Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಸಾಪ ಸಂತಾಪ*
  • *ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*
  • *ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ*
  • *ಕೊಡಗು ಜಿಲ್ಲಾ ಸಾಹಿತ್ಯ ಸಮ್ಮೇಳನ ಪೂರ್ವಬಾವಿ ಸಭೆ : ಬಿ.ಸಿ.ದಿನೇಶ್ ಗೆ ಅಭಿನಂದನೆ*
  • *ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ”*
  • *ಕೊಡಗಿನಲ್ಲಿ ಮೊದಲ ಬಾರಿಗೆ ವಿಶೇಷ ಚೇತನರಿಗಾಗಿ ರಾಜ್ಯಮಟ್ಟದ ಕ್ರೀಡಾಕೂಟ* 
  • *ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ* 
  • *ಮಾ.16 ರಂದು “ಸ್ವಚ್ಛ ಕೊಡಗು, ಸುಂದರ ಕೊಡಗು” ಉದ್ಘಾಟನಾ ಕಾರ್ಯಕ್ರಮ*
  • *ಕುಶಾಲನಗರ ಸಂಚಾರ ಠಾಣೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆ*
  • *ಮಡಿಕೇರಿ ಘಟಕದ ನೂತನ ಡಿಪೋ ವ್ಯವಸ್ಥಾಪಕರನ್ನು ಭೇಟಿಯಾದ ಎಐಟಿಯುಸಿ ಸಂಘಟನೆ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಜಮ್ಮಾಬಾಣೆ ಭೂಮಿ ಸರ್ವೆ ಮಾಡಿ, ಪಹಣಿ ಒದಗಿಸಲು ಮುಂದಾಗಿ : ಸಚಿವ ಕೃಷ್ಣ ಬೈರೇಗೌಡ ಸೂಚನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಜಮ್ಮಾಬಾಣೆ ಭೂಮಿ ಸರ್ವೆ ಮಾಡಿ, ಪಹಣಿ ಒದಗಿಸಲು ಮುಂದಾಗಿ : ಸಚಿವ ಕೃಷ್ಣ ಬೈರೇಗೌಡ ಸೂಚನೆ*

