Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಮಡಿಕೇರಿಯ ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಂಭ್ರಮ : ಸೆಪ್ಟೆಂಬರ್ 6ರಂದು ಸ್ಪರ್ಧೆ*
  • *ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ : ಸಭೆ ನಡೆಸಿದ ಕೊಡಗು ಪೊಲೀಸ್*
  • *ಕೊಡಗಿನ ಸಮಸ್ಯೆಗಳಿಗೆ ಸಮಗ್ರ ಪರಿಹಾರಕ್ಕೆ ಯದುವೀರ್ ಒಡೆಯರ್ ಆಗ್ರಹ : ಆನೆ- ಮಾನವ ಸಂಘರ್ಷ, ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ ಸಚಿವರಿಗೆ ಪ್ರಸ್ತಾವನೆ ಸಲ್ಲಿಕೆ*
  • *ಕಸ್ತೂರಿರಂಗನ್ ವರದಿಯ 7ನೇ ಅಧಿಸೂಚನೆ: ಕೊಡಗಿನಲ್ಲಿ ಕೇರಳ ಮಾದರಿ ಅನುಷ್ಠಾನಕ್ಕೆ ಒತ್ತಾಯ*
  • *ಕೊಡಗು ಸೌಹಾರ್ಧ ಪತ್ತಿನ ಸಹಕಾರಿ ಸಂಘಕ್ಕೆ ‘ಎ’ ವರ್ಗೀಕರಣ : ರೂ.29 ಲಕ್ಷ ನಿವ್ವಳ ಲಾಭ*
  • *ಚೆಟ್ಟಳ್ಳಿಯಲ್ಲಿ ಸಾಂಪ್ರದಾಯಿಕ ಕೈಲ್ ಪೊವ್ದ್ ಧಾರೆ ಪೂಜೆ*
  • *ರಕ್ಷಾಬಂಧನ ಆಚರಣೆ : ಸಂಸದ ಯದುವೀರ್ ಒಡೆಯರ್‌ಗೆ ಬ್ರಹ್ಮಕುಮಾರಿಸ್‌ ನಿಂದ ರಾಖಿ*
  • *ಎ.ಕೆ. ಸುಬ್ಬಯ್ಯರ ಪುಣ್ಯಸ್ಮರಣೆ: ಸಮಾಧಿಗೆ ಪುಷ್ಪ ನಮನ ಸಲ್ಲಿಸಿದ ಶಾಸಕ ಪೊನ್ನಣ್ಣ*
  • *ಮಡಿಕೇರಿ ಪಿಎಲ್‌ಡಿ ಬ್ಯಾಂಕ್‌ 63ನೇ ವಾರ್ಷಿಕ ಮಹಾಸಭೆ : ಐವರು ಪ್ರಗತಿಪರ ರೈತರಿಗೆ ಸನ್ಮಾನ*
  • *ಜಾನಪದ ಕಲಾಪ್ರಕಾರದ ತರಬೇತಿಗೆ ಅರ್ಜಿ ಆಹ್ವಾನ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಮಹಿಳೆಯರ ಬಗ್ಗೆ ಕಾಳಜಿ ಇಲ್ಲದ ಮಡಿಕೇರಿ ನಗರಸಭೆ : ಮಹಿಳಾ ಕಾಂಗ್ರೆಸ್ ಅಸಮಾಧಾನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಮಹಿಳೆಯರ ಬಗ್ಗೆ ಕಾಳಜಿ ಇಲ್ಲದ ಮಡಿಕೇರಿ ನಗರಸಭೆ : ಮಹಿಳಾ ಕಾಂಗ್ರೆಸ್ ಅಸಮಾಧಾನ*

