ವಿರಾಜಪೇಟೆ ಜ.24 NEWS DESK : ಅಯೋದ್ಯೆಯಲ್ಲಿ ಶ್ರೀ ರಾಮ ಮಂದಿರದ ಲೋಕಾರ್ಪಣೆ ಪ್ರಯುಕ್ತ ಬೇಟೋಳಿ ಶ್ರೀ ಪುದುಪಾಡಿ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ದೀಪೋತ್ಸವ ಕಾರ್ಯಕ್ರಮ ನಡೆಯಿತು.
ಶ್ರೀ ರಾಮ ಕಥೆ “ಚೂಡಾಮಣಿ ಪ್ರಧಾನ “ಪ್ರವಚನವನ್ನು ಪುತ್ತೂರಿನ ಪ್ರಖ್ಯಾತ ಯಕ್ಷಗಾನ ಭಾಗವತರಾದ ಗಣಪತಿ ಪದ್ಯಾಣರವರು ವಾಚಿಸಿದರೆ, ಪುತ್ತೂರಿನ ಪ್ರಖ್ಯಾತ ಯಕ್ಷಗಾನ ಭಾಗವತರಾದ ಡಾ. ಮಹಾಲಿಂಗ ಭಟ್ ವ್ಯಾಖ್ಯಾನವನ್ನು ಮಾಡಿದರು.
ಬಳಿಕ ಮಹಾ ಮಂಗಳಾರತಿ, ಪ್ರಸಾದ ವಿತರಣೆ ನಡೆಯಿತು. ಧಾರ್ಮಿಕ ಪೂಜಾ ಕಾರ್ಯಕ್ರಮಗಳನ್ನು ದೇವಾಲಯದ ಪ್ರಧಾನ ಅರ್ಚಕ ವಿಶ್ವನಾಥ್ ಭಟ್ ಹಾಗೂ ವಾಮನಮೂರ್ತಿ ಭಟ್ ಅವರ ನೇತೃತ್ವದಲ್ಲಿ ನಡೆಸಲಾಯಿತು.
ಈ ಸಂದರ್ಭ ಭಕ್ತಾದಿಗಳು, ಗ್ರಾಮಸ್ಥರು, ದೇವಾಲಯದ ಆಡಳಿತ ಮಂಡಳಿಯವರು ಹಾಜರಿದ್ದರು.









