Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ಮಡಿಕೇರಿಯಲ್ಲಿ  ಶ್ರೀ ಆದಿ ಶಂಕರಾಚಾರ್ಯರ ಜಯಂತಿ ಆಚರಣೆ :  ಶಂಕರಾಚಾರ್ಯರ ಸಂದೇಶ, ತತ್ವಗಳು ಸಮಾಜಕ್ಕೆ ಮಾರ್ಗದರ್ಶನ : ಅನಂತ ಶಯನ
  • *ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ಸಭೆ*
  • *ಕೊಡಗು : ಏ.23 ರಿಂದ 9 ನೇ ಸುತ್ತಿನ ಕಾಲುಬಾಯಿ ರೋಗದ ಲಸಿಕಾ ಅಭಿಯಾನ*
  • *ಪಿರಿಯಾಪಟ್ಟಣ : ರೂ 419.78 ಕೋಟಿಗಳ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ*
  • *ಶ್ರದ್ಧಾಭಕ್ತಿಯಿಂದ ಜರುಗಿದ ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದ ಪ್ರತಿಷ್ಠಾ ವರ್ಧಂತಿ ಮಹೋತ್ಸವ*
  • *ಕುಶಾಲನಗರ ತಾಲ್ಲೂಕು ಪತ್ರಕತ೯ರ ಸಂಘದಿಂದ ನೇಗಿಲ ಯೋಗಿ ಪ್ರಶಸ್ತಿ ಪ್ರದಾನ : ಕೊಡಗಿನಲ್ಲಿ ಕೃಷಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶ : ಆರ್.ಕೆ.ಬಾಲಚಂದ್ರ*
  • *ಮೇ 6 ರಿಂದ 10ರವರೆಗೆ “ಕೊಡಗು ಕಪ್” ಜಮಾಅತ್ ಮಟ್ಟದ ಕ್ರಿಕೆಟ್ ಪಂದ್ಯಾವಳಿ*
  • *ಎಡಮ್ಯಾರ್ ಮಾಸಿಕ ಸ್ಮರಣಾರ್ಥ ದೇವಟ್ ಪರಂಬುವಿನಲ್ಲಿ ಸಿಎನ್‍ಸಿ ಪುಷ್ಪನಮನ*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.22 ರಂದು ನಡೆಯುವ ಪಂದ್ಯಗಳು*
  • *ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.21 ರ ವಿಜೇತ ತಂಡಗಳು*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಕೊಡವ ಲ್ಯಾಂಡ್ ಮತ್ತು ಸ್ವಯಂ ನಿರ್ಣಯದ ಹಕ್ಕು ಕೊಡವರ ಜನ್ಮ ಸಿದ್ಧ ಹಕ್ಕು : ಎನ್.ಯು.ನಾಚಪ್ಪ ಪ್ರತಿಪಾದನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಕೊಡವ ಲ್ಯಾಂಡ್ ಮತ್ತು ಸ್ವಯಂ ನಿರ್ಣಯದ ಹಕ್ಕು ಕೊಡವರ ಜನ್ಮ ಸಿದ್ಧ ಹಕ್ಕು : ಎನ್.ಯು.ನಾಚಪ್ಪ ಪ್ರತಿಪಾದನೆ*