ಫೆಬ್ರವರಿ 8, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಫೆ.8 NEWS DESK : ಎಲ್ಲಾ ವಿಧದಲ್ಲೂ ಆಡಳಿತ ವೈಫಲ್ಯವನ್ನು ಕಂಡಿರುವ ಮಡಿಕೇರಿ ನಗರಸಭೆ ಮಹಿಳೆಯರ ಬಗ್ಗೆ ಕನಿಷ್ಠ ಕಾಳಜಿಯನ್ನು ಕೂಡ ಹೊಂದಿಲ್ಲ ಎಂದು ಮಡಿಕೇರಿ ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಹೊಟ್ಟೆಯಂಡ ಫ್ಯಾನ್ಸಿ ಪಾರ್ವತಿ ಬೆಳ್ಯಪ್ಪ ಆರೋಪಿಸಿದ್ದಾರೆ.
ಮೂರ್ನಾಡು ರಸ್ತೆಯಲ್ಲಿರುವ ಸಾರ್ವಜನಿಕ ಶೌಚಾಲಯದ ಅವ್ಯವಸ್ಥೆಗಳನ್ನು ಪರಿಶೀಲಿಸಿದ ಅವರು ಮಹಿಳಾ ಪ್ರಯಾಣಿಕರಿಗೆ ಆಗುತ್ತಿರುವ ತೊಂದರೆಯ ಬಗ್ಗೆ ಬೇಸರ ವ್ಯಕ್ತಪಡಿಸಿದರು.
ನಗರದ ಜನರಲ್ ತಿಮ್ಮಯ್ಯ ವೃತ್ತ ವ್ಯಾಪ್ತಿಯಿಂದ ಮೈಸೂರು, ಮಂಗಳೂರು, ವಿರಾಜಪೇಟೆ ಮತ್ತು ಭಾಗಮಂಡಲಕ್ಕೆ ಪ್ರತಿದಿನ ಸಾವಿರಾರು ಪ್ರಯಾಣಿಕರು ಸಂಚರಿಸುತ್ತಾರೆ. ಮೈಸೂರು ರಸ್ತೆ, ಮೂರ್ನಾಡು ರಸ್ತೆ ಮತ್ತು ಮಂಗಳೂರು ರಸ್ತೆಯಲ್ಲಿರುವ ಬಸ್ ತಂಗುದಾಣದಲ್ಲಿ ಹೆಚ್ಚಿನ ಸಂಖ್ಯೆಯ ಪ್ರಯಾಣಿಕರು ಬಸ್ ಗಾಗಿ ಕಾದು ನಿಂತಿರುತ್ತಾರೆ. ಆದರೆ ಈ ಪ್ರಯಾಣಿಕರಿಗಾಗಿ ನಗರಸಭೆ ಕನಿಷ್ಠ ಶೌಚಾಲಯದ ವ್ಯವಸ್ಥೆಯನ್ನು ಮಾಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಶೌಚಾಲಯದ ಕೊರತೆಯಿಂದ ಮಹಿಳೆಯರು ಹೆಚ್ಚು ತೊಂದರೆ ಮತ್ತು ಮುಜುಗರ ಅನುಭವಿಸುತ್ತಿದ್ದಾರೆ. ತಿಮ್ಮಯ್ಯ ವೃತ್ತದ ರಸ್ತೆಗಳಲ್ಲಿ ದಿನದಿಂದ ದಿನಕ್ಕೆ ಪ್ರಯಾಣಿಕರ ಸಂಖ್ಯೆ ಹೆಚ್ಚಾಗುತ್ತಿದೆ. ಪಕ್ಕದಲ್ಲೇ ಜಿಲ್ಲಾಸ್ಪತ್ರೆ ಇರುವ ಕಾರಣ ರೋಗಿಗಳ ಸಂಬಂಧಿಗಳು ಹೊರ ಊರು ಮತ್ತು ಹೊರ ಜಿಲ್ಲೆಗಳಿಂದ ಆಗಮಿಸುತ್ತಾರೆ. ಪ್ರತಿದಿನ ಈ ಭಾಗದಲ್ಲಿ 2 ಸಾವಿರಕ್ಕೂ ಅಧಿಕ ಪ್ರಯಾಣಿಕರು ಬಂದು ಹೋಗುತ್ತಾರೆ. ಮಹಿಳಾ ಪ್ರಯಾಣಿಕರ ಬಗ್ಗೆ ಕನಿಷ್ಠ ಕಾಳಜಿ ಇಲ್ಲದ ನಗರಸಭೆ ನಿದ್ರಾವಸ್ಥೆಯಲ್ಲಿದೆ.
ನಗರದ ಪ್ರಮುಖ ಸ್ಥಳಗಳಲ್ಲಿ ಸುಸಜ್ಜಿತ ಶೌಚಾಲಯಗಳ ಕೊರತೆ ಇದೆ. ನಗರಸಭಾ ಕಚೇರಿ ಆವರಣದಲ್ಲಿರುವ ಶೌಚಾಲಯ, ಹಳೆಯ ಖಾಸಗಿ ಬಸ್ ನಿಲ್ದಾಣ ಮತ್ತು ನೂತನ ಖಾಸಗಿ ಬಸ್ ನಿಲ್ದಾಣದ ಶೌಚಾಲಯಗಳು ಗಬ್ಬೆದ್ದು ನಾರುತ್ತಿದೆ. ಸಾರ್ವಜನಿಕ ಶೌಚಾಲಯಗಳನ್ನು ಕಾಲಕ್ಕೆ ತಕ್ಕಂತೆ ಮೇಲ್ದರ್ಜೆಗೇರಿಸುವ ಪ್ರಯತ್ನವನ್ನು ನಗರಸಭೆ ಇಲ್ಲಿಯವರೆಗೆ ಮಾಡಿಲ್ಲ. ನಗರಸಭೆಯಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರಾದಿಯಾಗಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಸದಸ್ಯರೇ ಇದ್ದಾರೆ. ಆದರೆ ಇವರುಗಳಿಗೆ ಮಹಿಳೆಯರ ಕಷ್ಟ ಅರ್ಥವಾಗದೆ ಇರುವುದು ಮಾತ್ರ ವಿಪರ್ಯಾಸವೆಂದು ಫ್ಯಾನ್ಸಿ ಪಾರ್ವತಿ ಟೀಕಿಸಿದ್ದಾರೆ.
ಪ್ರಯಾಣಿಕರು ಮಾತ್ರವಲ್ಲದೆ ಪ್ರವಾಸಿಗರಿಗೂ ಶೌಚಾಲಯದ ಕೊರತೆಯಿಂದ ತೊಂದರೆಯಾಗಿದೆ. ಸ್ವಚ್ಛ ಭಾರತ್ ಅಭಿಯಾನದ ಪರಿಕಲ್ಪನೆ ಮಡಿಕೇರಿಯಿಂದ ದೂರವೇ ಉಳಿದಿದೆ. ಸಾರ್ವಜನಿಕ ಶೌಚಾಲಯಗಳ ನಿರ್ಮಾಣ ಮತ್ತು ನಿರ್ವಹಣೆಗೆ ನಗರಸಭೆಯಲ್ಲಿ ಅಗತ್ಯ ಅನುದಾನವಿದ್ದರೂ ಇದನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಪ್ರಯತ್ನವನ್ನು ಆಡಳಿತ ಮಂಡಳಿ ಮತ್ತು ಅಧಿಕಾರಿಗಳು ಮಾಡುತ್ತಿಲ್ಲ. ಜನರಿಂದ ಚುನಾಯಿತರಾಗಿ ಬಂದವರು ನಿಷ್ಕ್ರಿಯರಾದರೆ ಅಧಿಕಾರಿಗಳಾದರೂ ಜನಪರವಾಗಿ ಕಾರ್ಯನಿರ್ವಹಿಸುವ ಕಾಳಜಿಯನ್ನು ತೋರಬೇಕಾಗುತ್ತದೆ.
ಆದರೆ ನಗರಸಭೆಯಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ನಡುವೆ ಹೊಂದಾಣಿಕೆಯ ಕೊರತೆ ಎದ್ದು ಕಾಣುತ್ತಿದೆ. ಇದರ ಪರಿಣಾಮ ಸಾರ್ವಜನಿಕರ ಮೇಲಾಗುತ್ತಿದೆ ಎಂದು ಆರೋಪಿಸಿರುವ ಅವರು ನಿಷ್ಕ್ರಿಯವಾಗಿರುವ ಆಡಳಿತ ಮಂಡಳಿ ಸರ್ಕಾರದ ಮೇಲೆ ಗೂಬೆ ಕೂರಿಸುವುದನ್ನು ಮೊದಲು ನಿಲ್ಲಿಸಲಿ ಒತ್ತಾಯಿಸಿದ್ದಾರೆ.
ಸರ್ಕಾರ ಸಾಕಷ್ಟು ಅನುದಾನ ಬಿಡುಗಡೆ ಮಾಡಿದ್ದರೂ ಅದನ್ನು ಸದ್ಬಳಕೆ ಮಾಡಿಕೊಳ್ಳುವ ಮತ್ತು ಅಭಿವೃದ್ಧಿ ಕಾರ್ಯಗಳಿಗೆ ಒತ್ತು ನೀಡುವ ಕಾಳಜಿಯೇ ಇಲ್ಲದ ನಗರಸಭೆ ಜನಪರವಾಗಿರುವ ಸರ್ಕಾರದ ವಿರುದ್ಧ ಟೀಕೆ ಮಾಡುವುದು ಖಂಡನೀಯ. ಇನ್ನು ಮುಂದೆಯಾದರೂ ಮಹಿಳೆಯರಿಗೆ ಆಗುತ್ತಿರುವ ತೊಂದರೆಯನ್ನು ಪರಿಗಣಿಸಿ ತ್ವರಿತವಾಗಿ ಜನರಲ್ ತಿಮ್ಮಯ್ಯ ವೃತ್ತ ವ್ಯಾಪ್ತಿಯ ಪ್ರಯಾಣಿಕರಿಗಾಗಿ ಸುಸಜ್ಜಿತ ಶೌಚಾಲಯವನ್ನು ನಿರ್ಮಿಸಲು ತುರ್ತು ಕ್ರಮ ಕೈಗೊಳ್ಳಬೇಕು ಎಂದು ಫ್ಯಾನ್ಸಿ ಪಾರ್ವತಿ ಒತ್ತಾಯಿಸಿದ್ದಾರೆ.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಮಡಿಕೇರಿಯ ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಸಂಭ್ರಮ : ಸೆಪ್ಟೆಂಬರ್ 6ರಂದು ಸ್ಪರ್ಧೆ*

