ವಿರಾಜಪೇಟೆ ಫೆ.10: ವಿರಾಜಪೇಟೆಯ ಸಂತ ಅನ್ನಮ್ಮ ಶಾಲೆಯ 4 ನೇ ತರಗತಿಯ ವಿದ್ಯಾರ್ಥಿನಿ ಎ.ಆರ್.ಆಕಾಂಕ್ಷ ಗೆ ಸುವರ್ಣ ಶ್ರೀ ಕನ್ನಡ ಪ್ರಶಸ್ತಿ ಲಭಿಸಿದೆ.
ವಿರಾಜಪೇಟೆಯ ನಾಟ್ಯ ಮಯೂರಿ ನೃತ್ಯ ಶಾಲೆಯ ವತಿಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ನಯನ ಸಭಾಂಗಣದಲ್ಲಿ ನಡೆದ ರಾಜ್ಯಮಟ್ಟದ ನೃತ್ಯೋತ್ಸವ ಹಾಗೂ ಸುವರ್ಣ ಸಂಭ್ರಮ ಕನ್ನಡಿಗ ಮತ್ತು ಸುವರ್ಣ ಶ್ರೀ ಕನ್ನಡ ಪ್ರಶಸ್ತಿ ಸಮಾರಂಭದಲ್ಲಿ ಗಣ್ಯರು ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.
ಇವರು ರತೀಶ್ ಆಚಾರ್ಯ ಮತ್ತು ಪ್ರತಿಮಾ ಆಚಾರ್ಯ ದಂಪತಿಯ ಪುತ್ರಿ. ವಿದುಷಿ ಪ್ರೇಮಾಂಜಲಿ ಆಚಾರ್ಯ ಅವರ ಶಿಷ್ಯೆ.









