Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*
  • *ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*
  • *ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*
  • *ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *
  • *ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*
  • *ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*
  • *ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*
  • *ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*
  • *ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*
  • *ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಸಂವಿಧಾನದ ತಳಹದಿಗೆ ಧಕ್ಕೆ ತರುವ ಪ್ರಯತ್ನಗಳನ್ನು ವಿಫಲಗೊಳಿಸಬೇಕು : ಮುಖ್ಯಮಂತ್ರಿ ಸಿದ್ದರಾಮಯ್ಯ*
ಇತ್ತೀಚಿನ ಸುದ್ದಿಗಳು ಕರ್ನಾಟಕ

*ಸಂವಿಧಾನದ ತಳಹದಿಗೆ ಧಕ್ಕೆ ತರುವ ಪ್ರಯತ್ನಗಳನ್ನು ವಿಫಲಗೊಳಿಸಬೇಕು : ಮುಖ್ಯಮಂತ್ರಿ ಸಿದ್ದರಾಮಯ್ಯ*

ಫೆಬ್ರವರಿ 17, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಬೆಂಗಳೂರು, ಫೆ.17 NEWS DESK : ಜಾತ್ಯಾತೀತತೆ, ಸಮಾನತೆ, ಭ್ರಾತೃತ್ವ ತತ್ವಗಳೇ ಸಂವಿಧಾನದ ತಳಹದಿ. ಇಧಕ್ಕೆ ತರುವ ಪ್ರಯತ್ನಗಳನ್ನು ವಿಫಲಗೊಳಿಸಬೇಕಾಗಿರುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ. ಇದಕ್ಕೆ ಯಾವ ಪಕ್ಷ, ಗುಂಪು ಇಲ್ಲ. ಸಂವಿಧಾನ ಈ ದೇಶದ ಎಲ್ಲಾ ಜನರಿಗೆ ಸಲ್ಲುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ಸಮ್ಮೇಳನ ಸಭಾಂಗಣದಲ್ಲಿ ಏರ್ಪಡಿಸಿದ್ದ ಭಾರತ ಸಂವಿಧಾನ ಹಾಗೂ ಉರಾಷ್ಟ್ರೀಯ ಐಕ್ಯತಾ ಸಮಾವೇಶಕ್ಕೆ ಸಂಬOಧಿಸಿದಂತೆ ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

