Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಭಾರತ vs ಪಾಕಿಸ್ತಾನ ಪಂದ್ಯಕ್ಕೆ ಮಳೆ ಭೀತಿ! ಶ್ರೀಲಂಕಾ ಹವಾಮಾನ ಇಲಾಖೆ ನೀಡಿದ ಆ ಒಂದು ಎಚ್ಚರಿಕೆ ಅಭಿಮಾನಿಗಳಿಗೆ ಬಿಗ್ ಶಾಕ್!*
  • *ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*
  • *ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*
  • *ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*
  • *ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*
  • *ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*
  • *ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*
  • *16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*
  • *ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*
  • *ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಕೊಡವ ಮಕ್ಕಡ ಕೂಟಕ್ಕೆ 12 ನೇ ವಾರ್ಷಿಕೋತ್ಸವದ ಸಂಭ್ರಮ : ದಾಖಲೆಯ 83 ಪುಸ್ತಕಗಳನ್ನು ಲೋಕಾರ್ಪಣೆ ಮಾಡಿದ ಹೆಗ್ಗಳಿಕೆ*
ಇತ್ತೀಚಿನ ಸುದ್ದಿಗಳು

*ಕೊಡವ ಮಕ್ಕಡ ಕೂಟಕ್ಕೆ 12 ನೇ ವಾರ್ಷಿಕೋತ್ಸವದ ಸಂಭ್ರಮ : ದಾಖಲೆಯ 83 ಪುಸ್ತಕಗಳನ್ನು ಲೋಕಾರ್ಪಣೆ ಮಾಡಿದ ಹೆಗ್ಗಳಿಕೆ*

