Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕಸ್ತೂರಿರಂಗನ್ ವರದಿಯ 7ನೇ ಅಧಿಸೂಚನೆ: ಕೊಡಗಿನಲ್ಲಿ ಕೇರಳ ಮಾದರಿ ಅನುಷ್ಠಾನಕ್ಕೆ ಒತ್ತಾಯ*
  • *ಕೊಡಗು ಸೌಹಾರ್ಧ ಪತ್ತಿನ ಸಹಕಾರಿ ಸಂಘಕ್ಕೆ ‘ಎ’ ವರ್ಗೀಕರಣ : ರೂ.29 ಲಕ್ಷ ನಿವ್ವಳ ಲಾಭ*
  • *ಚೆಟ್ಟಳ್ಳಿಯಲ್ಲಿ ಸಾಂಪ್ರದಾಯಿಕ ಕೈಲ್ ಪೊವ್ದ್ ಧಾರೆ ಪೂಜೆ*
  • *ರಕ್ಷಾಬಂಧನ ಆಚರಣೆ : ಸಂಸದ ಯದುವೀರ್ ಒಡೆಯರ್‌ಗೆ ಬ್ರಹ್ಮಕುಮಾರಿಸ್‌ ನಿಂದ ರಾಖಿ*
  • *ಎ.ಕೆ. ಸುಬ್ಬಯ್ಯರ ಪುಣ್ಯಸ್ಮರಣೆ: ಸಮಾಧಿಗೆ ಪುಷ್ಪ ನಮನ ಸಲ್ಲಿಸಿದ ಶಾಸಕ ಪೊನ್ನಣ್ಣ*
  • *ಮಡಿಕೇರಿ ಪಿಎಲ್‌ಡಿ ಬ್ಯಾಂಕ್‌ 63ನೇ ವಾರ್ಷಿಕ ಮಹಾಸಭೆ : ಐವರು ಪ್ರಗತಿಪರ ರೈತರಿಗೆ ಸನ್ಮಾನ*
  • *ಜಾನಪದ ಕಲಾಪ್ರಕಾರದ ತರಬೇತಿಗೆ ಅರ್ಜಿ ಆಹ್ವಾನ*
  • *ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮ*
  • *ಗಣೇಶೋತ್ಸವ : ಸೆ.8 ರಂದು ಕೋಟೆ ಶ್ರೀ ಗಣಪತಿ ದೇವಾಲಯದಲ್ಲಿ ಈಡುಗಾಯಿ ಬಹಿರಂಗ ಹರಾಜು*
  • *ಆ.28 ರಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ರಾಮಲಿಂಗಾರೆಡ್ಡಿ ಕೊಡಗಿಗೆ ಭೇಟಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಜ್ಞಾನ ವ್ಯಾಪಿ ಮಸೀದಿ ಅತಿಕ್ರಮಣ ಆರೋಪ : ಮಡಿಕೇರಿಯಲ್ಲಿ ಪ್ರತಿಭಟನೆ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಜ್ಞಾನ ವ್ಯಾಪಿ ಮಸೀದಿ ಅತಿಕ್ರಮಣ ಆರೋಪ : ಮಡಿಕೇರಿಯಲ್ಲಿ ಪ್ರತಿಭಟನೆ*