ಭಾರತದ ಸಂವಿಧಾನ ಜಾರಿಗೆ ಬಂದು 75 ನೇ ವರ್ಷಕ್ಕೆ ಕಾಲಿಟ್ಟಿದೆ. 75 ನೇ ವರ್ಷವನ್ನು ಅರ್ಥಪೂರ್ಣವಾಗಿ ಆಚರಿಸಲು ಸರ್ಕಾರ ತೀರ್ಮಾನಿಸಿದ್ದು, ಕರ್ನಾಟಕದಾದ್ಯಂತ 31 ಜಿಲ್ಲೆಗಳಲ್ಲಿ ಸಂವಿಧಾನ ಜಾಥಾ ಜನವರಿ 26 ರಿಂದ ಫೆ. 23ರವರೆಗೆ ಹಮ್ಮಿಕೊಳ್ಳಲಾಗಿದೆ. ಫೆ. 24-25 ಎರಡು ದಿಗಳು ರಾಷ್ಟ್ರೀಯ ಏಕತಾ ಸಮಾವೇಶ ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿದೆ. ಹೆಸರಾಂತ ಭಾಷಣಕಾರರು, ಖ್ಯಾತ ಚಿಂತಕರಾದ ಪ್ರೊ: ಅಸುತೋಶ್ ವರ್ಶನಿ ಹಾಗೂ ಡಾ: ಗಣೇಶ್ ದೇವಿ, ಪ್ರೊ. ಜಯಂತಿ ಘೋಷ್, ಪ್ರೊ. ಸುಖದೇವ್ ಥೋರಟ್, ಪ್ರೊ, ಕಾಂಚಾ, ಪ್ರಶಾಂತ್ ಭೂಷಣ್, ಬಿಜುವಾಡ ವಿಲ್ಸನ್ , ಮೇಧಾ ಪಾಟ್ಕರ್ ಮುಂತಾದ ಅನೇಕ ಚಿಂತಕರು ಮೇಧಾವಿಗಳು ಈ ಕಾರ್ಯಕ್ರಮದಲ್ಲಿ ಬಾಗವಹಿಸಲಿದ್ದಾರೆ. ದೇಶದ ಸಮಸ್ಯೆಗಳು, ಜನರ ಬವಣೆಗಳು, ಸಂವಿಧಾನದಲ್ಲಿ ಅದಕ್ಕೆ ಪರಿಹಾರಗಳ ಬಗ್ಗೆ ಬೆಳಕು ಚೆಲ್ಲಲಿದ್ದಾರೆ. 24 ರಂದು ಉದ್ಘಾಟನೆ ನಡೆದು 25 ರಂದು ಬೃಹತ್ ರ್ಯಾಲಿ ನಡೆಯಲಿದೆ. ಜಾಥಾ ಯಶಸ್ವಿಯಾಗಿ ನಡೆಯುತ್ತಿದೆ. ಶಾಲಾ ಕಾಲೇಜುಗಳಲ್ಲಿ ಸಂವಿಧಾನದ ಪಿಠಿಕೆಯನ್ನು ಓದಿಸಲಾಗುತ್ತಿದೆ. ಸಂವಿಧಾನ ರಚನೆಯಾದ ನಂತರ ಮೊದಲನೇ ಬಾರಿಗೆ ಬಜೆಟ್ ಪುಸ್ತಕದ ಮುಖಪುಟದಲ್ಲಿ ಪೀಠಿಕೆಯನ್ನು ಮುದ್ರಿಸಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಜಾಗೃತಿ ಮೂಡಬೇಕು ::
ದೇಶದ ಜನರಿಗೆ ಸಂವಿಧಾನ ನಮಗೇನು ಕೊಟ್ಟಿದೆ ಎನ್ನುವುದನ್ನು ತಿಳಿಯಬೇಕು. ಪ್ರತಿಯೊಬ್ಬ ನಾಗರಿಕನಿಗೂ ಇದು ಅರ್ಥವಾಗದಿದ್ದರೆ, ಅªರÀ ಹಕ್ಕುಗಳ ಪರವಾಗಿ ಹೋರಾಟ ಮಾಡಲು ತಿಳಿಯಬೇಕು. ಅಂಬೇಡ್ಕರ್ ಅವರು ಶಿಕ್ಷಣ, ಸಂಘಟನೆ, ಹೋರಾಟ ಎಂಬ ಮಂತ್ರಗಳನ್ನು ನೀಡಿದ್ದಾರೆ. ಹೋರಾಟ ಇಲ್ಲದೇ ಸಂವಿಧಾನದಲ್ಲಿ ಹೇಳಿರುವ ಅನೇಕ ಹಕ್ಕುಗಳು ನಮಗೆ ದಕ್ಕುತ್ತಿರಲಿಲ್ಲ. ಸ್ವಾತಂತ್ರ್ಯ ಬಂದು 77 ವರ್ಷಗಳಾಯಿತು. ಸಂವಿಧಾನ ಜಾರಿಯಾಗಿ 75 ನೇ ವರ್ಷವಾದರೂ ಎಲ್ಲರಿಗೂ ಎಲ್ಲ ಹಕ್ಕುಗಳು ಸಿಕ್ಕಿಲ್ಲ. ಸಂವಿಧಾನ ಜಾರಿ ಬಂದ ಸಂದರ್ಭದಲ್ಲಿ ವೈರುಧ್ಯತೆ ಇರುವ ಸಮಾಜಕ್ಕೆ ಕಾಲಿಡುತ್ತಿದ್ದೇವೆ ಎಂದು ಅಂಬೇಡ್ಕರ್ ಹೇಳಿದ್ದರು. ದೇಶದಲ್ಲಿ ಸಾಮಾಜಿಕ ಹಾಗೂ ರಾಜಕೀಯ ಅಸಮಾನತೆ ಇದೆ. ಇಷ್ಟು ವರ್ಷಗಳಾದರೂ ಅಸಮಾನತೆ ನಮ್ಮ ದೇಶದಿಂದ ಹೋಗಿಲ್ಲ. ಈ ಬಗ್ಗೆ ಎಲ್ಲರೂ ಎಚ್ಚೆತ್ತುಕೊಳ್ಳಬೇಕು. ಆರ್ಥಿಕ, ಸಾಮಾಜಿಕ, ಸಮಾನತೆಯನ್ನು ಸಂವಿಧಾನ ಕೊಟ್ಟಿದ್ದರೂ ನಮಗ್ಯಾಕೆ ಸಿಕ್ಕಿಲ್ಲ ಎಂಬ ಜಾಗೃತಿ ಮೂಡಬೇಕು. ಕೊಟ್ಟಿಲ್ಲ ಎಂದು ಸುಮ್ಮನೆ ಕುಳಿತುಕೊಳ್ಳಬಾರದು. ಅದಕ್ಕಾಗಿ ಈ ಜಾಥಾ ಹಮ್ಮಿಕೊಳ್ಳಲಾಗಿದೆ ಎಂದರು.

ಜನರಿಗೆ ಸಂವಿಧಾನದ ಅರಿವು ಮೂಡಿಸುವ ಉದ್ದೇಶ:

ನಮ್ಮ ದೇಶದಲ್ಲಿ ಕಾನೂನಿನ ಅರಿವು ಕಡಿಮೆಯಿದೆ. ಬಹಳ ಜನರು ಸಂವಿಧಾನದ ಬಗ್ಗೆ ತಿಳಿದಿಲ್ಲ. ದೇಶದ ಪ್ರತಿ ನಾಗರಿಕನಿಗೂ ನಮ್ಮ ಸಂವಿಧಾನದ ಬಗ್ಗೆ ತಿಳಿದಿರಬೇಕು. ಸಂವಿಧಾನ ನೀಡಿರುವ ಹಕ್ಕುಗಳು, ಅವುಗಳು ಸರಿಯಾಗಿ ಅನುಷ್ಠಾನ ಮಾಡಲಾಗುತ್ತಿದೆಯೇ ಎಂದು ಎಲ್ಲರಿಗೂ ತಿಳಿಯುವ ಸಲುವಾಗಿ ಸಮಾವೇಶವನ್ನು ಆಯೋಜಿಸುತ್ತಿರುವುದಾಗಿ ತಿಳಿಸಬೇಕಿದೆ. ಸಂವಿಧಾನದಲ್ಲಿ ಕೆಲವರಿಗೆ ನಂಬಿಕೆ , ಗೌರವವಿಲ್ಲ. ಆದ್ದರಿಂದ ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದರು.

ಸಹಿಷ್ಣುತೆ ಮತ್ತು ಸಹಬಾಳ್ವೆಯನ್ನು ಭೋದಿಸುವ ಸಂವಿಧಾನ:

ಸಂವಿಧಾನದ ಬಗ್ಗೆ ಜಾಗೃತಿ ಮೂಡಿಸಬೇಕಾದ್ದು ಸರ್ಕಾರಗಳ ಕರ್ತವ್ಯ. ಸಹಿಷ್ಣುತೆ ಮತ್ತು ಸಹಬಾಳ್ವೆಯನ್ನು ಸಂವಿಧಾನ ತಿಳಿಸುತ್ತದೆ, ಆದರೆ ಅದು ಪಾಲನೆಯಾಗುತ್ತಿದೆಯೇ? ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ನಿಜವಾಗಲೂ ಆಗುತ್ತಿದೆಯೇ? ಸಾಮಾಜಿಕ ನ್ಯಾಯ ಮತ್ತು ಅವಾಕಶಗಳನ್ನು ಪಡೆಯಲು ಜನರು ಪ್ರಯತ್ನಿಸಲು ಜಾಗೃತಿ ಮೂಡಿಸಲು ಫೆಬ್ರವರಿ 24 ಮತ್ತು 25 ರಂದು ಎರಡು ಭಾರತ ಸಂವಿಧನ ಮತ್ತು ರಾಷ್ಟ್ರೀಯ ಐಕ್ಯತಾ ಸಮಾವೇಶವನ್ನು ಆಯೋಜಿಸಲಾಗಿದೆ ಎಂದರು

ಸಂವಿಧಾನ ಅರಿವು ಮೂಡಿಸುವಲ್ಲಿ ಬದ್ಧತೆ ಹಾಗೂ ಸ್ಪಷ್ಟತೆ :

ಸಂವಿಧಾನ ಬಗ್ಗೆ ಅರಿವು ಮೂಡಿಸುವ ಕಾರ್ಯದಲ್ಲಿ ಬದ್ಧತೆ ಹಾಗೂ ಸ್ಪಷ್ಟತೆ ಇದ್ದರೆ, ಯಾರು ನಮ್ಮನ್ನು ದಾರಿತಪ್ಪಿಸಲು ಸಾಧ್ಯವಿಲ್ಲ. ಸುಮಾರು 78% ರಷ್ಟು ಜನರು ಶಿಕ್ಷಣ ಪಡೆದಿದ್ದಾರೆ. ವಿದ್ಯಾವಂತರು ಇಂದಿಗೂ ಮೌಢ್ಯ ಕಂದಾಚಾರವನ್ನು ನಂಬುತ್ತಿದ್ದಾರೆ. ನಮ್ಮಲ್ಲಿ ವೈಚಾರಿಕತೆಯ ಬಗ್ಗೆ ಜ್ಞಾನವಿಲ್ಲ. ಸರಿತಪ್ಪುಗಳ ಬಗ್ಗೆ ಅರಿಯಲೆಂದೇ ಶಿಕ್ಷಣ ಪಡೆಯುವುದು ಎಂದರು.

ಸಚಿವ ಡಾ. ಹೆಚ್.ಸಿ ಮಹದೇವಪ್ಪ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ.24 : ನಾಪೋಕ್ಲುವಿನ ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆ ನಾಪೋಕ್ಲು, ರೋಟರಿ ಮಿಸ್ಟಿ ಹಿಲ್ಸ್…

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *

ಆಗಷ್ಟ್ 24, 2026

*ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*

ಆಗಷ್ಟ್ 24, 2026

*ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*

ಆಗಷ್ಟ್ 24, 2026

*ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 24, 2026

*ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 24, 2026

*ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*

ಆಗಷ್ಟ್ 24, 2026

*ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*

ಆಗಷ್ಟ್ 24, 2026

*ಮಳೆಗಾಗಿ ಸಚಿವರಿಂದ ವಿಶೇಷ ಪೂಜೆ*

ಆಗಷ್ಟ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.