ವಿರಾಜಪೇಟೆ ಫೆ.14 NEWS DESK : ಜಮ್ಮುವಿನಲ್ಲಿ ನಡೆದ ರಾಷ್ಟ್ರಮಟ್ಟದ ನೃತ್ಯ ಸ್ಪರ್ಧೆಯಲ್ಲಿ ಸಂತ ಅನ್ನಮ ಶಾಲೆಯ 8ನೇ ತರಗತಿ ವಿದ್ಯಾರ್ಥಿ ಎಮ್. ಶ್ರೀದೇವಿ ಹಾಗೂ ಕೂರ್ಗ್ ವ್ಯಾಲಿ ಶಾಲೆಯ 9ನೇ ತರಗತಿ ವಿದ್ಯಾರ್ಥಿ ದೇಚಮ್ಮ ಕಪಲ್ ಮತ್ತು ಗುಂಪು ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿ ಭೂತಾನಲ್ಲಿ ನಡೆಯುವ ಅಂತರಾಷ್ಟ್ರೀಯ ನೃತ್ಯ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಶ್ರೀದೇವಿ ವಿರಾಜಪೇಟೆ ತಾಲೂಕಿನ ಕೆ.ಬೋಯಿಕೇರಿ ಗ್ರಾಮದ ಮುರುಗೇಶ್ ಮತ್ತು ತುಳಸಿ ದಂಪತಿಯ ಪುತ್ರಿ.
ದೇಚಮ್ಮ ವಿರಾಜಪೇಟೆ ಪಟ್ಟಣದ ಅಯ್ಯಪ್ಪ ಬೆಟ್ಟದ ನಿವಾಸಿ ದೀಪಕ್ ಮತ್ತು ಅನುರಾಧ ಅವರ ಪುತ್ರಿ.
ಇವರು ವಿರಾಜಪೇಟೆಯ ಟೀಮ್ ಇಂಟು ಫೀಸ್ ನೃತ್ಯ ಶಾಲೆಯಲ್ಲಿ ನೃತ್ಯ ಅಭ್ಯಾಸ ಮಾಡುತ್ತಿದ್ದು, ವಿಷ್ಣು ಅವರು ತರಬೇತಿ ನೀಡುತ್ತಿದ್ದಾರೆ.