ಫೆಬ್ರವರಿ 15, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಫೆ.15 NEWS DESK : ಜ್ಞಾನ ವ್ಯಾಪಿ ಮಸೀದಿ ಅತಿಕ್ರಮಣವಾಗಿದೆ ಎಂದು ಆರೋಪಿಸಿ ಮತ್ತು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮಡಿಕೇರಿ ಮುಸ್ಲಿಂ ಜಮಾತ್ ಗಳ ಒಕ್ಕೂಟ ನಗರದಲ್ಲಿ ಪ್ರತಿಭಟನೆ ನಡೆಸಿತು.
ನಗರದ ಹಳೆಯ ಖಾಸಗಿ ಬಸ್ ನಿಲ್ದಾಣದ ಬಳಿ ಪ್ರತಿಭಟನೆ ನಡೆಸಿದ ಒಕ್ಕೂಟದ ಪದಾಧಿಕಾರಿಗಳು ಘೋಷಣೆಗಳನ್ನು ಕೂಗಿ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಬರಹಗಾರರು ಹಾಗೂ ಚಿಂತಕರಾದ ಶಿವ ಸುಂದರ್ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಧರ್ಮದ ಹೆಸರಿನಲ್ಲಿ ರಾಜಕೀಯ ನಡೆಯುತ್ತಿದೆ. ಪ್ರತಿ ದೇವಾಲಯ ಇತಿಹಾಸ ತೆಗೆದು ನೋಡಿದರೆ 80 ದೇವಾಲಯಗಳು ಮಾತ್ರ ಹಾಳಾಗಿರಬಹುದು. ಪುರಾತನ ಕಾಲದ ದೇವಾಲಯಗಳನ್ನು ಅಗೆದರೆ ಜೈನ ಬಸದಿ, ಬೌದ್ಧ ಮಂದಿರಗಳು ಸಿಗುತ್ತವೆ. ಒಂದು ದೇವಾಲಯ, ಮಸೀದಿಯನ್ನು ಬೀಳಿಸುವುದು ಅಧರ್ಮ. ತ್ಯಾಗ ಬಲಿದಾನಕ್ಕೆ ಕರೆ ಕೊಟ್ಟವರ ಮಕ್ಕಳ್ಯಾರೂ ರಕ್ತ ಹರಿಸಿಲ್ಲ. ಬಡ ಹಿಂದೂಗಳನ್ನು ಜೈಲಿಗೆ ತಳ್ಳಿ ತಮಾಷೆ ನೋಡುತ್ತಿದ್ದಾರೆ. ಅವರ ಮಕ್ಕಳು ವಿದೇಶಗಳಲ್ಲಿ ಧರ್ಮವನ್ನೇ ಮರೆತು ಆರಾಮಾಗಿದ್ದಾರೆ. ಇದು ಕೇವಲ ಜನರನ್ನು ಒಡೆದು ಆಳುವ ರಾಜಕೀಯ ಎಂದು ಆರೋಪಿಸಿದರು.
1991ರ ಕಾಯ್ದೆಯನ್ವಯ ಸಂವಿಧಾನದಡಿ ನಮ್ಮ ದೇಶದ ಮೂಲ ರಚನೆಯಾಗಿದೆ. ಇಂದು ಇದರ ಬಗ್ಗೆಯೇ ಕೆಲವರು ಪ್ರಶ್ನೆ ಮಾಡಿದ್ದಾರೆ, ಹಿಂದೂಗಳು ನೈಜ ಪರಿಸ್ಥಿತಿಯನ್ನು ಅರ್ಥ ಮಾಡಿಕೊಳ್ಳಬೇಕಾಗಿದೆ, ಭಾರತೀಯರೆಲ್ಲರು ಒಗ್ಗೂಡಬೇಕಾಗಿದೆ ಎಂದರು.
ಮುಸ್ಲಿಂ ಜಮಾತ್‍ಗಳ ಒಕ್ಕೂಟದ ಕಾರ್ಯದರ್ಶಿ ಹಾಗೂ ನಗರಸಭಾ ಸದಸ್ಯ ಅಮಿನ್ ಮೊಹಿಸಿನ್ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಮಸೀದಿಗಳನ್ನು ಗುರಿಯಾಗಿಸಿಕೊಂಡು ರಾಜಕರಣ ಮಾಡಲಾಗುತ್ತಿದೆ. ದೇಶದಲ್ಲಿ ಸಮಾಜ ಸಮಾಜಗಳ ನಡುವೆ ಅಶಾಂತಿಯನ್ನು ಭಿತ್ತಿ ರಾಜಕೀಯ ಲಾಭವನ್ನು ಪಡೆಯಲಾಗುತ್ತಿದೆ. ಈ ರೀತಿಯ ಹುನ್ನಾರ ನಮ್ಮ ರಾಜ್ಯದಲ್ಲೂ ಪ್ರಾರಂಭವಾಗಿದೆ ಎಂದು ಆರೋಪಿಸಿದರು.
