ಮಡಿಕೇರಿ ಜ.16 : ಬೆಂಗಳೂರು ಮೂಲದ ಐಟಿ ಕಂಪೆನಿ ಉದ್ಯೋಗಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಡಿಕೇರಿ ನಗರದ ಲಾಡ್ಜ್ ವೊಂದರಲ್ಲಿ ನಡೆದಿದೆ. ಬೆಂಗಳೂರು ಮೂಲದ ಸಂದೇಶ್(35) ಎಂಬಾತನೇ ಸಾವಿಗೆ ಶರಣಾಗಿರುವ ವ್ಯಕ್ತಿ.
ನಗರದ ಕೊಹಿನೂರ್ ರಸ್ತೆಯಲ್ಲಿರುವ ಲಾಡ್ಜ್ಗೆ 2 ದಿನಗಳ ಹಿಂದೆ ಬಂದಿದ್ದ ಸಂದೇಶ್ ಮಂಗಳವಾರ ಕೊಠಡಿ ಖಾಲಿ ಮಾಡುವುದಾಗಿ ಹೇಳಿ ಶುಲ್ಕವನ್ನು ಮೊದಲೇ ಪಾವತಿಸಿದ್ದ. ಆದರೆ ಇಂದು ಸ್ನಾನದ ಕೋಣೆಯಲ್ಲಿ ನೇಣು ಬಿಗಿದುಕೊಂಡಿರುವ ದೃಶ್ಯ ಕಂಡು ಬಂದಿದೆ. ಸಾವಿಗೂ ಮೊದಲು ಡೆತ್ನೋಟ್ ಬರೆದಿಟ್ಟಿದ್ದು, ಮಡಿಕೇರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.










