಡಿಕೇರಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ : ಸ್ವಾವಲಂಬಿ ಮಹಿಳಾ ಫಲಾನುಭವಿಗಳ ಗುರುತಿಸಿ ಸನ್ಮಾನಕ್ಕೆ ಕ್ರಮ*
  • *ಶಿಸ್ತುಬದ್ಧ ಶಿಕ್ಷಣದಿಂದಲೇ ಸಮಾಜದ ಯಶಸ್ಸು, ದೇಶದ ಪ್ರಗತಿ : ಶಾಸಕ ಎ.ಎಸ್.ಪೊನ್ನಣ್ಣ*
  • *ಫೀ.ಮಾ. ಕಾರ್ಯಪ್ಪ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ: ಶಿಸ್ತುಬದ್ಧ ಜೀವನವೇ ಸಾಧನೆಯ ದಾರಿದೀಪ: ಕರ್ನಲ್ ಸಂಜೀವ್ ಕುಮಾರ್*
  • *ಕೊಡಗು ವಿದ್ಯಾಲಯದಲ್ಲಿ ಬ್ರಹ್ಮಗಿರಿ ಸಹೋದಯ ಸಿಬಿಎಸ್ಇ ಶಾಲೆಗಳ ಸಾಂಸ್ಕೃತಿಕ ಸ್ಪರ್ಧೆ*
  • *ಮಡಿಕೇರಿ ನಗರಸಭೆ : ತ್ಯಾಜ್ಯ ನಿರ್ವಹಣೆಗೆ ವೈಜ್ಞಾನಿಕ ವಿಧಾನಕ್ಕೆ ಒತ್ತು : ಶಾಸಕ ಮಂತರ್ ಗೌಡ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕುಶಾಲನಗರ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ಕುರಿತ ಕಾರ್ಯಾಗಾರ: ಹಸಿರು ಇಂಧನ ಬಳಕೆಗೆ ಹೆಚ್ಚಿನ ಒತ್ತು ಅಗತ್ಯ: ಶಾಸಕ ಡಾ.ಮಂತರ್ ಗೌಡ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕುಶಾಲನಗರ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ಕುರಿತ ಕಾರ್ಯಾಗಾರ: ಹಸಿರು ಇಂಧನ ಬಳಕೆಗೆ ಹೆಚ್ಚಿನ ಒತ್ತು ಅಗತ್ಯ: ಶಾಸಕ ಡಾ.ಮಂತರ್ ಗೌಡ*

ಡಿಸೆಂಬರ್ 20, 20233 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಕುಶಾಲನಗರ, ಡಿ.20 : ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ( ಕೆ.ಆರ್.ಇ.ಡಿ.ಎಲ್.) ವತಿಯಿಂದ ಕುಶಾಲನಗರ ಸರ್ಕಾರಿ ಎಂಜಿನಿಯರಿಂಗ್ ಕಾಲೇಜು ಹಾಗೂ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಕೊಡಗು ಜಿಲ್ಲಾ ಸಮಿತಿಯ ಸಂಯುಕ್ತಾಶ್ರಯದಲ್ಲಿ ಕುಶಾಲನಗರ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ
ನವೀಕರಿಸಬಹುದಾದ ಇಂಧನ / ಶಕ್ತಿ ಸಂಪನ್ಮೂಲಗಳ ಕುರಿತು ಒಂದು ದಿನದ ಕಾರ್ಯಾಗಾರ  ನಡೆಯಿತು.

ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಶಾಸಕ ಡಾ.ಮಂತರ್ ಗೌಡ, ಮುಗಿದು ಹೋಗುತ್ತಿರುವ ಫಾಸಿಲ್ ಇಂಧನ ಮೂಲಗಳಿಗೆ ಪರ್ಯಾಯವಾಗಿ ನಾವು ಪರಿಸರ ಸ್ನೇಹಿ ನವೀಕರಿಸಬಹುದಾದ ಬದಲಿ ಇಂಧನ ಮೂಲಗಳ ಉತ್ಪಾದನೆ ಹಾಗೂ ಬಳಕೆಗೆ ಹೆಚ್ಚಿನ ಒತ್ತು ನೀಡುವ ಅಗತ್ಯವಿದೆ ಎಂದರು.
ಇಂಧನ ಸಂರಕ್ಷಣೆ ಮತ್ತು ಶಕ್ತಿಯ ಸಮರ್ಥ ಬಳಕೆಯ ಕಡೆಗೆ ಹೆಚ್ಚಿನ ಗಮನ ಹರಿಸಲು ಇಂತಹ ಕಾರ್ಯಾಗಾರ ಸಹಕಾರಿಯಾಗಿದೆ. ನಾವು ಪರಿಸರ ಸ್ನೇಹಿ ಇಂಧನ ಬಳಕೆ ಮಾಡುವ ಮೂಲಕ ಜಾಗತಿಕ ತಾಪಮಾನ ಹಾಗೂ ಪರಿಸರ ಮಾಲಿನ್ಯ ತಡೆಗಟ್ಟಲು ದಿಟ್ಟ ಹೆಜ್ಜೆ ಇಡಬೇಕು. ನಾವು ನಮ್ಮ ಮನೆ, ಕಟ್ಟಡಗಳು, ಕಛೇರಿ ಹೀಗೆ ಲಭ್ಯವಿರುವ ಸ್ಥಳಗಳ ಮೇಲ್ಚಾವಣಿಯಲ್ಲಿ ಸೋಲಾರ್ ಪೆನಾಲ್ ಗಳನ್ನು ಅಳವಡಿಸುವ ಮೂಲಕ ನಮ್ಮ ಸ್ವಂತ ಬಳಕೆಗೆ ಸೌರಶಕ್ತಿ ವಿದ್ಯುತ್ ಉತ್ಪಾದನೆಗೆ ಹೆಚ್ಚಿನ ಒತ್ತು ನೀಡಬೇಕು.
ರಾಜ್ಯದಲ್ಲಿ ನವೀಕರಿಸಬಹುದಾದ ಇಂಧನ ಅಭಿವೃದ್ಧಿಗೆ ಸರ್ಕಾರ ಹೆಚ್ಚಿನ ಒತ್ತು ನೀಡಿದೆ.
ಜಾಗತಿಕ ತಾಪಮಾನ ಹಾಗೂ ಹವಾಮಾನ ವೈಪರೀತ್ಯಗಳಿಂದ ನಾವು ಎದುರಿಸುತ್ತಿರುವ ಪ್ರವಾಹ ಹಾಗೂ ಬರ ಪರಿಸ್ಥಿತಿಯ ಸವಾಲುಗಳನ್ನು ಎದುರಿಸುವ ಮೂಲಕ ಪರಿಸರ ಸಂರಕ್ಷಣೆಗೆ ಎಲ್ಲರೂ ಪಣ ತೊಡಬೇಕು ಎಂದು
ಶಾಸಕರು ಹೇಳಿದರು.
ಜಿಲ್ಲೆಯ ಹಾರಂಗಿ ಅಣೆಕಟ್ಟಿನ ಪ್ರದೇಶದಲ್ಲಿ ಸೋಲಾರ್ ಪಾರ್ಕ್ ನಿರ್ಮಿಸುವ ಇಂಗಿತ ವ್ಯಕ್ತಪಡಿಸಿದ ಶಾಸಕರು, ಇದರಿಂದ ನೀರಾವರಿ ಇಲಾಖೆಯ ವಿದ್ಯುತ್ ಬಿಲ್ ಪಾವತಿಯನ್ನು ತಪ್ಪಿಸುವ ಮೂಲಕ ಹಾರಂಗಿ ಅಣೆಕಟ್ಟು ಕಛೇರಿ ಬಳಕೆ ಜತೆಗೆ ಸ್ಥಳೀಯವಾಗಿ ಹೆಚ್ಚು ಸೌರ ವಿದ್ಯುತ್ ಉತ್ಪಾದಿಸಿ ಪವರ್ ಗ್ರಿಡ್ ಗೂ ನೀಡಬಹುದು ಎಂದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ ಎನ್.ಎಸ್. ಸತೀಶ್ ಮಾತನಾಡಿ, ಇಂದಿನ ದಿನಗಳಲ್ಲಿ ಇಂಧನ / ಶಕ್ತಿ ಬೇಡಿಕೆ ಹೆಚ್ಚುತ್ತಿರುವ ಕಾರಣದಿಂದಾಗಿ ಭವಿಷ್ಯತ್ತಿನ ದೃಷ್ಠಿಯಿಂದ ನಾವು ಸಾಂಪ್ರದಾಯಿಕ ಇಂಧನಕ್ಕೆ ಪರ್ಯಾಯವಾಗಿ ಸೌರಶಕ್ತಿ, ಪವನ ಶಕ್ತಿ ಮತ್ತಿತರ ನವೀಕರಿಸಬಹುದಾದ ಇಂಧನ ಮೂಲಗಳ ಸದ್ಬಳಕೆ ಮಾಡಬೇಕಿದೆ ಎಂದರು.