ಆಗಷ್ಟ್ 28, 2026

*ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ : ಸಭೆ ನಡೆಸಿದ ಕೊಡಗು ಪೊಲೀಸ್*

ಆಗಷ್ಟ್ 28, 2026

*ಕೊಡಗಿನ ಸಮಸ್ಯೆಗಳಿಗೆ ಸಮಗ್ರ ಪರಿಹಾರಕ್ಕೆ ಯದುವೀರ್ ಒಡೆಯರ್ ಆಗ್ರಹ : ಆನೆ- ಮಾನವ ಸಂಘರ್ಷ, ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ ಸಚಿವರಿಗೆ ಪ್ರಸ್ತಾವನೆ ಸಲ್ಲಿಕೆ*

ಆಗಷ್ಟ್ 28, 2026

*ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ : ಸಭೆ ನಡೆಸಿದ ಕೊಡಗು ಪೊಲೀಸ್*

ಆಗಷ್ಟ್ 28, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ ಪೊಲೀಸ್ ನ್ಯೂಸ್

ಮಡಿಕೇರಿ NEWS DESK ಆ.28 : ಮುಂಬರಲಿರುವ ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ ಹಾಗೂ ವಿಸರ್ಜನೆ…

*ಕೊಡಗಿನ ಸಮಸ್ಯೆಗಳಿಗೆ ಸಮಗ್ರ ಪರಿಹಾರಕ್ಕೆ ಯದುವೀರ್ ಒಡೆಯರ್ ಆಗ್ರಹ : ಆನೆ- ಮಾನವ ಸಂಘರ್ಷ, ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ ಸಚಿವರಿಗೆ ಪ್ರಸ್ತಾವನೆ ಸಲ್ಲಿಕೆ*

ಆಗಷ್ಟ್ 28, 2026

*ಕಸ್ತೂರಿರಂಗನ್ ವರದಿಯ 7ನೇ ಅಧಿಸೂಚನೆ: ಕೊಡಗಿನಲ್ಲಿ ಕೇರಳ ಮಾದರಿ ಅನುಷ್ಠಾನಕ್ಕೆ ಒತ್ತಾಯ*

ಆಗಷ್ಟ್ 28, 2026

*ಕೊಡಗು ಸೌಹಾರ್ಧ ಪತ್ತಿನ ಸಹಕಾರಿ ಸಂಘಕ್ಕೆ ‘ಎ’ ವರ್ಗೀಕರಣ : ರೂ.29 ಲಕ್ಷ ನಿವ್ವಳ ಲಾಭ*

ಆಗಷ್ಟ್ 27, 2026

*ಚೆಟ್ಟಳ್ಳಿಯಲ್ಲಿ ಸಾಂಪ್ರದಾಯಿಕ ಕೈಲ್ ಪೊವ್ದ್ ಧಾರೆ ಪೂಜೆ*

ಆಗಷ್ಟ್ 27, 2026

*ರಕ್ಷಾಬಂಧನ ಆಚರಣೆ : ಸಂಸದ ಯದುವೀರ್ ಒಡೆಯರ್‌ಗೆ ಬ್ರಹ್ಮಕುಮಾರಿಸ್‌ ನಿಂದ ರಾಖಿ*

ಆಗಷ್ಟ್ 27, 2026

*ಎ.ಕೆ. ಸುಬ್ಬಯ್ಯರ ಪುಣ್ಯಸ್ಮರಣೆ: ಸಮಾಧಿಗೆ ಪುಷ್ಪ ನಮನ ಸಲ್ಲಿಸಿದ ಶಾಸಕ ಪೊನ್ನಣ್ಣ*

ಆಗಷ್ಟ್ 27, 2026

*ಮಡಿಕೇರಿ ಪಿಎಲ್‌ಡಿ ಬ್ಯಾಂಕ್‌ 63ನೇ ವಾರ್ಷಿಕ ಮಹಾಸಭೆ : ಐವರು ಪ್ರಗತಿಪರ ರೈತರಿಗೆ ಸನ್ಮಾನ*

ಆಗಷ್ಟ್ 27, 2026

*ಜಾನಪದ ಕಲಾಪ್ರಕಾರದ ತರಬೇತಿಗೆ ಅರ್ಜಿ ಆಹ್ವಾನ*

ಆಗಷ್ಟ್ 27, 2026

*ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮ*

ಆಗಷ್ಟ್ 27, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.