ಫೆಬ್ರವರಿ 5, 20243 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಫೆ.5 NEWS DESK : ಜಿಲ್ಲೆಯಲ್ಲಿ ಹಲವು ದಶಕಗಳಿಂದ ಜಮ್ಮಾಬಾಣೆ ಭೂಮಿ ಸರ್ವೆ ಮಾಡಲು ಬಾಕಿ ಇದ್ದು, ಆ ನಿಟ್ಟಿನಲ್ಲಿ ಸಾಗುವಳಿ ಮಾಡುವವರಿಗೆ ಆರ್‍ಟಿಸಿ(ಪಹಣಿ) ಮಾಡಿಕೊಡಲು ಮುಂದಾಗಿದ್ದು, ಆ ನಿಟ್ಟಿನಲ್ಲಿ ಅಧಿಕಾರಿಗಳು ಸರ್ವೆ ಕಾರ್ಯ ಕೈಗೊಳ್ಳಲು ಮುಂದಾಗುವಂತೆ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಸೂಚಿಸಿದ್ದಾರೆ.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಹಲವು ಮಹತ್ವದ ವಿಷಯಗಳ ಕುರಿತು ಸುದೀರ್ಘವಾಗಿ ಸೋಮವಾರ ಪ್ರಗತಿ ಪರಿಶೀಲನೆ ನಡೆಸಿದರು.
`ಜಮ್ಮಾ ಭೂಮಿ ಹಿಡುವಳಿದಾರರಿಗೆ ಆರ್‍ಟಿಸಿ ಇಲ್ಲದಿರುವುದರಿಂದ ಸಾಲ ಸೌಲಭ್ಯ ಹಾಗೂ ಸರ್ಕಾರದ ಸೌಲಭ್ಯ ಪಡೆಯಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಕೃಷಿ ಮಾಡುವ ಕುಟುಂಬದವರಿಗೆ ಆರ್‍ಟಿಸಿ ಮಾಡಿಕೊಡಬೇಕಿದ್ದು, ಆ ನಿಟ್ಟಿನಲ್ಲಿ ಸರ್ವೇ ಕಾರ್ಯವನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸ್ಪಷ್ಟ ನಿರ್ದೇಶನ ನೀಡಿದರು.’
`ಕೊಡಗು ಜಿಲ್ಲೆಯಲ್ಲಿ 25 ಸಾವಿರ ಜನರು ಜಮ್ಮಬಾಣೆ ಭೂಮಿಯಲ್ಲಿ ಕೃಷಿ ಮಾಡುತ್ತಿದ್ದು, ಪಟ್ಟೆದಾರ ಕುಟುಂಬದ ಒಬ್ಬರ ಹೆಸರಿಗೆ ಮಾತ್ರ ಭೂಮಿ ಇದ್ದು, ಆ ಕುಟುಂಬದ ಇತರರಿಗೂ ಆರ್‍ಟಿಸಿ ಮಾಡಬೇಕಿದೆ. ಆ ನಿಟ್ಟಿನಲ್ಲಿ ಸರ್ವೇ ಕಾರ್ಯ ಕೈಗೊಳ್ಳುವಂತೆ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರು ನಿರ್ದೇಶನ ನೀಡಿದರು.’
ಜಮ್ಮಾಬಾಣೆ ಭೂಮಿ ಸಂಬಂಧ ತಕರಾರು ಇಲ್ಲದಿದ್ದಲ್ಲಿ ನೇರವಾಗಿ ಸರ್ವೆ ಮಾಡಬಹುದಾಗಿದೆ. ತಕರಾರು ಇದ್ದಲ್ಲಿ ಗ್ರಾಮ ಸಭೆಯಲ್ಲಿ ಇಟ್ಟು ಗ್ರಾಮಸ್ಥರ ಸಹಕಾರ ಪಡೆಯಬಹುದಾಗಿದೆ ಎಂದು ಕೃಷ್ಣ ಬೈರೇಗೌಡ ಅವರು ಸಲಹೆ ನೀಡಿದರು.
