ವಿರಾಜಪೇಟೆ ಫೆ.12 NEWS DESK : ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ವಿರಾಜಪೇಟೆಯ ನಾಟ್ಯ ಮಯೂರಿ ನೃತ್ಯ ಶಾಲೆಯ ವತಿಯಿಂದ ನಡೆದ ರಾಜ್ಯ ಮಟ್ಟದ ನೃತ್ಯೋತ್ಸವ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಬಿಟ್ಟಂಗಾಲದ ಸಾನ್ವಿ ಎಂ.ಎಸ್. ಅವರಿಗೆ ಸುವರ್ಣ ಶ್ರೀ ಕನ್ನಡ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ನೃತ್ಯ ಕ್ಷೇತ್ರದಲ್ಲಿನ ಸಾಧನೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ. ಸಾನ್ವಿ ಅವರು ವಿರಾಜಪೇಟೆಯ ತ್ರಿವೇಣಿ ಶಾಲೆಯಲ್ಲಿ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಇವರು ಬಿಟ್ಟಂಗಾಲ ಗ್ರಾಮದಲ್ಲಿನ ಶಿಕ್ಷಕಿ ಸೌಮ್ಯ ಅವರ ಪುತ್ರಿ. ವಿರಾಜಪೇಟೆಯ ನಾಟ್ಯ ಮಯೂರಿ ನೃತ್ಯ ಶಾಲೆಯಲ್ಲಿ ವಿದುಷಿ ಪ್ರೇಮಾಂಜಲಿ ಅವರ ಬಳಿ ನೃತ್ಯ ಅಭ್ಯಾಸ ಮಾಡುತ್ತಿದ್ದಾರೆ.