February 19, 20244 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಫೆ.19 NEWS DESK : ಕೊಡವರ ಮೂಲ ಪರಂಪರೆಯ ಆಚಾರ, ವಿಚಾರ, ಭಾಷೆ, ಪದ್ಧತಿ, ಪರಂಪರೆಯ ಜೊತೆಗೆ ಕೊಡವ ಆಟ್ ಪಾಟನ್ನು ಉಳಿಸಿ ಬೆಳೆಸುವ ಉದ್ದೇಶದೊಂದಿಗೆ ಕೊಡಗಿನ ಉತ್ಸಾಹಿ ಕೊಡವ ಯುವಕ, ಯುವತಿಯರ ತಂಡ 2013 ಫೆ.18 ರಂದು ಸಂಘಟನೆಯೊಂದನ್ನು ಹುಟ್ಟು ಹಾಕಿತು. ಮುಂದೆ ಬೊಳ್ಳಜಿರ ಬಿ.ಅಯ್ಯಪ್ಪ ಅವರ ಸಾರಥ್ಯದಲ್ಲಿ ಕೊಡವ ಮಕ್ಕಡ ಕೂಟ(ರಿ)ವಾಗಿ ಬೆಳೆದು ಇಂದು 11ನೇ ವರ್ಷ ಪೂರೈಸಿ 12ನೇ ವರ್ಷಾಚರಣೆಯ ಸಂಭ್ರಮದಲ್ಲಿದೆ.
ಕೊಡವ ಮಕ್ಕಡ ಕೂಟದ ಕಾರ್ಯದರ್ಶಿ ಪುತ್ತರಿರ ಕರುಣ್ ಕಾಳಯ್ಯ, ಜಂಟಿ ಕಾರ್ಯದರ್ಶಿ ಕೇಲೇಟ್ಟಿರ ದೇವಯ್ಯ ಹಾಗೂ ಖಜಾಂಚಿ ಅಮ್ಮಾಟಂಡ ಮೇದಪ್ಪ ಮತ್ತಿತರರು ಬೊಳ್ಳಜಿರ ಬಿ.ಅಯ್ಯಪ್ಪ ಅವರ ನೇತೃತ್ವದಲ್ಲಿ ಸಂಘಟನೆಯನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದಾರೆ.
ಕೊಡವ ಜನಾಂಗದ ಭಾಷೆ, ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಕೂಟ ಅವಿರತ ಶ್ರಮ ವಹಿಸುತ್ತಿದೆ. ಕೊಡವ ಪದ್ಧತಿ, ಪರಂಪರೆ, ಆಚಾರ, ವಿಚಾರವನ್ನು ಯುವ ಪೀಳಿಗೆಗೆ ಮನವರಿಕೆ ಮಾಡಿಕೊಡುತ್ತಿದೆ. ಮಡಿಕೇರಿ, ನಾಪೋಕ್ಲು ಸೇರಿದಂತೆ ಜಿಲ್ಲೆಯ ಹಲವೆಡೆ ಆಟ್‌ಪಾಟ್ ಪಡಿಪು ಶಿಬಿರದಡಿ ಮಕ್ಕಳಿಗೆ ಕೋಲಾಟ್, ಕತ್ತಿಯಾಟ್, ಪರೆಕಳಿ, ಬೊಳಕಾಟ್, ಸಂಬಂಧ ಅಡ್‌ಕ್‌ವ, ದುಡಿ ಕೊಟ್, ಕಾರ್ಯಕ್ರಮ ಸೇರಿದಂತೆ ಹೆಣ್ಣು ಮಕ್ಕಳಿಗೆ ಉಮ್ಮತಾಟ್ ತರಬೇತಿಯನ್ನು ಕೂಡ ನೀಡುತ್ತಿದೆ. ಯುವ ಪೀಳಿಗೆಯಲ್ಲಿ ಕೊಡವ ಸಂಸ್ಕೃತಿಯ ಬಗ್ಗೆ ಜಾಗೃತಿ ಹಾಗೂ ಆಸಕ್ತಿಯನ್ನು ಬೆಳೆಸುವ ಜೊತೆಗೆ ಕೊಡವರ ಪವಿತ್ರ ಗ್ರಂಥ ಪಟ್ಟೋಲೆ ಪಳಮೆಯನ್ನು ಕೊಡವ ಮಕ್ಕಳಿಗೆ ನೀಡಿ ಕೂಟ ಪ್ರೋತ್ಸಾಹಿಸಿದೆ.
ಕೊಡವ ಮಕ್ಕಡ ಕೂಟದ ಕಾರ್ಯವನ್ನು ಮೆಚ್ಚಿ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಕೊಡವ ಸಂಸ್ಕೃತಿಯ ಧ್ಯೋತಕವಾದ ದುಡಿಯನ್ನು ಕೊಡವ ಮಕ್ಕಡ ಕೂಟಕ್ಕೆ ನೀಡಿ ಗೌರವಿಸಿದೆ. ಕೊಡವ ಸಾಹಿತ್ಯ ಅಕಾಡೆಮಿಯ ಸಹಯೋಗದಲ್ಲಿ ಕೊಡಗಿನ ಹಲವೆಡೆ “ಕುಂಞಯಡ ಕೊಡವ ಜಾನಪದ ಸಾಂಸ್ಕೃತಿಕ ನಮ್ಮೆ”ಯನ್ನು ಯಶಸ್ವಿಯಾಗಿ ನಡೆಸಿದೆ.