ಇದೊಂದು ಆಂದೋಲನ ರೂಪದಲ್ಲಿ ಕೈಗೊಳ್ಳಬೇಕಿದ್ದು, ತಹಶೀಲ್ದಾರರು ಮತ್ತು ಭೂ ದಾಖಲೆಗಳ ಸಹಾಯಕ ನಿರ್ದೇಶಕರ ತಂಡವು ಸಮರೋಪಾದಿಯಲ್ಲಿ ಕೈಗೊಳ್ಳಬೇಕು ಎಂದರು.
ಸರ್ವೇ ಮಾಡಲು ಆಧುನಿಕ ಉಪಕರಣಗಳನ್ನು ಒದಗಿಸಲಾಗುವುದು. ಪರವಾನಗಿ ಇರುವ ಸರ್ವೇ ಮಾಪಕರನ್ನು ಬಳಸಿಕೊಂಡು ಸರ್ವೇ ಕಾರ್ಯವನ್ನು ತ್ವರಿತವಾಗಿ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಸಲಹೆ ನೀಡಿದರು.
`ಜಮ್ಮಾ ಭೂಮಿಯನ್ನು ಸರ್ವೇ ಮಾಡಿ ಸಮಸ್ಯೆಯನ್ನು ಇತ್ಯರ್ಥಪಡಿಸುವ ಸಂಬಂಧ ಡ್ರಾಪ್ಟ್ ಸಿದ್ಧಪಡಿಸಿ ಕಳುಹಿಸಿಕೊಡಬೇಕು, ನಂತರ ಸರ್ಕಾರದಿಂದ ಆದೇಶ ಹೊರಡಿಸಲಾಗುವುದು ಎಂದು ಸಚಿವರು ತಿಳಿಸಿದರು.’
ಹೆಚ್ಚಿನ ಸರ್ವೇಯರ್‍ಗಳನ್ನು ಒದಗಿಸುವುದರ ಜೊತೆಗೆ ಆಧುನಿಕ ಪರಿಕರಗಳನ್ನು ಒದಗಿಸಲಾಗುವುದು. ಆ ನಿಟ್ಟಿನಲ್ಲಿ ಶಾಶ್ವತ ಪರಿಹಾರ ಕಲ್ಪಿಸಬೇಕಿದೆ ಎಂದರು.
ಕಂದಾಯ ಇಲಾಖೆ ಬೇರೆ, ಸರ್ವೇ ಇಲಾಖೆ ಬೇರೆ ಎಂಬುದು ಮನಸ್ಸಿನಿಂದ ತೆಗೆದುಹಾಕಬೇಕು. ಇಬ್ಬರು ಸಹ ಜಂಟಿ ಅಭಿಯಾನ ಕೈಗೊಳ್ಳಬೇಕು ಎಂದು ಹೇಳಿದರು.
ಗ್ರಾಮ ಲೆಕ್ಕಿಗರು, ಕಂದಾಯ ನಿರೀಕ್ಷಕರು, ತಹಶೀಲ್ದಾರರು, ಉಪ ತಹಶೀಲ್ದಾರರು, ಉಪ ವಿಭಾಗಾಧಿಕಾರಿಗಳು, ಹೀಗೆ ಎಲ್ಲರೂ ತಂಡವಾಗಿ ಕೆಲಸ ಮಾಡಿದರೆ ಮಾತ್ರ ಸಮಸ್ಯೆಯನ್ನು ಬಗೆ ಹರಿಸಬಹುದು ಎಂದರು.
ಗ್ರಾಮ ಸಭೆಯ ಸಂದರ್ಭದಲ್ಲಿ ನಡವಳಿಗೆ ಸಹಿ ಮಾಡಿಸಿಕೊಳ್ಳಬೇಕು. ಸಮಸ್ಯೆಗಳನ್ನು ಪೂರ್ಣಗೊಳಿಸಿ ಮುನ್ನಡೆಯಬೇಕು ಎಂದರು. ಸದ್ಯ ಕಾನೂನಾತ್ಮಕವಾಗಿ ಪ್ರತಿಯೊಬ್ಬರೂ ಕೆಲಸ ನಿರ್ವಹಿಸಬೇಕೆಂದು ತಿಳಿಸಿದರು.
ಕೊಡಗು ಜಿಲ್ಲೆಯ ಕೃಷಿಕರಿಗೆ ಸರ್ಕಾರದ ಸೌಲಭ್ಯಗಳು ಹಾಗೂ ಪರಿಹಾರ ಕಲ್ಪಿಸಬೇಕು ಎಂಬುದು ಸರ್ಕಾರದ ಆಶಯವಾಗಿದೆ. ಆ ನಿಟ್ಟಿನಲ್ಲಿ ಮೂಲಭೂತ ಸಮಸ್ಯೆಗಳನ್ನು ಪರಿಹರಿಸಬೇಕಿದೆ ಎಂದರು.
ಭೂಮಿಗೆ ಸಂಬಂಧಿಸಿದಂತೆ ಹಲವು ಪ್ರಕರಣಗಳನ್ನು ಇತ್ಯರ್ಥಪಡಿಸಬೇಕಿದೆ. ಆ ನಿಟ್ಟಿನಲ್ಲಿ ಕಳೆದ ಆರೇಳು ತಿಂಗಳಲ್ಲಿ ಬಾಕಿ ಸಮಸ್ಯೆಗಳನ್ನು ಇತ್ಯರ್ಥ ಮಾಡದಿರುವುದಕ್ಕೆ ನೂರಾರು ನೆಪ ಹೇಳಬಹುದು. ಸಮಸ್ಯೆ ಬಗೆಹರಿಸುವುದು ಒಂದೇ ಪರಿಹಾರ. ಆ ನಿಟ್ಟಿನಲ್ಲಿ ಅಧಿಕಾರಿಗಳು ಮನಸ್ಸು ಮಾಡಬೇಕು. ಜೊತೆಗೆ ಬದ್ಧತೆಯನ್ನು ಪ್ರದರ್ಶಿಸಬೇಕು ಎಂದು ಕೃಷ್ಣ ಬೈರೇಗೌಡ ಅವರು ಹೇಳಿದರು.
