ಮಡಿಕೇರಿ ಫೆ.6 NEWS DESK : ಇತ್ತೀಚೆಗೆ ಮೈಸೂರಿನ ಬೋಗಾದಿಯಲ್ಲಿ ಅವೈಜ್ಞಾನಿಕ ರಸ್ತೆ ಹಂಪ್ ನಿಂದ ಪ್ರಾಣ ಕಳೆದುಕೊಂಡ ಕಂಡಂಗಾಲ ಗ್ರಾಮದ ಬಲ್ಲಾಡಿಚಂಡ ಬಿ.ಶಿವನ್ ಮನೆಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.








