Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.20 ರಂದು ನಡೆಯುವ ಪಂದ್ಯಗಳು*
  • *ರೂ.15 ಲಕ್ಷ ಪರಿಹಾರ ವಿತರಣೆ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.19 ರಂದು ಗೆಲುವು ಸಾಧಿಸಿದ ತಂಡಗಳು*
  • *ಕ್ಷೇತ್ರ ಪುನರ್ ವಿಂಗಡಣೆಗೆ ಮುಂದಾಗಿ ಎಡವಿ ಬಿದ್ದ ಕೇಂದ್ರ ಸರಕಾರ : ಕೊಡಗು ಮಹಿಳಾ ಕಾಂಗ್ರೆಸ್ ಟೀಕೆ*
  • *ಯುಕೊ ಅಧ್ಯಕ್ಷ ಮಂಜು ಚಿಣ್ಣಪ್ಪಗೆ ಸನ್ಮಾನ*
  • *ವಿಶ್ವ ಪರಂಪರೆಯ ತಾಣಗಳು ನಮ್ಮ ಇತಿಹಾಸದ ಸಾಕ್ಷಿಗಳು : ಬರಹ : ಗೀತಾಂಜಲಿ ಎನ್.ಎಂ. ಸೋಮವಾರಪೇಟೆ*
  • *3000 ಉದ್ಯೋಗ ಸೃಷ್ಟಿ: ಕೊಡಗು ಉದ್ಯೋಗ ಮೇಳಕ್ಕೆ ಚಾಲನೆ*
  • *ಕುಶಾಲನಗರ ಬಲಿಜ ಸಮಾಜದಿಂದ ಕೈವಾರ ತಾತಯ್ಯ ಜಯಂತಿ ಆಚರಣೆ*
  • *ಕುಶಾಲನಗರ : ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಅಗ್ನಿ ‌ಅವಘಡಗಳ‌ ಕುರಿತು ವಿಶೇಷ ಕಾರ್ಯಾಗಾರ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.19 ರಂದು ನಡೆಯುವ ಪಂದ್ಯಗಳು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಅಂದದ ಚಂದದ ತಾಣ ಭಾಗಮಂಡಲದ ಬಸ್ ತಂಗುದಾಣ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಅಂದದ ಚಂದದ ತಾಣ ಭಾಗಮಂಡಲದ ಬಸ್ ತಂಗುದಾಣ*