ಜಿಲ್ಲೆಯಲ್ಲಿ ಬೆಳೆ ಹಾನಿ ಪರಿಹಾರ ಮೊದಲ ಕಂತನ್ನು ಒದಗಿಸಲಾಗಿದ್ದು, ಯಾರಾದರೂ ಬಿಟ್ಟು ಹೋಗಿದ್ದಲ್ಲಿ ಸೇರ್ಪಡೆ ಮಾಡುವಂತಾಗಬೇಕು ಎಂದು ಸಚಿವರು ಸಲಹೆ ನೀಡಿದರು.
ಬರ ಪರಿಹಾರದಲ್ಲಿ ಹಣ ಪೋಲು ಆಗಬಾರದು. ಪ್ರೂಟ್ಸ್ ಗುರುತಿನ ಚೀಟಿ ಇದ್ದಲ್ಲಿ ಒಳ್ಳೆಯದು ಎಂದರು. ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರು ವ್ಯತ್ಯಯವಾಗದಂತೆ ಗಮನಹರಿಸಬೇಕು. 24 ಗಂಟೆಯೊಳಗೆ ಕುಡಿಯುವ ನೀರು ಪೂರೈಸಬೇಕು ಎಂದರು.
ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ಮಾತನಾಡಿ ಪಟ್ಟೆದಾರರ ಹೆಸರಿಗೆ ಭೂಮಿ ಇದ್ದಲ್ಲಿ ಅವರ ಹೆಸರಿಗೆ ಸರ್ವೆ ಮಾಡಬೇಕು. ಪಟ್ಟೆದಾರ ಕುಟಂಬದವರು ಸಾಗುವಳಿ ಮಾಡುತ್ತಿದ್ದಲ್ಲಿ ಅವರ ಹೆಸರಲ್ಲಿಯೂ ಖಾತೆ ಮಾಡಿಕೊಡಬೇಕು ಎಂದರು.
ಶಾಸಕರಾದ ಡಾ.ಮಂತರ್ ಗೌಡ ಮಾತನಾಡಿ ಜಮ್ಮಾಬಾಣೆ ಭೂಮಿ ಸರ್ವೆ ಮಾಡಿ ಕೃಷಿಕರಿಗೆ ಅನುಕೂಲ ಮಾಡಿಕೊಡಬೇಕು ಎಂದರು.
ಮಡಿಕೇರಿ ತಹಶೀಲ್ದಾರರ ನೂತನ ಕಚೇರಿ ಕಟ್ಟಡ ಇನ್ನೂ ಪೂರ್ಣಗೊಂಡಿಲ್ಲ. ಆ ನಿಟ್ಟಿನಲ್ಲಿ ಅಗತ್ಯ ಸಹಕಾರ ನೀಡುವಂತೆ ಕೋರಿದರು.
ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾಕುಶಾಲಪ್ಪ ಮಾತನಾಡಿ, ಹಲವು ದಶಕಗಳಿಂದ ಸಮಸ್ಯೆಯಾಗಿ ಉಳಿದಿರುವ ಜಮ್ಮಾ ಬಾಣೆಯನ್ನು ಸರ್ವೇ ಮಾಡುವಂತಾಗಬೇಕು. ಆ ನಿಟ್ಟಿನಲ್ಲಿ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದರು.
ಸರ್ವೇ ಇಲಾಖೆ ಆಯುಕ್ತರಾದ ಮಂಜುನಾಥ್ ಅವರು ಮಾತನಾಡಿ ಜಮ್ಮಾ ಬಾಣೆ ಸಂಬಂಧಿಸಿದಂತೆ ಎ.ಖರಾಬು ಜಮೀನು, ಪೈಸಾರಿ ಹಾಗೂ ಪೈಸಾರಿ ಅಲ್ಲದ ಭೂಮಿ ಮತ್ತಿತರ ಸಂಬಂಧ ಸರ್ವೇ ಮಾಡಿ ಸಾಗುವಳಿ ಕೃಷಿಕರಿಗೆ ಭೂಮಿ ಒದಗಿಸಬೇಕಿದೆ ಎಂದರು.