ತಮ್ಮ ಸಾಧನೆಯ ಮೂಲಕ ತಾಯಿನಾಡಿನ ಕೀರ್ತಿ ಪತಾಕೆಯನ್ನು ಏರಿಸಿ ಅಜರಾಮರರಾಗಿರುವ ಕೊಂಗಂಡ ಗಣಪತಿ, ಹರದಾಸ ಅಪ್ಪನೆರವಂಡ ಅಪ್ಪಚಕವಿ, ದಾನಿ ಕೊರವಂಡ ನಂಜಪ್ಪ, ಸ್ವಾತಂತ್ರ್ಯ ಹೋರಾಟಗಾರ ಕೊಡಗಿನ ಗಾಂಧಿ ಎಂದೇ ಬಿರುದು ಪಡೆದ ಪಂದ್ಯಂಡ ಬೆಳ್ಯಪ್ಪ ಅವರ ಕಲ್ಲಿನ ನಾಮಫಲಕವನ್ನು ಮಡಿಕೇರಿ ನಗರದ ವಿವಿಧ ರಸ್ತೆಗಳಲ್ಲಿ ಪುನರ್ ಪ್ರತಿಷ್ಠಾಪಿಸಿ ಹಿರಿಯರಿಗೆ ಗೌರವವನ್ನು ಸಲ್ಲಿಸಿದೆ.
::: ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ಸ್ಮರಣೆ :::
ದೇಶ ರಕ್ಷಣೆಗಾಗಿ ಪ್ರಾಣದ ಹಂಗು ತೊರೆದು ಶತ್ರುಗಳೊಡನೆ ಹೋರಾಡಿ ಪ್ರಾಣತೆತ್ತ ಅಪ್ರತಿಮ ವೀರ ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ಅವರ ನೆನಪು ಕೊಡಗಿನಲ್ಲಿ ಅಜರಾಮರವಾಗಿ ಉಳಿಯಲು ಅಜ್ಜಮಾಡ ಕುಟುಂಬದ ಸಹಕಾರದೊಂದಿಗೆ ಮಡಿಕೇರಿಯ ಮುಖ್ಯರಸ್ತೆಯಲ್ಲಿ ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ವೃತ್ತದಲ್ಲಿ ಕಂಚಿನ ಪ್ರತಿಮೆ ಸ್ಥಾಪನೆ ಮಾಡಿದ ಪರಿಶ್ರಮದ ಹಿಂದೆ ಕೊಡವ ಮಕ್ಕಡ ಕೂಟದ ಪಾತ್ರ ಪ್ರಮುಖವಾಗಿದೆ. ಪ್ರತಿವರ್ಷ ದೇವಯ್ಯನವರ ಜನ್ಮದಿನ ಹಾಗೂ ವೀರಮರಣವನ್ನಪ್ಪಿದ ದಿನವನ್ನು ಆಚರಿಸಿಕೊಂಡು ಬರುತ್ತಿರುವ ಕೂಟ ಹುತಾತ್ಮ ಯೋಧನಿಗೆ ಗೌರವ ಅರ್ಪಿಸುತ್ತಿದೆ. ಕೊಡಗಿನ ವೀರ ಯೋಧರು, ಮಾಜಿ ಸೇನಾನಿಗಳು ಹಾಗೂ ಅಜ್ಜಮಾಡ ಕುಟುಂಬ ಈ ಸ್ಮರಣಾ ದಿನದ ಕಾರ್ಯಕ್ರಮಕ್ಕೆ ಕೈಜೋಡಿಸುತ್ತಿದೆ.
ಬ್ರಿಟಿಷ್ ಸರಕಾರದಿಂದಲೇ ಬಳುವಳಿಯಾಗಿ ಬಂದಿರುವ ಕೊಡವ ಬೈರೇಸ್ ಅನ್ವಯ ಪ್ರತಿಯೊಬ್ಬ ಕೊಡವನಿಗೂ ಬಂದೂಕು ಹೊಂದುವ ವಿನಾಯಿತಿ ಪತ್ರಪಡೆಯಲು ಅವಕಾಶವಿದ್ದರೂ ಹಲವಡೆ ತೊಂದರೆಯಾದ ಸಂದರ್ಭ ಕೊಡವ ಮಕ್ಕಡ ಕೂಟ ಹೋರಾಟ ನಡೆಸಿದೆ, ಅಲ್ಲದೆ ನ್ಯಾಯಾಲಯದ ಮೆಟ್ಟಿಲನ್ನೂ ಏರಿತ್ತು. ಕೊಡವ ಜನಾಂಗಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಹಲವು ಹೋರಾಟಗಳನ್ನು ಮಾಡಿ ಯಶಸ್ವಿಯಾಗಿದೆ.
