ವಿರಾಜಪೇಟೆ ಫೆ.14 NEWS DESK : ಜಮ್ಮುವಿನಲ್ಲಿ ನಡೆದ ರಾಷ್ಟ್ರಮಟ್ಟದ ನೃತ್ಯ ಸ್ಪರ್ಧೆಯಲ್ಲಿ ಕೂರ್ಗ್ ವ್ಯಾಲಿ ಶಾಲೆಯ ವಿದ್ಯಾರ್ಥಿನಿ ಗಗನಶ್ರೀ ಹಾಗೂ ಆರ್.ವಿನಿಷ ಕಪಲ್ ಮತ್ತು ಗುಂಪು ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಗಳಿಸಿ ಭೂತಾನ್ನಲ್ಲಿ ನಡೆಯುವ ಅಂತರಾಷ್ಟ್ರೀಯ ನೃತ್ಯ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಗಗನಶ್ರೀ ವಿರಾಜಪೇಟೆಯ ವಿಜಯನಗರದ ನಿವಾಸಿ ಶಶಿಕುಮಾರ್ ಮತ್ತು ದಿವ್ಯ ಅವರ ಪುತ್ರಿ. ವಿರಾಜಪೇಟೆ ಸುಭಾಷ್ ನಗರದ ನಿವಾಸಿ ಕೆ.ರಜನಿಕಾಂತ್ ಮತ್ತು ಆರ್.ಅರ್ಪಿತಾ ಅವರ ಪುತ್ರಿ.
ವಿನಿಷ ಆರ್ ಇವರಿಬ್ಬರು ವಿದ್ಯಾರ್ಥಿಗಳು ವಿರಾಜಪೇಟೆಯ ಟೀಂ ಇಂಟೋಪೀಸ್ ನೃತ್ಯ ಶಾಲೆಯಲ್ಲಿ ನೃತ್ಯ ಅಭ್ಯಾಸ ಮಾಡುತ್ತಿದ್ದು, ವಿಷ್ಣು ಅವರು ತರಬೇತಿ ನೀಡುತ್ತಿದ್ದಾರೆ.