ಜನವರಿ 9, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.9 : ಬಸ್ ತಂಗುದಾಣವೆಂದರೆ ಬಿರುಕು ಬಿಟ್ಟ ಗೋಡೆಗಳು, ಮುರಿದ ಛಾವಣಿ, ಕಸದ ರಾಶಿ, ದುರ್ನಾತ ಬೀರುವ ಶೌಚಾಲಯ ಕಣ್ಣ ಮುಂದೆ ಹಾದು ಹೋಗುತ್ತದೆ.
ಪರಿಣಾಮವಾಗಿ ತಂಗುದಾಣವಿದ್ದರೂ ಪ್ರಯಾಣಿಕರು ಹೊರಗೆ ಮರದ ನೆರಳಲ್ಲೋ, ರಸ್ತೆ ಬದಿಯ ಅಂಗಡಿಗಳಲ್ಲೋ ಆಶ್ರಯ ಪಡೆಯುವುದು ಸಾಮಾನ್ಯವಾಗಿದೆ. ಆದರೆ ಇದಕ್ಕೆ ವ್ಯತಿರಿಕ್ತ ಎಂಬಂತೆ ಬಣ್ಣ ಬಣ್ಣದ ಚಿತ್ರಗಳೊಂದಿಗೆ ಹಲವು ಸಂದೇಶಗಳನ್ನು ಸಾರುವ ಬಸ್ ತಂಗುದಾಣವೊಂದು ಕೊಡಗಿನ ತೀರ್ಥಕ್ಷೇತ್ರವಾದ ಭಾಗಮಂಡಲ ಸಮೀಪದ ಕೋರಂಗಾಲ ಗ್ರಾಮದಲ್ಲಿ ನಿರ್ಮಾಣವಾಗಿದ್ದು, ಇದೀಗ ಈ ಬಸ್ ತಂಗುದಾಣ ಜನಾಕರ್ಷಣೆಯ ಕೇಂದ್ರವಾಗಿದೆ.
ಭಾಗಮಂಡಲ ಗ್ರಾಮ ಪಂಚಾಯತ್ ಅಧ್ಯಕ್ಷ ಕಾಳನ ರವಿ ಅವರ ಕಲ್ಪನೆಯ ಕೂಸಾಗಿರುವ ಈ ತಂಗುದಾಣದಲ್ಲಿ ನೇಗಿಲ ಯೋಗಿ, ಬೆಳೆಯ ಸಿರಿ ಮೊಳಕೆಯಲ್ಲಿ, ಎಪಿಜೆ ಅಬ್ದುಲ್ ಕಲಾಂ, ಚಂದ್ರಯಾನದ ವಿಕ್ರಂ ಲ್ಯಾಂಡರ್ ಸೇರಿದಂತೆ ಆಕರ್ಷಕ ಚಿತ್ರಗಳು ರಾರಾಜಿಸುತ್ತಿವೆ.
ಸುಮಾರು 32 ಅಡಿ ಉದ್ದ, 10 ಅಡಿ ಅಗಲದ ಅಂದಾಜು 10 ಜನ ಕೂರಲು ಸ್ಥಳಾವಕಾಶವಿರುವ ಈ ತಂಗುದಾಣದಲ್ಲಿ ಶೌಚಾಲಯದ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಶೌಚಾಲಯ ಸಹಿತ ನಿರ್ಮಾಣವಾಗಿರುವ ಏಕೈಕ ತಂಗುದಾಣ ಇದು ಎಂಬುದು ಇದರ ಮತ್ತೊಂದು ಹೆಗ್ಗಳಿಕೆ.
ಕೋರಂಗಾಲ ಗ್ರಾಮದಲ್ಲಿ ವಾಜಪೇಯಿ ವಸತಿ ಶಾಲೆಯಿದ್ದು, ಸುಮಾರು 520 ವಿದ್ಯಾರ್ಥಿಗಳು ಇಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಇವರನ್ನು ಕಾಣಲೆಂದು ದಿನಂಪ್ರತಿ ದೂರದ ಊರುಗಳಿಂದ ಪೋಷಕರು ಬರುತ್ತಾರೆ. ಆದರೆ ಇವರಿಗೆ ಶಾಲೆಯ ಒಳಗೆ ಇರುವ ಶೌಚಾಲಯ ಬಳಸಲು ಅನುಮತಿ ಇರುವುದಿಲ್ಲ. ಅದರಲ್ಲೂ ಮಹಿಳೆಯರು ಸಾಕಷ್ಟು ಸಂಕಟ ಅನುಭವಿಸಬೇಕಾಗುತ್ತದೆ. ಇದರೊಂದಿಗೆ ಭಾಗಮಂಡಲಕ್ಕೆ ಪ್ರತಿನಿತ್ಯ ಅಧಿಕ ಸಂಖ್ಯೆಯ ಭಕ್ತರು, ಪ್ರವಾಸಿಗರೂ ಆಗಮಿಸುತ್ತಾರೆ. ಇವರೆಲ್ಲರಿಗೂ ಅನುಕೂಲವಾಗಲೆಂಬ ನಿಟ್ಟಿನಲ್ಲಿ ಬಸ್ ತಂಗುದಾಣಕ್ಕೆ ಹೊಂದಿಕೊಂಡಂತೆ ಶೌಚಾಲಯ ನಿರ್ಮಿಸಲಾಗಿದೆ. ಸಾರ್ವಜನಿಕ ತಾಣವಾಗಿರುವುದರಿಂದ ಹೆಚ್ಚು ಸ್ವಚ್ಛವಾಗಿರಬೇಕೆಂಬ ದಿಸೆಯಲ್ಲಿ ಪಾಶ್ಚಾತ್ಯ ಶೈಲಿಯ ಕಮೋಡ್ ಬಳಸಲಾಗಿದೆ. ಗ್ರಾಮದ ರಸ್ತೆ ಬದಿಯಲ್ಲೇ ಜಲಜೀವನ್ ಮಿಷನ್ ಯೋಜನೆಯ ಪೈಪ್ ಲೈನ್ ಇರುವುದರಿಂದ ಶೌಚಾಲಯಕ್ಕೆ ನೀರಿನ ಸಂಪರ್ಕ ನೀಡುವುದಕ್ಕೂ ಸಮಸ್ಯೆಯಿಲ್ಲ ಎನ್ನುತ್ತಾರೆ ಪಂಚಾಯತ್ ಅಧ್ಯಕ್ಷ ಕಾಳನ ರವಿ.
ಸಾಮಾನ್ಯವಾಗಿ ಬಸು ತಂಗುದಾಣಗಳಲ್ಲಿ ಸರ್ಕಾರದ ವಿವಿಧ ಯೋಜನೆಗಳ ಭಿತ್ತಿ ಪತ್ರವನ್ನು ಅಂಟಿಸಲಾಗುತ್ತದೆ. ಇದರಿಂದ ತಂಗುದಾಣಗಳ ಅಂದ ಕೆಡುತ್ತದೆ. ಅದಕ್ಕಾಗಿ ಇಲ್ಲಿ ದೇಶದ ಸಾಧನೆಯನ್ನು ಬಿಂಬಿಸುವ ಚಿತ್ರಗಳನ್ನು ರಚಿಸಲಾಗಿದ್ದು, ಭಿತ್ತಿ ಪತ್ರಗಳನ್ನು ಅಂಟಿಸಲು ಅವಕಾಶವಿಲ್ಲ ಎಂದು ಅವರು ಹೇಳಿದ್ದಾರೆ.
ತಂಗುದಾಣದ ಚಿತ್ರಗಳ ರಚನೆಗೆ ಸ್ವತಃ ಖರ್ಚು ಮಾಡಿದ್ದೇನೆ. ದಾನಿಗಳೂ ನೆರವು ನೀಡಿದ್ದಾರೆ. ಎಲ್ಲರ ಸಹಕಾರದಿಂದ ಸುಮಾರು 5.5 ಲಕ್ಷ ವೆಚ್ಚದಲ್ಲಿ ಉತ್ತಮ ಶೆಲ್ಟರ್ ನಿರ್ಮಾಣಗೊಂಡಿದೆ. ಭಕ್ತರಿಗೆ, ಪ್ರವಾಸಿಗರಿಗೆ, ಸ್ಥಳೀಯರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಶೌಚಾಲಯ ಸಹಿತ ಬಸ್ ಶೆಲ್ಟರ್ ನಿರ್ಮಿಸಲಾಗಿದೆ ಎಂದು ಹರ್ಷ ವ್ಯಕ್ತಪಡಿಸಿರುವ ಕಾಳನ ರವಿ, ಸಾರ್ವಜನಿಕರಲ್ಲಿ ಸ್ವಚ್ಛತೆಯ ಬಗ್ಗೆ ಜಾಗೃತಿ ಮೂಡಿಸುವ ಪ್ರಯತ್ನವನ್ನೂ ಈ ಮೂಲಕ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಕಾಳನ ರವಿ ಅವರ ಕನಸು ಎಲ್ಲರ ಸಹಕಾರದಿಂದ ನನಸಾಗಿದ್ದು, ಇಂತಹ ತಂಗುದಾಣಗಳು ಜಿಲ್ಲೆಯ ಪ್ರಮುಖ ಗ್ರಾಮ ಪಂಚಾಯತ್’ಗಳ ವ್ಯಾಪ್ತಿಯಲ್ಲಿ ನಿರ್ಮಾಣಗೊಂಡರೆ ಸಾರ್ವಜನಿಕರಿಗೂ ಅನುಕೂಲವಾಗಲಿದೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.20 ರಂದು ನಡೆಯುವ ಪಂದ್ಯಗಳು*