ಜನವರಿ 12, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಜ.12 : ಕೊಡವರಂತಹ ಆದಿಮ ಸಂಜಾತ ಅತೀಸೂಕ್ಷ್ಮ ಸಮುದಾಯಗಳ ಉಳಿವಿಗಾಗಿ ಸಂವಿಧಾನದಡಿಯಲ್ಲಿ ನ್ಯಾಯಸಮ್ಮತವಾದ ಹಕ್ಕುಗಳನ್ನು ಪ್ರತಿಪಾದಿಸಲು ಅವಕಾಶವಿದ್ದು, ಸ್ವಯಂ ನಿರ್ಣಯದ ಹಕ್ಕಿನ ಮೂಲಕ ಕೊಡವ ಲ್ಯಾಂಡ್ ಹೊಂದುವುದು ಕೊಡವರ ಅಂತರ್ಗತ, ಮೂಲಭೂತ, ಜನ್ಮಸಿದ್ಧ ಹಕ್ಕಾಗಿದೆ ಎಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ಅಧ್ಯಕ್ಷ ಎನ್.ಯು.ನಾಚಪ್ಪ ಪ್ರತಿಪಾದಿಸಿದ್ದಾರೆ.
ರಾಜ್ಯದಲ್ಲಿ ಇತರರ ಬಗ್ಗೆ ಎಂದಿಗೂ ಕಾಳಜಿ ಇಲ್ಲದ ಜನರು ಊಳಿಗಮಾನ್ಯ ಮನೋಭಾವದಿಂದ ರಾಜ್ಯವನ್ನು ಆಳುತ್ತಿದ್ದಾರೆ. ಅವರು ರಾಜ್ಯದ ಕನಿಷ್ಠ 60 ವಿಧಾನಸಭಾ ಕ್ಷೇತ್ರಗಳಲ್ಲಿ ಬಹುಮತವನ್ನು ಹೊಂದಿದ್ದಾರೆ ಮತ್ತು ತಮ್ಮ 60 ವಿಧಾನಸಭಾ ಕ್ಷೇತ್ರಗಳ ಭಾಗವಾಗಿರುವ ಇತರ ಸೂಕ್ಷ್ಮ ಸಮುದಾಯಗಳ ಯೋಗಕ್ಷೇಮದ ಬಗ್ಗೆ ಅವರು ಎಂದಿಗೂ ತಲೆಕೆಡಿಸಿಕೊಂಡಿಲ್ಲ ಎಂದು ಟೀಕಿಸಿದ್ದಾರೆ.
ಇತರರ ಬಗ್ಗೆ ಮೊಸಳೆ ಕಣ್ಣೀರು ಸುರಿಸುವ ಮಂದಿ ತಮ್ಮ ಸಮುದಾಯಕ್ಕೆ ಎಷ್ಟು ಸೀಟು ಬೇಕೆನ್ನುವ ಲೆಕ್ಕಾಚಾರದಲ್ಲಿ ಚುನಾವಣೆಗಳ ಸಂದರ್ಭ ಮತಾಂಧತೆಯ ಅಶ್ಲೀಲತೆಯನ್ನು ಅನಾವಣಗೊಳಿಸುತ್ತಾರೆ. ತಮ್ಮ ಈ ನಡೆ ಜಾತ್ಯತೀತತೆಯ ಮತ್ತು ಅಂತರ್ಗತ ರುಜುವಾತುಗಳಿಗೆ ಅನುಗುಣವಾಗಿದೆ ಎಂದು ಹೇಳಿಕೊಂಡೆ ಮತಾಂಧತೆಯ ವಿಕೃತಿಯನ್ನು ಮೆರೆಯುತ್ತಾರೆ. ಕೊಡವರಂತಹ ಆದಿಮ ಸಂಜಾತ ನಗಣ್ಯ ಅತೀಸೂಕ್ಷ್ಮ ಸಮುದಾಯಗಳು ತಮ್ಮ ಉಳಿವಿಗಾಗಿ ಸಂವಿಧಾನದಡಿಯಲ್ಲಿ ನ್ಯಾಯಸಮ್ಮತವಾದ ಹಕ್ಕುಗಳನ್ನು ಪ್ರತಿಪಾದಿಸಿದರೆ, ಈ ಕೋಮುವಾದಿಗಳು ಮೊಸಳೆ ಕಣ್ಣೀರು ಸುರಿಸುತ್ತಾ, ಕೊಡವರ ಹಕ್ಕುಗಳು ಇತರ ಸಮುದಾಯದ ಹಿತಾಸಕ್ತಿಗಳಿಗೆ ಧಕ್ಕೆ ತರುತ್ತವೆ ಎಂದು ಅರ್ಥಹೀನವಾಗಿ ವರ್ತಿಸುತ್ತಿದ್ದಾರೆ. ತಾವು ಬಹುದೊಡ್ಡ ಮಾನವತಾವಾದದ ಹರಿಕಾರರು ಮತ್ತು ಸಾಮಾಜಿಕ ಸಮತಾವಾದದ ವೀರಾಗ್ರೇಸರೆಂದು ಹುಸಿಯಾಗಿ ಬಿಂಬಿಸಿಕೊಳ್ಳುತ್ತಿದ್ದಾರೆ.
ಸುಳ್ಯ-ಬೆಳ್ತಂಗಡಿಯಿಂದ ಹಾವೇರಿ ತನಕ, ಹಾವೇರಿಯಿಂದ ಚಿತ್ರದುರ್ಗ, ಚಿತ್ರದುರ್ಗದಿಂದ ಕೋಲಾರ, ಕೋಲಾರದಿಂದ ಚಾಮರಾಜನಗರ, ಚಾಮರಾಜನಗರದಿಂದ ಪಿರಿಯಾಪಟ್ಟಣದವರೆಗಿನ ದಟ್ಟ ಬಾಹುಳ್ಯ ಪ್ರದೇಶದಲ್ಲಿ ತಮ್ಮ ಜನಸಂಖ್ಯಾ ತೂಕವನ್ನು ಹೊಂದಿರುವ ಅವರು ಮಾನಸಿಕ ಯುದ್ಧದ ಮೂಲಕ ನಮ್ಮನ್ನು ಬೆದರಿಸಲು ಮತ್ತು ಕೊಡವರಲ್ಲಿ ಭಯದ ಮನೋವಿಕಾರವನ್ನು ಉಂಟು ಮಾಡಲು ಪ್ರಯತ್ನಿಸುತ್ತಿದ್ದಾರೆ. ಈ ಹೇಯ ಕೃತ್ಯಕ್ಕೆ ರಾಜ್ಯದ ಇತರ ಸಣ್ಣಪುಟ್ಟ ಸಮುದಾಯಗಳನ್ನು ಮಾನವ ಗುರಾಣಿಯಾಗಿ ಬಳಸಿಕೊಳ್ಳುತ್ತಾರೆ. ವಾಸ್ತವವಾಗಿ ಅವರಿಗೆ ಪರಿಶಿಷ್ಟರು ಹಾಗೂ ರಾಜ್ಯದ ಇತರ ಅಳಿವಿನಂಚಿನಲ್ಲಿರುವ ಕೆಳ ಹಂತದ ಸಮುದಾಯಗಳ ಬಗ್ಗೆ ಕಾಳಜಿ ಅಥವಾ ಪ್ರೀತಿ ಲವಲೇಷವು ಇಲ್ಲ. ಮಾನವ ಮಲ(ಅಮೇಧ್ಯ) ತಿನ್ನುವಂತೆ ಮಾಡಿದ ಅನೇಕ ಅಮಾನವೀಯ ಹೇಯ ಕೃತ್ಯಗಳೊಂದಿಗೆ ತಮ್ಮ ಕೊಳಕು ಮುಖವನ್ನು ಪ್ರದರ್ಶಿಸಿದ ನಿದರ್ಶನವನ್ನು ಯಾರೂ ಮರೆಯಲು ಸಾಧ್ಯವಿಲ್ಲ ಎಂದು ಆರೋಪಿಸಿದ್ದಾರೆ.