ಆ ನಿಟ್ಟಿನಲ್ಲಿ ಪೋಡಿ ಮುಕ್ತ ಅಭಿಯಾನ ಮಾದರಿಯಲ್ಲಿ ಜಮ್ಮಾ ಭೂಮಿಯನ್ನು ಸರ್ವೇ ಮಾಡಿ ಸಾಗುವಳಿದಾರರಿಗೆ ಆರ್‍ಟಿಸಿ ಮಾಡಿಕೊಡಬೇಕಿದೆ ಎಂದು ತಿಳಿಸಿದರು.
ಜಿಲ್ಲಾಧಿಕಾರಿ ವೆಂಕಟ್‍ರಾಜಾ ಮಾತನಾಡಿ, ಜಮ್ಮಾ ಭೂಮಿ ಸಂಬಂಧಿಸಿದಂತೆ ಪಟ್ಟೆದಾರರ ಹೆಸರು ದಾಖಲೆಯಲ್ಲಿದ್ದು, ಜಮಾಬಂಧಿ ಪರಿಶೀಲನೆ ಮಾಡಬೇಕಿದೆ. ಪೋಡಿ ಮುಕ್ತ ಅಭಿಯಾನ ಮಾದರಿಯಲ್ಲಿ ಸರ್ವೇ ಕಾರ್ಯವನ್ನು ಕೈಗೊಳ್ಳಬೇಕಿದೆ ಎಂದರು.
ಭೂ ದಾಖಲೆಗಳ ಉಪ ನಿರ್ದೇಶಕರಾದ ಶ್ರೀನಿವಾಸ್ ಮಾತನಾಡಿ ಜಿಲ್ಲೆಯಲ್ಲಿ 24 ಪರವಾನಗಿ ಸರ್ವೇಯರ್‍ಗಳು ಇದ್ದು, 15 ಮಂದಿ ಸರ್ಕಾರಿ ಸರ್ವೇಯರ್‍ಗಳು ಇದ್ದಾರೆ ಎಂದರು.
ತಹಶೀಲ್ದಾರರಾದ ಪ್ರವೀಣ್ ಕುಮಾರ್ ಮಾತನಾಡಿ ಜಮ್ಮಾಭೂಮಿಗೆ ಸಂಬಂಧಿಸಿದಂತೆ ಸಿವಿಲ್ ವ್ಯಾಜ್ಯಗಳಿದ್ದು, ಕೆಲವು ಕಡೆ ಪರಿಹಾರ ಆಗುತ್ತವೆ. ಇನ್ನು ಕೆಲವು ಕಡೆ ಇತ್ಯರ್ಥಕ್ಕೆ ಮುಂದೆ ಬರುವುದಿಲ್ಲ ಎಂದು ಮಾಹಿತಿ ನೀಡಿದರು.
`ಭೂಸುರಕ್ಷಾ ಅಭಿಯಾನ’ವನ್ನು ವಿರಾಜಪೇಟೆಯಲ್ಲಿ ಹಮ್ಮಿಕೊಳ್ಳಲಾಗಿದ್ದು, ರಾಜ್ಯದ 31 ತಾಲ್ಲೂಕುಗಳಲ್ಲಿ ಚಾಲನೆಗೊಳ್ಳಲಿದೆ ಎಂದರು.
ಉಪ ನೋಂದಣಾಧಿಕಾರಿ ಕಚೇರಿ ದಾಖಲೆಗಳನ್ನು ಸಹ ಡಿಜಿಟಲೀಕರಣ ಮಾಡಲಾಗುತ್ತಿದೆ. ಆ ನಿಟ್ಟಿನಲ್ಲಿ ವಿರಾಜಪೇಟೆಯಲ್ಲಿಂದು ಚಾಲನೆ ನೀಡಲಾಗುತ್ತಿದೆ. ಎರಡು ಮೂರು ತಿಂಗಳಲ್ಲಿ ರಾಜ್ಯದ ಎಲ್ಲಾ ತಾಲ್ಲೂಕುಗಳಲ್ಲಿ ಚಾಲನೆಗೊಳ್ಳುವ ಸಾಧ್ಯತೆ ಇದೆ ಎಂದು ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಇದೇ ಸಂದರ್ಭದಲ್ಲಿ ತಿಳಿಸಿದರು.
ನಗರಸಭೆ ಅಧ್ಯಕ್ಷರಾದ ನೆರವಂಡ ಅನಿತಾ ಪೂವಯ್ಯ, ಜಿ.ಪಂ.ಸಿಇಒ ವರ್ಣಿತ್ ನೇಗಿ, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಎನ್.ವೀಣಾ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ, ತಹಶೀಲ್ದಾರರಾದ ಕಿರಣ್ ಗೌರಯ್ಯ, ರಾಮಚಂದ್ರ, ನವೀನ್ ಇತರರು ಹಲವು ಮಾಹಿತಿ ನೀಡಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕಸಾಪ ಸಂತಾಪ*