ಕೊಡವರ ಹೊಸವರ್ಷ ಎಡಮ್ಯಾರ್ ಒಂದನ್ನು ದಕ್ಷಿಣ ಕೊಡಗಿನಿಂದ ಹಿಡಿದು ಉತ್ತರ ಕೊಡಗಿನ ಹಲವೆಡೆ ಕೊಡವ ಸಂಸ್ಕೃತಿಯ ಆಚರಣೆಯಂತೆ ಆಚರಿಸಿಕೊಂಡು ಬಂದಿದೆ. ಗದ್ದೆಗಳಲ್ಲಿ ಭೂಮಿ ತಾಯಿಗೆ ಪೂಜೆ ಸಲ್ಲಿಸಿ ಎತ್ತುಕಟ್ಟಿ ಉಳುಮೆ ಮಾಡಿ ಹಲವು ಕುಟುಂಬದ ಐನ್‌ಮನೆಗಳಲ್ಲಿ ಎಡಮ್ಯಾರ್ ಒಂದನ್ನು ಆಚರಿಸುವ ಮೂಲಕ ದಿನದ ವಿಶೇಷತೆಯ ಬಗ್ಗೆ ಅರಿವನ್ನು ಮೂಡಿಸಿದೆ.
ಕೊಡಗಿನ ಕುಲ ದೇವರ ಮೂಲ ನೆಲೆ ತಲಕಾವೇರಿಯಲ್ಲಿ ಅಕ್ಟೋಬರ್ ತಿಂಗಳಿನಲ್ಲಿ ನಡೆಯುವ ಕಾವೇರಿ ತೀರ್ಥೋದ್ಭವದಂದು ಕೊಡವ ಮಕ್ಕಡ ಕೂಟ ಕಾವೇರಿ ಚಂಗ್ರಾಂದಿ ಯಾತ್ರೆ ಆರಂಭಿಸಿ ಯಶಸ್ವಿಯಾಗಿದೆ. ಕೊಡವ ಉಡುಪಿನಲ್ಲಿ ಹಿರಿಯರೊಂದಿಗೆ ದುಡಿಕೊಟ್ಟು ಹಾಡಿನೊಂದಿಗೆ ಸನ್ನಿದಿಗೆ ತೆರಳಿ ಕಾವೇರಿ ತಾಯಿ ತೀರ್ಥರೂಪಿಣಿಯಾಗಿ ಬರುವವರೆಗೆ ದುಡಿಕೊಟ್ಟು ಹಾಡಿನೊಂದಿಗೆ ಕುಲದೇವಿಯನ್ನು ನಮಿಸುವ ಪರಿಪಾಠವನ್ನು ಆರಂಭಿಸಿದ ಹೆಗ್ಗಳಿಕೆ ಕೂಟದ್ದಾಗಿದೆ.
::: ಪುಸ್ತಕಗಳು ಲೋಕಾರ್ಪಣೆ :::
ಕೊಡವ ಮಕ್ಕಡ ಕೂಟ ಕೊಡವ ಸಂಸ್ಕೃತಿ, ಆಚಾರ ವಿಚಾರಕ್ಕೆ ಸಂಬಧಿಸಿದ ಕೊಡವ, ಕನ್ನಡ, ಇಂಗ್ಲೀಷ್ ಮತ್ತು ಹಿಂದಿ ಭಾಷೆಯ ದಾಖಲೆಯ ಒಟ್ಟು 83 ಪುಸ್ತಕಗಳನ್ನು ಲೋಕಾರ್ಪಣೆಗೊಳಿಸಿದೆ.
ಆಟ್ ಪಾಟ್ ಪುಸ್ತಕ (ನಾಲ್ಕನೇ ಮುದ್ರಣ), 1965ರ ಯುದ್ಧ ಹಾಗೂ ಕೊಡಗಿನ ಮಹಾವೀರ ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ, ಕೊಡವರು ಹಾಗೂ ಕಾವೇರಿ, ಮಹಾವೀರ ಅಚ್ಚುತ್ತನಾಯಕ, ಕೊಡಗಿನ ಗಾಂಧಿ ಪಂದ್ಯಂಡ ಬೆಳ್ಯಪ್ಪ, ಕುಂಞ ಪುಟ್ಟಲ್ಲಿ, ದಿವಾನ್ ಚೆಪ್ಪುಡಿರ ಪೊನ್ನಪ್ಪ, ಕೊಡವ ಕ್ರೀಡಾ ಕಲಿಗಳು, ಅಪ್ಪಚ್ಚ ಕವಿರ ನೆನಪು, 1785(ಲೆ.ಕ. ಪುಟ್ಟಿಚಂಡ ಎಸ್.ಗಣಪತಿ) ಕೊಡವ ಭಾಷೆಯ ಕೊಡಗ್ ರ ಸಂಗೀತ, ಸಾಹಿತ್ಯ ಕಲಾವಿದಂಗವನ್ನು ಕನ್ನಡದಲ್ಲಿ ಕೊಡಗಿನ ಸಂಗೀತ ಸಾಹಿತ್ಯ ಕಲಾವಿದರು ಎಂದು ಅನುವಾದ ಮಾಡಲಾಗಿದೆ. ಇಲ್ಲಿಯವರೆಗೆ 83 ಪುಸ್ತಕಗಳನ್ನು ಕೂಟದ ಮೂಲಕ ಬಿಡುಗಡೆಗೊಳಿಸಲಾಗಿದ್ದು, ಇನ್ನೂ 17 ಪುಸ್ತಕಗಳು ಬಿಡುಗಡೆಗೆ ಸಿದ್ಧಗೊಳ್ಳುತ್ತಿದೆ. ಮಾರ್ಚ್ ಅಂತ್ಯದೊಳಗೆ ದಾಖಲೆಯ ಒಟ್ಟು 100 ಪುಸ್ತಕಗಳು ಲೋಕಾರ್ಪಣೆಗೊಳ್ಳಲಿದೆ ಎಂದು ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಅವರು ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ.
::: ಪ್ರಶಸ್ತಿಗಳು :::
ಕೊಡವ ಮಕ್ಕಡ ಕೂಟ ಪ್ರಕಟಿತ 5ಪುಸ್ತಕಗಳಿಗೆ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಪುಸ್ತಕ ಪ್ರಶಸ್ತಿ ಲಭಿಸಿದೆ. ಚಿಗುರೆಲೆ ಪುಸ್ತಕಕ್ಕೆ ರಾಜ್ಯ ಪ್ರಶಸ್ತಿ, ಅಗ್ನಿಯಾತ್ರೆ ಪುಸ್ತಕಕ್ಕೆ ಗೌರವ ದತ್ತಿನಿಧಿ ಪ್ರಶಸ್ತಿ ದೊರೆತ್ತಿದೆ. ಕೊಡವ ಮಕ್ಕಡ ಕೂಟ ಬಿಡುಗಡೆಗೊಳಿಸಿರುವ `ಕೊಡಗ್‌ರ ಸಿಪಾಯಿ” ಕಾದಂಬರಿ ಚಲನಚಿತ್ರವಾಗಿ ಜನಮನ್ನಣೆಗೆ ಪಾತ್ರವಾಗಿದೆ. ನಾಡ ಪೆದ ಆಶಾ, ಪೊಮ್ಮಾಲೆ ಕೊಡಗ್, ಬೇರ್ ಕಾದಂಬರಿ ಕೂಡ ಕೊಡವ ಚಲನಚಿತ್ರವಾಗಿ ಜನಪ್ರಿಯತೆ ಗಳಿಸಿಕೊಂಡಿದೆ, ಅಲ್ಲದೆ ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನ ಕಂಡು ಪ್ರಶಸ್ತಿಗಳನ್ನು ಗೆದ್ದಿದೆ.
ಕೊಡವ ಮಕ್ಕಡ ಕೂಟದ ಸಂಸ್ಥಾಪಕ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಅವರು ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಸದಸ್ಯರಾಗಿ ಮತ್ತು ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಸ್ಥಾಪನೆಗೊಂಡ ಕೊಡವ ಅಧ್ಯಯನ ಪೀಠದ ಸಮಿತಿಯ ಸದಸ್ಯರಾಗಿಯೂ ಸೇವೆ ಸಲ್ಲಿಸಿದ್ದಾರೆ.
ಕೊಡವ ಮಕ್ಕಡ ಕೂಟ ಹಲವು ವಿವಿಧ ಸಂಘ, ಸಂಸ್ಥೆಗಳೊಂದಿಗೆ ಕೈಜೋಡಿಸಿ ಕೊಡವ ಸಂಸ್ಕೃತಿ, ಆಚಾರ ವಿಚಾರ, ಭಾಷೆ, ಪದ್ಧತಿ, ಪರಂಪರೆಯ ಉಳಿವಿಗಾಗಿ ಶ್ರಮಿಸುತ್ತಾ ಬಂದಿದೆ. ಇದೇ ಫೆ.18 ರಂದು 12ನೇ ವಾರ್ಷಿಕೋತ್ಸವವನ್ನು ಆಚರಿಸಿಕೊಂಡ ಕೊಡವ ಮಕ್ಕಡ ಕೂಟಕ್ಕೆ ಮತ್ತಷ್ಟು ಯಶಸ್ವೀ ಕಾರ್ಯಕ್ರಮಗಳನ್ನು ರೂಪಿಸುವಂತ್ತಾಗಲಿ ಎಂದು ಶುಭ ಹಾರೈಸೋಣ. (ಬರಹ : ಪುತ್ತರಿರ ಕರುಣ್ ಕಾಳಯ್ಯ)