ಕೊಡವರಿಗೆ ಸಂವಿಧಾನವೇ ಸರ್ವಶ್ರೇಷ್ಠವಾಗಿದೆ, ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ ಉದಾತ್ತ ಸಂವಿಧಾನ ಮಾತ್ರ ಈ ಬಹುಸಂಖ್ಯಾತ ಸಮುದಾಯಗಳ ದುಷ್ಟ ವಿನ್ಯಾಸಗಳ ಕಪಿಮುಷ್ಠಿಯಿಂದ ಕೊಡವರು ಹೊರಬರಲು ದಿವ್ಯಾಔಷಧವಾಗಿದೆ. ತಮ್ಮ ಜನಸಂಖ್ಯಾ ಬಾಹುಳ್ಯದ ತೂಕದ ಮೂಲಕ ಬೆದರಿಕೆ ಹಾಕುವುದರೊಂದಿಗೆ ವ್ಯವಸ್ಥಿತವಾದ ಸಾಂವಿಧಾನಿಕ ಉಲ್ಲಂಘನೆಯನ್ನು ಈ ಸಮುದಾಯಗಳು ನಡೆಸಿದ್ದು, ನಮ್ಮ ರಕ್ಷಣೆಗಾಗಿ ಮತ್ತು ಅವರಿಂದ ಉಂಟಾದ ಅಸಂಗತತೆಗಾಗಿ ನಮ್ಮ ದೇಶದ ಅತ್ಯುನ್ನತ ಕಾನೂನು ನ್ಯಾಯಾಲಯ (ಸರ್ವೋಚ್ಚ ನ್ಯಾಯಾಲಯ) ಮತ್ತು ವಿಶ್ವಸಂಸ್ಥೆಯ ಬಾಗಿಲು ತಟ್ಟಲು ನಮಗೆ ದಾರಿ ಮಾಡಿಕೊಡುತ್ತಿದೆ ಎಂದು ತಿಳಿಸಿದ್ದಾರೆ.
ಕೊಡವರು ಧೈರ್ಯವಾಗಿರಬೇಕು, ಕೊಡವ ನೆಲ ನಮ್ಮ ಸಾಂಪ್ರದಾಯಿಕ ಮತ್ತು ಪ್ರಾಚೀನ ಅವಿಭಾಜ್ಯ ತಾಯ್ನಾಡಾಗಿದೆ. ಇದನ್ನು ಪುನರುಜ್ಜೀವನಗೊಳಿಸೋಣ ಮತ್ತು ರಕ್ಷಿಸೋಣ. ಇದು ನಮ್ಮ ಅಂತರ್ಗತ, ಮೂಲಭೂತ, ಜನ್ಮಸಿದ್ಧ ಹಕ್ಕು, ನಮ್ಮ ಹಕ್ಕಿನ ಬಗ್ಗೆ ಸಂವಿಧಾನದಲ್ಲಿ ಪ್ರತಿಪಾದಿಸಲಾಗಿದೆ. ಈ ಪ್ರಜಾಪೀಡಕ ಉಪದ್ರ ಜೀವಿಗಳು ತಮ್ಮ ಬಲಾಢ್ಯ ಜನಸಂಖ್ಯಾ ತೂಕದ ಮೂಲಕ ಒಡ್ಡುವ ಗೊಡ್ಡು ಬೆದರಿಕೆಯನ್ನು ನಾವು ಗಮನಿಸಬಾರದು. ನಮ್ಮ ಅಂತರ್ಗತ, ಮೂಲಭೂತ, ಜನ್ಮಸಿದ್ಧ ಹಕ್ಕು ಕೊಡವ ಲ್ಯಾಂಡ್ ಆಗಿದ್ದು, ಇದನ್ನು ವಿಶ್ವರಾಷ್ಟ್ರ ಸಂಸ್ಥೆ ಚಾರ್ಟರ್/ಸನದ್ ಮತ್ತು ನಮ್ಮ ಶ್ರೇಷ್ಠ ಸಂವಿಧಾನದ ಅಡಿಯಲ್ಲಿ ಖಾತರಿಪಡಿಸುತ್ತದೆ. ಆ ಮೂಲಕ ನಮ್ಮ ಭವಿಷ್ಯ ಮತ್ತು ಸ್ವಯಂ ನಿರ್ಣಯದ ಹಕ್ಕುಗಳನ್ನು ನಿರ್ಧರಿಸಿಕೊಳ್ಳೋಣ. ಇವರ್ಯಾರಿಂದಲೂ ಕೊಡವರನ್ನು ಬೆದರಿಸಲು ಅಥವಾ ಆಮಿಷದಿಂದ ಮಣಿಸಲು ಸಾಧ್ಯವಿಲ್ಲ ಎಂದು ಎನ್.ಯು.ನಾಚಪ್ಪ ದೃಢ ನುಡಿಯಾಡಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