ಮಾರ್ಚ್ 15, 2026

*ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*

ಮಾರ್ಚ್ 15, 2026

*ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 15, 2026

*ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ ಮಹೋತ್ಸವ*

ಮಾರ್ಚ್ 15, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಸುಂಟಿಕೊಪ್ಪ NEWS DESK ಮಾ.15 : ಸುಂಟಿಕೊಪ್ಪ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ 58ನೇ ವರ್ಷದ ತೆರೆ…

*ಸುಗ್ಗಿಕಟ್ಟೆಗಳ ಅಭಿವೃದ್ಧಿಗೆ ಭೂಮಿಪೂಜೆ ನೆರವೇರಿಸಿದ ಶಾಸಕ ಡಾ.ಮಂತರ್ ಗೌಡ*

ಮಾರ್ಚ್ 15, 2026

*ಕೊಡಗು ಜಿಲ್ಲಾ ಸಾಹಿತ್ಯ ಸಮ್ಮೇಳನ ಪೂರ್ವಬಾವಿ ಸಭೆ : ಬಿ.ಸಿ.ದಿನೇಶ್ ಗೆ ಅಭಿನಂದನೆ*

ಮಾರ್ಚ್ 15, 2026

*ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನ : ಮಾ.21 ರಂದು ಸಿಎನ್‌ಸಿಯಿಂದ “ವಿಚಾರ ಸಂಕಿರಣ”*

ಮಾರ್ಚ್ 15, 2026

*ಕೊಡಗಿನಲ್ಲಿ ಮೊದಲ ಬಾರಿಗೆ ವಿಶೇಷ ಚೇತನರಿಗಾಗಿ ರಾಜ್ಯಮಟ್ಟದ ಕ್ರೀಡಾಕೂಟ* 

ಮಾರ್ಚ್ 15, 2026

*ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ* 

ಮಾರ್ಚ್ 15, 2026

*ಮಾ.16 ರಂದು “ಸ್ವಚ್ಛ ಕೊಡಗು, ಸುಂದರ ಕೊಡಗು” ಉದ್ಘಾಟನಾ ಕಾರ್ಯಕ್ರಮ*

ಮಾರ್ಚ್ 15, 2026

*ಕುಶಾಲನಗರ ಸಂಚಾರ ಠಾಣೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕು ಸ್ಥಾಪನೆ*

ಮಾರ್ಚ್ 15, 2026

*ಮಡಿಕೇರಿ ಘಟಕದ ನೂತನ ಡಿಪೋ ವ್ಯವಸ್ಥಾಪಕರನ್ನು ಭೇಟಿಯಾದ ಎಐಟಿಯುಸಿ ಸಂಘಟನೆ*

ಮಾರ್ಚ್ 15, 2026

*ಅಂತರಾಷ್ಟ್ರೀಯ ಥೈಲ್ಯಾಂಡ್ ಮಾಸ್ಟರ್ಸ್ ಅಥ್ಲೆಟಿಕ್ ನಲ್ಲಿ ಚಿನ್ನ ಮತ್ತು ಬೆಳ್ಳಿ ಗೆದ್ದ ಬಂಗಾಡುಮನೆ ವಸಂತಿ*

ಮಾರ್ಚ್ 15, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.