ಇಂಧನ ಸಂರಕ್ಷಣೆ ಮತ್ತು ಶಕ್ತಿಯ ಸಮರ್ಥ ಬಳಕೆಯ ಕಡೆಗೆ ಸಮಾಜದಲ್ಲಿ ನಿರಂತರವಾಗಿ ಬದಲಾವಣೆಯನ್ನು ತರಲು ಹಾಗೂ ಇಂಧನ ದಕ್ಷತೆ ಮತ್ತು ಅದರ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸಲು ಇಂತಹ ಕಾರ್ಯಾಗಾರಗಳು ಸಹಕಾರಿಯಾಗಿದೆ ಎಂದರು.
ನವೀಕರಿಸಬಹುದಾದ ಇಂಧನ ಶಕ್ತಿಯ ಮಹತ್ವ ಹಾಗೂ ಸೌರಶಕ್ತಿ ಭವಿಷ್ಯದ ಶಕ್ತಿ ಕುರಿತು ಉಪನ್ಯಾಸ ನೀಡಿದ ಪೊನ್ನಂಪೇಟೆ ಕೂರ್ಗ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ( ಸಿ.ಐ.ಟಿ.) ಯ ಪ್ರಾಂಶುಪಾಲ ಡಾ. ಎಂ. ಬಸವರಾಜ್, ಇಂದು ಪರಿಸರ ಸ್ನೇಹಿ ನವೀಕರಿಸಬಹುದಾದ ಇಂಧನಗಳ ಬಳಕೆಗೆ ಹೆಚ್ಚಿನ ಸಂಶೋಧನೆ ನಡೆದಿದ್ದು, ಮಾಲಿನ್ಯ ರಹಿತ ಶಕ್ತಿ ಮೂಲಗಳಾದ ಸೌರಶಕ್ತಿ, ಪವನ ಶಕ್ತಿ, ಭೂ ಉಷ್ಣ ಶಕ್ತಿ, ಜೈವಿಕ ಶಕ್ತಿ ಹಾಗೂ ಎಥನಾಲ್ ನಂತಹ ಶಕ್ತಿ ಉತ್ಪಾದನೆ ಮಾಡುವ ಮೂಲಕ ದೇಶದಲ್ಲಿ ಇಂಧನ/ ಶಕ್ತಿ ಸದ್ಬಳಕೆಗೆ ಹೆಚ್ಚಿನ ಒತ್ತು ನೀಡಬೇಕಿದೆ. ಭಾರತ ದೇಶದಲ್ಲಿ ನವೀಕರಿಸಬಹುದಾದ ಇಂಧನ/ ಶಕ್ತಿ ಉತ್ಪಾದನೆಗೆ ವಿಪುಲ ಅವಕಾಶಗಳಿದ್ದು, ಇದರ ಸದ್ಬಳಕೆ ಮಾಡಿಕೊಂಡರೆ ಭಾರತ ದೇಶವು ಇಂಧನ ಉತ್ಪಾದನೆಯಲ್ಲಿ ಸ್ವಾವಲಂಬನೆ ಹೊಂದಲು ಸಾಧ್ಯವಾಗುತ್ತದೆ ಎಂದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಕೊಡಗು ಜಿಲ್ಲಾ ಸಮಿತಿಯ ಅಧ್ಯಕ್ಷರೂ ಆದ ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲಾ ಮುಖ್ಯೋಪಾಧ್ಯಾಯ ಟಿ.ಜಿ.ಪ್ರೇಮಕುಮಾರ್ , ಪರಿಸರ ಸ್ನೇಹಿ ಇಂಧನ ಮೂಲಗಳಾದ ನವೀಕರಿಸಬಹುದಾದ ಸೌರಶಕ್ತಿ, (ಸೋಲಾರ್ ಎನರ್ಜಿ), ಪವನ ಶಕ್ತಿ, ಜೈವಿಕ ಇಂಧನ, ಭೂ ಶಕ್ತಿ ಬಳಕೆಗೆ ನಾವು ಹೆಚ್ಚಿನ ಜಾಗೃತಿ ಮೂಡಿಸಬೇಕಿದೆ ಎಂದರು.