ಮಡಿಕೇರಿಯಲ್ಲಿ  ಶ್ರೀ ಆದಿ ಶಂಕರಾಚಾರ್ಯರ ಜಯಂತಿ ಆಚರಣೆ :  ಶಂಕರಾಚಾರ್ಯರ ಸಂದೇಶ, ತತ್ವಗಳು ಸಮಾಜಕ್ಕೆ ಮಾರ್ಗದರ್ಶನ : ಅನಂತ ಶಯನ

ಏಪ್ರಿಲ್ 21, 2026

*ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ಸಭೆ*

ಏಪ್ರಿಲ್ 21, 2026

*ಕೊಡಗು : ಏ.23 ರಿಂದ 9 ನೇ ಸುತ್ತಿನ ಕಾಲುಬಾಯಿ ರೋಗದ ಲಸಿಕಾ ಅಭಿಯಾನ*

ಏಪ್ರಿಲ್ 21, 2026

*ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ಸಭೆ*

ಏಪ್ರಿಲ್ 21, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ ಏ.21 NEWS DESK : ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗದ ಸಭೆಯು ಶನಿವಾರ ನಗರದ ಪತ್ರಿಕಾಭವನದಲ್ಲಿ…

*ಕೊಡಗು : ಏ.23 ರಿಂದ 9 ನೇ ಸುತ್ತಿನ ಕಾಲುಬಾಯಿ ರೋಗದ ಲಸಿಕಾ ಅಭಿಯಾನ*

ಏಪ್ರಿಲ್ 21, 2026

*ಪಿರಿಯಾಪಟ್ಟಣ : ರೂ 419.78 ಕೋಟಿಗಳ ಅಭಿವೃದ್ಧಿ ಕಾಮಗಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ*

ಏಪ್ರಿಲ್ 21, 2026

*ಶ್ರದ್ಧಾಭಕ್ತಿಯಿಂದ ಜರುಗಿದ ಪುದುಪಾಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಾಲಯದ ಪ್ರತಿಷ್ಠಾ ವರ್ಧಂತಿ ಮಹೋತ್ಸವ*

ಏಪ್ರಿಲ್ 21, 2026

*ಕುಶಾಲನಗರ ತಾಲ್ಲೂಕು ಪತ್ರಕತ೯ರ ಸಂಘದಿಂದ ನೇಗಿಲ ಯೋಗಿ ಪ್ರಶಸ್ತಿ ಪ್ರದಾನ : ಕೊಡಗಿನಲ್ಲಿ ಕೃಷಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶ : ಆರ್.ಕೆ.ಬಾಲಚಂದ್ರ*

ಏಪ್ರಿಲ್ 21, 2026

*ಮೇ 6 ರಿಂದ 10ರವರೆಗೆ “ಕೊಡಗು ಕಪ್” ಜಮಾಅತ್ ಮಟ್ಟದ ಕ್ರಿಕೆಟ್ ಪಂದ್ಯಾವಳಿ*

ಏಪ್ರಿಲ್ 21, 2026

*ಎಡಮ್ಯಾರ್ ಮಾಸಿಕ ಸ್ಮರಣಾರ್ಥ ದೇವಟ್ ಪರಂಬುವಿನಲ್ಲಿ ಸಿಎನ್‍ಸಿ ಪುಷ್ಪನಮನ*

ಏಪ್ರಿಲ್ 21, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.22 ರಂದು ನಡೆಯುವ ಪಂದ್ಯಗಳು*

ಏಪ್ರಿಲ್ 21, 2026

*ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ : ಏ.21 ರ ವಿಜೇತ ತಂಡಗಳು*

ಏಪ್ರಿಲ್ 21, 2026

*ಶ್ರೀ ಓಂಕಾರೇಶ್ವರ ದೇವಾಲಯ ಹಾಗೂ ಶ್ರೀ ಆಂಜನೇಯ ದೇವಾಲಯದಲ್ಲಿ ವಾರ್ಷಿಕ ಪ್ರತಿಷ್ಠಾ ದಿನಾಚರಣೆ : ನೂತನವಾಗಿ ನವಗ್ರಹ ಪ್ರತಿಷ್ಠಾಪನೆ*

ಏಪ್ರಿಲ್ 21, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.