ಮಡಿಕೇರಿ ಜ.20 : NEWS DESK : ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ವತಿಯಿಂದ ನೀಡಲಾಗುವ ರಾಜ್ಯ ಮಟ್ಟದ ಯುವ ಪ್ರಶಸ್ತಿಗೆ ನೆಲಕ್ಕಿ ಯುವತಿ ಮಂಡಳಿಯ ಸದಸ್ಯರಾದ ಜೀವಿತ ಚಿಂತನ್ ಆಯ್ಕೆಯಾಗಿದ್ದಾರೆ.
ಜೀವಿತ ಚಿಂತನ್ ಯುವತಿ ಮಂಡಳಿ ವತಿಯಿಂದ ನಡೆಯುವ ವಿವಿಧ ಕಾರ್ಯಕ್ರಮಗಳಾದ ತಾಲ್ಲೂಕು ಯುವಜನ ಮೇಳ ಜಿಲ್ಲಾ ಯುವಜನ ಮೇಳ, ರಾಜ್ಯ ಯುವಜ ಮೇಳ ಹಾಗೂ ಜಿಲ್ಲಾ ಯುವಜನೋತ್ಸವ, ರಾಜ್ಯ ಯುವ ಜನೋತ್ಸವ, ಕನ್ನಡ ಸಾಹಿತ್ಯ ಪರಿಷತ್ ಹಾಗೂ ಇನ್ನಿತರ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ವಿಜೇತರಾಗಿದ್ದು, ಶ್ರಮದಾನ ರಕ್ತದಾನ, ಶೈಕ್ಷಣಿಕ ಚಟುವಟಿಕೆ, ದಸರಾ ಕಾರ್ಯಕ್ರಮ ವಿವಿಧ ಚಟುವಟಿಕೆಗಳಲ್ಲಿ ತೊಡಗಿಸಿ ಕೊಂಡಿದ್ದಾರೆ. ಇವರು ಉತ್ತಮ ಹಾಡುಗಾರರು, ನೃತ್ಯಗಾರರು, ಶಿಕ್ಷಕಿಯೂ ಹಾಗೂ ಲೇಖಕರು ಆಗಿದ್ದಾರೆ. ಇವರ ಸೇವೆಯನ್ನು ಪರಿಗಣಿಸಿ ಪ್ರಶಸ್ತಿಯನ್ನು ನೀಡಲಾಗಿದೆ.
ಜ.20 ರಂದು ಸುಬ್ರಮಣ್ಯದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.