ಧಾರ್ಮಿಕ ಆಚರಣೆಯ ಸ್ಥಳಗಳ ಸಂರಕ್ಷಣೆಯ ಕಾಯ್ದೆ ಜಾರಿಯಲ್ಲಿದ್ದರು, ನಿಯಮಗಳನ್ನು ಉಲ್ಲಂಘಿಸಲಾಗುತ್ತಿದೆ. ಇದನ್ನು ತಡೆಯುವಲ್ಲಿ ಸರಕಾರ ವಿಫಲವಾಗುತ್ತಿದೆ. ಅಲ್ಪಸಂಖ್ಯಾತರ ಧಾರ್ಮಿಕ ಸ್ಥಳಗಳಾದ ಮಸೀದಿ, ದರ್ಗಾ, ಮದರಸಗಳನ್ನು ಈ ಕಾಯ್ದೆಯಡಿಯಲ್ಲಿ ರಕ್ಷಿಸಲು ಸರಕಾರ ಮುಂದಾಗಬೇಕೆಂದು ಒತ್ತಾಯಿಸಿದರು.
ಉತ್ತರ ಪ್ರದೇಶದ ಮುಖ್ಯಮಂತ್ರಿಗಳು ಕಾನೂನು ಉಲ್ಲಂಘನೆ ಮಾಡಿ ಜಾತ್ಯಾತೀತ ಪರಂಪರೆಗೆ ಧಕ್ಕೆ ತರುವ ಮಾತುಗಳನ್ನಾಡುತ್ತಿದ್ದಾರೆ. 1991ರ ಯಥಾಸ್ಥಿತಿ ಕಾಯ್ದೆಯ ವಿರುದ್ಧದ ನಿರ್ಧಾರಗಳು ಕಂಡು ಬರುತ್ತಿದೆ. 1947 ಆಗಸ್ಟ್ 15ರ ನಂತರದ ಕಾಯ್ದೆಯನ್ವಯ ಪ್ರಾರ್ಥನಾಲಯಗಳ ಯಥಾಸ್ಥಿತಿ ಕಾಯ್ದುಕೊಳ್ಳಬೇಕಾಗಿದೆ. ಜ್ಞಾನ ವ್ಯಾಪಿ ಮಸೀದಿಯಲ್ಲಿ ಪೂಜೆಗೆ ಅವಕಾಶ ಕಲ್ಪಿಸಿರುವುದು ಖಂಡನೀಯ ಎಂದರು.
::: ಬೇಡಿಕೆಗಳು :::
ಸರಕಾರ ಸೇವೆ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯಗಳ ಮಿಸಲಾತಿ ಶೇ.4 ರಷ್ಟನ್ನು ಕೈಬಿಡಲಾಗಿದ್ದು, ಅದನ್ನು ಶೇ.8ಕ್ಕೆ ಏರಿಕೆ ಮಾಡಿ ಸದನದಲ್ಲಿ ಜಾರಿಗೆ ತರಬೇಕು. 2024ರ ಮುಂಗಡ ಆಯವ್ಯಯ ಪತ್ರದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಕೇಂದ್ರಗಳಿಗೆ 10 ಸಾವಿಕ ಕೋಟಿ ರೂ. ಮಿಸಲಿಡಬೇಕು ಹಾಗೂ ಕುಶಾಲನಗರದಲ್ಲಿ ಇತ್ತೀಚೆಗೆ ಕೊಲೆಯಾದ ಯುವಕ ಸಾಜಿದ್ ಕುಟುಂಬಕ್ಕೆ ಸರ್ಕಾರ ತಕ್ಷಣ ರೂ.10 ಲಕ್ಷ ಪರಿಹಾರ ಬಿಡುಗಡೆ ಮಾಡಬೇಕು, ಕುಟುಂಬದ ಸದಸ್ಯರೊಬ್ಬರಿಗೆ ಸರ್ಕಾರಿ ಉದ್ಯೋಗ ನೀಡಬೇಕೆಂದು ಆಗ್ರಹಿಸಿದರು.
ಒಕ್ಕೂಟದ ಅಧ್ಯಕ್ಷ ನಜೀರ್ ಅಹ್ಮದ್, ಕಾರ್ಯದರ್ಶಿ ಇಮ್ರಾನ್, ಪ್ರಮುಖರಾದ ಫಯಾಜ್, ಇಸ್ಮಾಯಿಲ್, ಮಡಿಕೇರಿ ನಗರದ ಮಸೀದಿಗಳ ಪ್ರತಿನಿಧಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕಸ್ತೂರಿರಂಗನ್ ವರದಿಯ 7ನೇ ಅಧಿಸೂಚನೆ: ಕೊಡಗಿನಲ್ಲಿ ಕೇರಳ ಮಾದರಿ ಅನುಷ್ಠಾನಕ್ಕೆ ಒತ್ತಾಯ*