ಏಪ್ರಿಲ್ 19, 2026

*ರೂ.15 ಲಕ್ಷ ಪರಿಹಾರ ವಿತರಣೆ*

ಏಪ್ರಿಲ್ 19, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.19 ರಂದು ಗೆಲುವು ಸಾಧಿಸಿದ ತಂಡಗಳು*

ಏಪ್ರಿಲ್ 19, 2026

*ರೂ.15 ಲಕ್ಷ ಪರಿಹಾರ ವಿತರಣೆ*

ಏಪ್ರಿಲ್ 19, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK ಏ.19 : ಇತ್ತೀಚೆಗೆ ಆನೆ ದಾಳಿಯಿಂದ ಮೃತಪಟ್ಟ ದುರ್ದೈವಿ ಮುಕಳಮಾಡ ರತು ಕಾಯಿಮನೆ, ಪೊನ್ನಂಪೇಟೆ ತಾಲೂಕು,…

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.19 ರಂದು ಗೆಲುವು ಸಾಧಿಸಿದ ತಂಡಗಳು*

ಏಪ್ರಿಲ್ 19, 2026

*ಕ್ಷೇತ್ರ ಪುನರ್ ವಿಂಗಡಣೆಗೆ ಮುಂದಾಗಿ ಎಡವಿ ಬಿದ್ದ ಕೇಂದ್ರ ಸರಕಾರ : ಕೊಡಗು ಮಹಿಳಾ ಕಾಂಗ್ರೆಸ್ ಟೀಕೆ*

ಏಪ್ರಿಲ್ 19, 2026

*ಯುಕೊ ಅಧ್ಯಕ್ಷ ಮಂಜು ಚಿಣ್ಣಪ್ಪಗೆ ಸನ್ಮಾನ*

ಏಪ್ರಿಲ್ 18, 2026

*ವಿಶ್ವ ಪರಂಪರೆಯ ತಾಣಗಳು ನಮ್ಮ ಇತಿಹಾಸದ ಸಾಕ್ಷಿಗಳು : ಬರಹ : ಗೀತಾಂಜಲಿ ಎನ್.ಎಂ. ಸೋಮವಾರಪೇಟೆ*

ಏಪ್ರಿಲ್ 18, 2026

*3000 ಉದ್ಯೋಗ ಸೃಷ್ಟಿ: ಕೊಡಗು ಉದ್ಯೋಗ ಮೇಳಕ್ಕೆ ಚಾಲನೆ*

ಏಪ್ರಿಲ್ 18, 2026

*ಕುಶಾಲನಗರ ಬಲಿಜ ಸಮಾಜದಿಂದ ಕೈವಾರ ತಾತಯ್ಯ ಜಯಂತಿ ಆಚರಣೆ*

ಏಪ್ರಿಲ್ 18, 2026

*ಕುಶಾಲನಗರ : ವಿವೇಕಾನಂದ ವಿದ್ಯಾಸಂಸ್ಥೆಯಲ್ಲಿ ವಿದ್ಯಾರ್ಥಿಗಳಿಗೆ ಅಗ್ನಿ ‌ಅವಘಡಗಳ‌ ಕುರಿತು ವಿಶೇಷ ಕಾರ್ಯಾಗಾರ*

ಏಪ್ರಿಲ್ 18, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.19 ರಂದು ನಡೆಯುವ ಪಂದ್ಯಗಳು*

ಏಪ್ರಿಲ್ 18, 2026

ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.18 ರಂದು ಗೆಲುವು ಸಾಧಿಸಿದ ತಂಡಗಳು

ಏಪ್ರಿಲ್ 18, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.