“ಶಕ್ತಿ ಸಂರಕ್ಷಣೆ'” ಕುರಿತು ಉಪನ್ಯಾಸ ನೀಡಿದ ಮೈಸೂರು ವಿದ್ಯಾವರ್ಧಕ ಇಂಜಿನಿಯರಿಂಗ್ ಕಾಲೇಜಿನ ಸಿವಿಲ್ ಎಂಜಿನಿಯರಿಂಗ್ ವಿಭಾಗದ ಸಹ ಪ್ರಾಧ್ಯಾಪಕಿ ಬಿ.ಎಸ್.ಶಿಲ್ಪಾ ಮಾತನಾಡಿ, ಭೂಮಿಯ ಮೇಲಿನ ಜಾಗತಿಕ ತಾಪಮಾನವು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಮತ್ತು ಅದರ ವಿವಿಧ ರೀತಿಯ ಪರಿಣಾಮಗಳನ್ನು ವಾತಾವರಣದಲ್ಲಿ ಬಿಡುತ್ತಿದೆ. ಈ ದಿಸೆಯಲ್ಲಿ ನಾವು ಹೊಸ ತಂತ್ರಜ್ಞಾನದಿಂದ ನವೀಕೃತ ಮಾದರಿಯಲ್ಲಿ ಕಟ್ಟಡಗಳನ್ನು ನಿರ್ಮಿಸುವ ಮೂಲಕ ನಾವು ಶಕ್ತಿ/ ಇಂಧನವನ್ನು ಉಳಿತಾಯ ಮಾಡಬೇಕಿದೆ ಎಂದರು.
ಭವಿಷ್ಯತ್ತಿನ ದೃಷ್ಟಿಯಿಂದ ನಾವು ಶಕ್ತಿ ಸಂರಕ್ಷಣೆ ಮಾಡುವ ಮೂಲಕ ಶಕ್ತಿ ಸಂರಕ್ಷಣೆಯಲ್ಲಿ ಸ್ವಾವಲಂಬನೆ ಹೊಂದಬೇಕಿದೆ ಎಂದರು. ಕಾಲೇಜಿನ ವಿವಿಧ ವಿಭಾಗದ ಮುಖ್ಯಸ್ಥರಾದ ಡಾ ಕೆ.ಬಿ.ಪರಶಿವಮೂರ್ತಿ, ಡಾ ಎಸ್.ರಂಗನಾಥ್, ಪ್ರೊ ಟಿ.ಪವಿತ್ರ,ಜಿಲ್ಲಾ ವಿಜ್ಞಾನ ಪರಿಷತ್ತಿನ ಸಹ ಕಾರ್ಯದರ್ಶಿ ಜಿ.ಶ್ರೀಹರ್ಷ,
ಉಪನ್ಯಾಸಕರು, ವಿದ್ಯಾರ್ಥಿಗಳು ಇದ್ದರು.
ಕಾಲೇಜಿನ ಅಧೀಕ್ಷಕರಾದ ಎಚ್.ಎ.ರೂಪ ನಿರ್ವಹಿಸಿದರು.
ಸಹ ಪ್ರಾಧ್ಯಾಪಕಿ ರಾಧಿಕಾ ಸ್ವಾಗತಿಸಿದರು. ಸಹ ಪ್ರಾಧ್ಯಾಪಕ ಡಾ ಎಂ.ಎಸ್. ಸುರೇಶ್ ವಂದಿಸಿದರು. ಸಹ ಪ್ರಾಧ್ಯಾಪಕಿ ಡಾ. ಹೇಮಲತಾ ಮತ್ತು ಗ್ರಂಥಪಾಲಕರಾದ ಡಾ ಸತ್ಯಶ್ರೀ ಅತಿಥಿ ಪರಿಚಯ ಮಾಡಿದರು.
ಕಾರ್ಯಾಗಾರದ ಅಂಗವಾಗಿ ವಿದ್ಯಾರ್ಥಿಗಳಿಗೆ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ಕುರಿತು ವಸ್ತು ಪ್ರದರ್ಶನ ಹಾಗೂ ಪ್ರಬಂಧ ಸ್ಪರ್ಧೆ ನಡೆಯಿತು.
ಕಾಲೇಜಿನ ವಿವಿಧ ವಿಭಾಗದ ಮುಖ್ಯಸ್ಥರಾದ ಡಾ ಕೆ.ಬಿ.ಪರಶಿವಮೂರ್ತಿ, ಡಾ ಎಸ್.ರಂಗನಾಥ್, ಪ್ರೊ ಟಿ.ಪವಿತ್ರ,ಜಿಲ್ಲಾ ವಿಜ್ಞಾನ ಪರಿಷತ್ತಿನ ಸಹ ಕಾರ್ಯದರ್ಶಿ ಜಿ.ಶ್ರೀಹರ್ಷ, ಸಂಪನ್ಮೂಲ ವ್ಯಕ್ತಿ ಜಿ.ಶ್ರೀನಾಥ್,
ಉಪನ್ಯಾಸಕರು, ವಿದ್ಯಾರ್ಥಿಗಳು ಇದ್ದರು.
ಕಾಲೇಜಿನ ಅಧೀಕ್ಷಕರಾದ ಎಚ್.ಎ.ರೂಪ ನಿರ್ವಹಿಸಿದರು. ಸಹ ಪ್ರಾಧ್ಯಾಪಕಿ ರಾಧಿಕಾ ಸ್ವಾಗತಿಸಿದರು. ಸಹ ಪ್ರಾಧ್ಯಾಪಕ ಡಾ ಎಂ.ಎಸ್. ಸುರೇಶ್ ವಂದಿಸಿದರು. ಸಹ ಪ್ರಾಧ್ಯಾಪಕಿ ಡಾ.ಹೇಮಲತಾ
ಮತ್ತು ಗ್ರಂಥಪಾಲಕರಾದ ಡಾ.ಸತ್ಯಶ್ರೀ ಅತಿಥಿ ಪರಿಚಯ ಮಾಡಿದರು.

