ಮಡಿಕೇರಿ ಫೆ.8 NEWS DESK : ಸಂವಿಧಾನ ದಿನಾಚರಣೆಯ 75ನೇ ವರ್ಷದ ಸಂಭ್ರಮಾಚರಣೆಯ ಪ್ರಯುಕ್ತ ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವನ್ನು ಕೊಡಗು ಜಿಲ್ಲೆಯಾದ್ಯಂತ ಫೆ.23 ರವರೆಗೆ ಹಮ್ಮಿಕೊಂಡಿದ್ದು, ಈ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾಡಳಿತದ ವತಿಯಿಂದ ಕೊಡಗು ಜಿಲ್ಲೆಯ ಸಾರ್ವಜನಿಕರಿಗೆ ಮುಕ್ತ ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ಧೆ ಏರ್ಪಡಿಸಲಾಗಿದೆ.
ಸ್ಪರ್ಧೆಯ ವಿಷಯ `ಭಾರತ ಸಂವಿಧಾನ ರಚನೆಯಲ್ಲಿ ಮಹಿಳೆಯರ ಪಾತ್ರ.’ `ನಮ್ಮ ಸಂವಿಧಾನ ನಮ್ಮ ಹೆಮ್ಮೆ (ಭಾರತ ಸಂವಿಧಾನದಲ್ಲಿ ಕಲ್ಪಿಸಿರುವ ಹಕ್ಕು ಮತ್ತು ಕರ್ತವ್ಯಗಳ ಹಿನ್ನಲೆಯಲ್ಲಿ)’ ಸ್ಪರ್ಧೆಯು ಕೊಡಗು ಜಿಲ್ಲೆಯ ಸಾರ್ವಜನಿಕರಿಗೆ ಮುಕ್ತವಾಗಿ ನಡೆಯಲಿದೆ.
ಪ್ರಬಂಧ ಸ್ಪರ್ಧೆಗೆ ನೀಡಿರುವ ವಿಷಯಗಳಲ್ಲಿ ಯಾವುದಾದರು ಒಂದು ವಿಷಯವನ್ನು ಆಯ್ಕೆ ಮಾಡಿ ಸ್ಪುಟವಾದ ಕೈಬರಹಗಳಲ್ಲಿ ಎ4 ಅಳತೆಯ ಕಾಗದಗಳಲ್ಲಿ 1500 ಪದಗಳಿಗೆ ಮೀರದಂತೆ ಬರೆದು ಕಳುಹಿಸುವುದು. ಚಿತ್ರಕಲಾ ಸ್ಪರ್ಧೆಗೆ ಸಂಬಂಧಿಸಿದಂತೆ ನೀಡಿರುವ ವಿಷಯಗಳ ಬಗ್ಗೆ ಎ3 ಅಳತೆಯ ಡ್ರಾಯಿಂಗ್ ಶೀಟ್ನಲ್ಲಿ ಚಿತ್ರ ರಚನೆ ಮಾಡಿ ಸಲ್ಲಿಸುವುದು.
ಪ್ರಬಂಧ ಸ್ಪರ್ಧೆಯ ಪ್ರಬಂಧಗಳನ್ನು ಹಾಗೂ ಚಿತ್ರಕಲಾ ಸ್ಪರ್ಧೆಯ ಚಿತ್ರಗಳನ್ನು ಫೆ.25 ರಂದು ಸಂಜೆ 4.30 ರ ಒಳಗೆ ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತ ಹತ್ತಿರ, ಎಸ್.ಜಿ.ಎಸ್.ವೈ ಕಟ್ಟಡ, ಕೊಡಗು ಜಿಲ್ಲೆ, ಮಡಿಕೇರಿ. ದೂರವಾಣಿ ಸಂಖ್ಯೆ: 08272-225531 ಗೆ ಖುದ್ದಾಗಿ ಅಥವಾ ನೋಂದಾಯಿತ ಅಂಚೆಯ ಮೂಲಕ ತಲುಪಿಸುವುದು. ಕೊನೆಯ ದಿನಾಂಕದ ನಂತರ ಬರುವ ಪ್ರಬಂಧಗಳನ್ನು ಸ್ಪರ್ಧೆಗೆ ಪರಿಗಣಿಸಲಾಗುವುದಿಲ್ಲ. ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ಧೆಗಳ ವಿಜೇತರಿಗೆ ಪ್ರಥಮ ರೂ.5 ಸಾವಿರ, ದ್ವಿತೀಯ ರೂ. 3 ಸಾವಿರ ಹಾಗೂ ತೃತೀಯ ರೂ. 2 ಸಾವಿರಗಳ ನಗದು ಬಹುಮಾನ ನೀಡಲಾಗುವುದು. ಸಮಿತಿಯ ತೀರ್ಮಾನವೇ ಅಂತಿಮ ತೀರ್ಮಾನವಾಗಿರುತ್ತದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ.









