ನಾಪೋಕ್ಲು ಜ.30 NEWS DESK : ಸಂವಿಧಾನ ಜಾಗೃತಿ ಜಾಥಾವು ಎಮ್ಮೆಮಾಡು, ಬಲ್ಲಮಾವಟಿ, ಅಯ್ಯಂಗೆರಿ ಗ್ರಾ.ಪಂ ವ್ಯಾಪ್ತಿಯಲ್ಲಿ ಯಶಸ್ವಿಯಾಗಿ ನಡೆಯಿತು.
ಕೆಪಿಎಸ್ ಶಾಲೆಯ ಶಿಕ್ಷಕಿ ಉ ಷಾರಾಣಿ ಸಂವಿಧಾನದ ರಚನೆ ಆಶಯಗಳ ಕುರಿತು ಮಾತನಾಡಿದರು.
ಸಮಾಜ ಕಲ್ಯಾಣ ಇಲಾಖೆಯ ಬಾಲಕೃಷ್ಣ ರೈ ಮಾತನಾಡ, ಜಾಥದ ದ್ಯೇಯೋದ್ಧೇಶಗಳ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭ ಪ್ರಮಾಣ ವಚನ ಸ್ವೀಕರಿಸಲಾಯಿತು.
ಕಾರ್ಯಕ್ರಮ ಗ್ರಾ.ಪಂ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್ ಅಧ್ಯಕ್ಷತೆಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ಕುಲ್ಲೇಟಿರ ಹೇಮಾ ಅರುಣ್ , ಸದಸ್ಯರಾದ ಕುಲ್ಲೇಟಿರ ಅರುಣ್ ಬೇಬ , ಮಾಚೇಟಿರ ಕುಸು ಕುಶಾಲಪ್ಪ, ಟಿ.ಎ.ಮಹಮ್ಮದ್ , ಯಶೋಧ ಕಟ್ಟಿ, ಗಂಗಮ್ಮ ,ಲಲಿತ, ಸಮಾಜ ಕಲ್ಯಾಣ ಇಲಾಖೆಯ ಬಾಲಕೃಷ್ಣ ರೈ, ಕೆಪಿಎಸ್ ಶಾಲೆಯ ಉಪ ಪ್ರಾಂಶುಪಾಲರಾದ ಎಂ.ಎಸ್. ಶಿವಣ್ಣ ಸೇರಿದಂತೆ ಅಂಗನವಾಡಿ ಕಾರ್ಯಕರ್ತೆಯರು , ಆಶಾ ಕಾರ್ಯಕರ್ತೆ ಯರು, ವಿವಿಧ ಶಾಲೆಗಳ ಶಿಕ್ಷಕ ವೃಂದ ವಿದ್ಯಾರ್ಥಿಗಳು, ಸಾರ್ವಜನಿಕರು ಪಾಲ್ಗೊಂಡಿದ್ದರು.
ಇದಕ್ಕೂ ಮುನ್ನ ನಾಪೋಕ್ಲು ಬಸು ನಿಲ್ದಾಣದಲ್ಲಿ ಪಂಚಾಯಿತಿ ಅಧ್ಯಕ್ಷೆ ವನಜಾಕ್ಷಿ, ಸದಸ್ಯರು ಸಂವಿಧಾನ ಜಾಗೃತಿ ಜಾಥಾ ರಥಕ್ಕೆ ಪುಷ್ಪಾರ್ಚನೆ ಮಾಡಿ ಸ್ವಾಗತಿಸಿದರು. ನಂತರ ಸ್ಕೌಟ್ಸ್ ಗೈಡ್ಸ್ ವಾದ್ಯಗೋಷ್ಠಿಯೊಂದಿಗೆ ಮೆರವಣಿಗೆ ಪಟ್ಟಣದ ಮುಖ್ಯಬೀದಿಗಾಗಿ ಪೊಲೀಸ್ ಮೈದಾನಕ್ಕೆ ತೆರಳಿತು.
ಸಂವಿಧಾನದ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ದೇಶಭಕ್ತಿ ಗೀತೆ, ರಸಪ್ರಶ್ನೆ, ಪ್ರಬಂಧ ಸೇರಿದಂತೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಿ ಬಹುಮಾನ ವಿತರಿಸಲಾಯಿತು.
ವರದಿ : ದುಗ್ಗಳ ಸದಾನಂದ