ಕಾರ್ಯಕ್ರಮದಲ್ಲಿ ನವೀಕರಿಸಬಹುದಾದ ಇಂಧನ ಮೂಲಗಳ ಸಂರಕ್ಷಣೆ ಕುರಿತು ಭಿತ್ತಿಪತ್ರಗಳನ್ನು ಹಿಡಿದು ಜಾಗೃತಿ ಮೂಡಿಸಲಾಯಿತು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಎಚ್1-ಎನ್1 : ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸೂಚನೆ*

ಆಗಷ್ಟ್ 29, 2026

*ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟು, ವ್ಯಾಕರಣದ ಶಿಸ್ತು ರೂಢಿಸಿದವರು ಕೋಡಿ ಕುಶಾಲಪ್ಪ ಗೌಡರು : ಸದಾನಂದ ಮಾವಜಿ*

ಆಗಷ್ಟ್ 29, 2026

*ಅಂತರ ಶಾಲಾ ಶಟಲ್ ಬ್ಯಾಡ್ಮಿಂಟನ್: ಶ್ರೀ ರಾಜರಾಜೇಶ್ವರಿ ಶಾಲೆ ವಿದ್ಯಾರ್ಥಿಗಳ ಸಾಧನೆ*

ಆಗಷ್ಟ್ 29, 2026

*ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟು, ವ್ಯಾಕರಣದ ಶಿಸ್ತು ರೂಢಿಸಿದವರು ಕೋಡಿ ಕುಶಾಲಪ್ಪ ಗೌಡರು : ಸದಾನಂದ ಮಾವಜಿ*