ಆಗಷ್ಟ್ 28, 2026

*ಕೊಡಗು ಸೌಹಾರ್ಧ ಪತ್ತಿನ ಸಹಕಾರಿ ಸಂಘಕ್ಕೆ ‘ಎ’ ವರ್ಗೀಕರಣ : ರೂ.29 ಲಕ್ಷ ನಿವ್ವಳ ಲಾಭ*

ಆಗಷ್ಟ್ 27, 2026

*ಚೆಟ್ಟಳ್ಳಿಯಲ್ಲಿ ಸಾಂಪ್ರದಾಯಿಕ ಕೈಲ್ ಪೊವ್ದ್ ಧಾರೆ ಪೂಜೆ*

ಆಗಷ್ಟ್ 27, 2026

*ಕೊಡಗು ಸೌಹಾರ್ಧ ಪತ್ತಿನ ಸಹಕಾರಿ ಸಂಘಕ್ಕೆ ‘ಎ’ ವರ್ಗೀಕರಣ : ರೂ.29 ಲಕ್ಷ ನಿವ್ವಳ ಲಾಭ*

ಆಗಷ್ಟ್ 27, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, ಆ.27 NEWS DESK : ಕೊಡಗು ಸೌಹಾರ್ಧ ಪತ್ತಿನ ಸಹಕಾರಿ ಸಂಘವು 2025-26ನೇ ಸಾಲಿನ ಲೆಕ್ಕ ಪರಿಶೋಧನಾ ವರದಿಯಲ್ಲಿ…

*ಚೆಟ್ಟಳ್ಳಿಯಲ್ಲಿ ಸಾಂಪ್ರದಾಯಿಕ ಕೈಲ್ ಪೊವ್ದ್ ಧಾರೆ ಪೂಜೆ*

ಆಗಷ್ಟ್ 27, 2026

*ರಕ್ಷಾಬಂಧನ ಆಚರಣೆ : ಸಂಸದ ಯದುವೀರ್ ಒಡೆಯರ್‌ಗೆ ಬ್ರಹ್ಮಕುಮಾರಿಸ್‌ ನಿಂದ ರಾಖಿ*

ಆಗಷ್ಟ್ 27, 2026

*ಎ.ಕೆ. ಸುಬ್ಬಯ್ಯರ ಪುಣ್ಯಸ್ಮರಣೆ: ಸಮಾಧಿಗೆ ಪುಷ್ಪ ನಮನ ಸಲ್ಲಿಸಿದ ಶಾಸಕ ಪೊನ್ನಣ್ಣ*

ಆಗಷ್ಟ್ 27, 2026

*ಮಡಿಕೇರಿ ಪಿಎಲ್‌ಡಿ ಬ್ಯಾಂಕ್‌ 63ನೇ ವಾರ್ಷಿಕ ಮಹಾಸಭೆ : ಐವರು ಪ್ರಗತಿಪರ ರೈತರಿಗೆ ಸನ್ಮಾನ*

ಆಗಷ್ಟ್ 27, 2026

*ಜಾನಪದ ಕಲಾಪ್ರಕಾರದ ತರಬೇತಿಗೆ ಅರ್ಜಿ ಆಹ್ವಾನ*

ಆಗಷ್ಟ್ 27, 2026

*ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮ*

ಆಗಷ್ಟ್ 27, 2026

*ಗಣೇಶೋತ್ಸವ : ಸೆ.8 ರಂದು ಕೋಟೆ ಶ್ರೀ ಗಣಪತಿ ದೇವಾಲಯದಲ್ಲಿ ಈಡುಗಾಯಿ ಬಹಿರಂಗ ಹರಾಜು*

ಆಗಷ್ಟ್ 27, 2026

*ಆ.28 ರಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ರಾಮಲಿಂಗಾರೆಡ್ಡಿ ಕೊಡಗಿಗೆ ಭೇಟಿ*

ಆಗಷ್ಟ್ 27, 2026

*ಖಾರೀಫ್ ಬೆಳೆಗೆ ಹಾರಂಗಿ ಜಲಾಶಯದಿಂದ ನೀರು ಹರಿಸುವ ಕುರಿತು ಸಲಹಾ ಸಮಿತಿ ಸಭೆ*

ಆಗಷ್ಟ್ 27, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.