ಆಗಷ್ಟ್ 29, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, ಆ.29 NEWS DESK : ಅರೆಭಾಷೆಗೆ ಸಾಂಸ್ಕೃತಿಕ ನೆಲೆಗಟ್ಟನ್ನು ಹಾಕಿಕೊಟ್ಟು, ವ್ಯಾಕರಣದ ಶಿಸ್ತನ್ನು ರೂಢಿಸಿದವರು ಭಾಷಾ ವಿಜ್ಞಾನಿ ಡಾ.…

*ಅಂತರ ಶಾಲಾ ಶಟಲ್ ಬ್ಯಾಡ್ಮಿಂಟನ್: ಶ್ರೀ ರಾಜರಾಜೇಶ್ವರಿ ಶಾಲೆ ವಿದ್ಯಾರ್ಥಿಗಳ ಸಾಧನೆ*

ಆಗಷ್ಟ್ 29, 2026

ಕೊಡಗಿನಲ್ಲಿ ಕರವೇ ಸ್ವಾಭಿಮಾನಿ ಸೇನೆಗೆ ನೂತನ ಸದಸ್ಯರ ಸೇರ್ಪಡೆ

ಆಗಷ್ಟ್ 29, 2026

*ತೀವ್ರಗೊಳಿಸಿದ ಐಇಸಿ ಅಭಿಯಾನ : ಮ್ಯಾರಥಾನ್ ಮೂಲಕ ಎಚ್‌ಐವಿ/ಏಡ್ಸ್ ಜಾಗೃತಿ*

ಆಗಷ್ಟ್ 29, 2026

*ಮಡಿಕೇರಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸಭೆ : ಸ್ವಾವಲಂಬಿ ಮಹಿಳಾ ಫಲಾನುಭವಿಗಳ ಗುರುತಿಸಿ ಸನ್ಮಾನಕ್ಕೆ ಕ್ರಮ*

ಆಗಷ್ಟ್ 29, 2026

*ಶಿಸ್ತುಬದ್ಧ ಶಿಕ್ಷಣದಿಂದಲೇ ಸಮಾಜದ ಯಶಸ್ಸು, ದೇಶದ ಪ್ರಗತಿ : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 29, 2026

*ಫೀ.ಮಾ. ಕಾರ್ಯಪ್ಪ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ: ಶಿಸ್ತುಬದ್ಧ ಜೀವನವೇ ಸಾಧನೆಯ ದಾರಿದೀಪ: ಕರ್ನಲ್ ಸಂಜೀವ್ ಕುಮಾರ್*

ಆಗಷ್ಟ್ 29, 2026

*ಕೊಡಗು ವಿದ್ಯಾಲಯದಲ್ಲಿ ಬ್ರಹ್ಮಗಿರಿ ಸಹೋದಯ ಸಿಬಿಎಸ್ಇ ಶಾಲೆಗಳ ಸಾಂಸ್ಕೃತಿಕ ಸ್ಪರ್ಧೆ*

ಆಗಷ್ಟ್ 29, 2026

*ಮಡಿಕೇರಿ ನಗರಸಭೆ : ತ್ಯಾಜ್ಯ ನಿರ್ವಹಣೆಗೆ ವೈಜ್ಞಾನಿಕ ವಿಧಾನಕ್ಕೆ ಒತ್ತು : ಶಾಸಕ ಮಂತರ್ ಗೌಡ*

ಆಗಷ್ಟ್ 29, 2026

*ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಕುಂದುಕೊರತೆ ಸಭೆ : ಪರಿಶಿಷ್ಟರ ಸಮಸ್ಯೆಗಳನ್ನು ಕಾಲಮಿತಿಯಲ್ಲಿ ಪರಿಹರಿಸುವುದು ಆದ್ಯ ಕೆಲಸವಾಗಿದೆ : ಕೊಡಗು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಎನ್.ಬಿಂದುಮಣಿ*

ಆಗಷ್ಟ್ 29, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.