Share. Facebook Twitter Pinterest LinkedIn Tumblr Email WhatsApp
Previous Article*ರಾಷ್ಟ್ರೀಯ ಮಟ್ಟದ ನೃತ್ಯ ಸ್ಪರ್ಧೆ : ವಿರಾಜಪೇಟೆಯ ಟೀಂ ಇಂಟೋಪೀಸ್ ನೃತ್ಯ ತಂಡ ಚಾಂಪಿಯನ್*
Next Article *ಮಕ್ಕಳನ್ನು ಅಪಾಯಕಾರಿ ಉದ್ದಿಮೆಗಳಲ್ಲಿ ಕೆಲಸಕ್ಕೆ ನಿಯೋಜನೆ ಸಂಪೂರ್ಣ ನಿಷೇಧ*

Website design development company services in Mangalore

Forex Trading Teacher in India

Related Posts

*ವಾಯುಪಡೆ ಸೇರಲು 10th ಪಾಸ್ ಸಾಕು! ತಿಂಗಳಿಗೆ ಭರ್ಜರಿ ಸಂಬಳ; ನಿಮ್ಮ ಜಿಲ್ಲೆಯಲ್ಲೂ ನೇಮಕಾತಿ ಇದೆಯೇ? ಚೆಕ್ ಮಾಡಿ!*

February 14, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಬೆಂಗಳೂರು ಐಪಿಎಲ್ ಪಂದ್ಯಗಳಿಗೆ ಷರತ್ತುಬದ್ಧ ಒಪ್ಪಿಗೆ! ಸಂಭ್ರಮಾಚರಣೆ ಮಾಡಿದ್ರೆ ಬೀಳುತ್ತೆ ದಂಡ? ಗೃಹ ಸಚಿವರು ಹೇಳಿದ್ದೇನು?*

February 14, 2026

ಬೆಂಗಳೂರು: ಸಿಲಿಕಾನ್ ಸಿಟಿಯ ಕ್ರಿಕೆಟ್ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ 2026ರ ಐಪಿಎಲ್ (IPL) ಪಂದ್ಯಗಳನ್ನು…

*ಗಂಡಸರಿಗೂ ಬಸ್ ಪ್ರಯಾಣ ಉಚಿತ! ಮಹಿಳೆಯರಿಗೆ 25,000 ರೂ. ನಗದು; ಕರ್ನಾಟಕದ ಪಕ್ಕದ ರಾಜ್ಯದಲ್ಲಿ ಭರ್ಜರಿ ಗಿಫ್ಟ್ ಘೋಷಣೆ!*

February 13, 2026

*ಫ್ರೀ.. ಫ್ರೀ.. ಫ್ರೀ! ಪಿಯುಸಿ ಪರೀಕ್ಷೆ ಬರೆಯುವವರಿಗೆ ಸಾರಿಗೆ ಇಲಾಖೆಯಿಂದ ಸಿಹಿಸುದ್ದಿ: ಕಂಡಕ್ಟರ್‌ಗೆ ಈ ಒಂದು ಕಾರ್ಡ್ ತೋರಿಸಿದ್ರೆ ಸಾಕು!*

February 13, 2026

*ಮದೆನಾಡು ಗ್ರಾ.ಪಂ.ವ್ಯಾಪ್ತಿಯಲ್ಲಿ 100 ಕೋಟಿ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಎ.ಎಸ್.ಪೊನ್ನಣ್ಣ ಚಾಲನೆ*

February 13, 2026

*ಮಾ.2ರಂದು “ಕುಂಬ್ಯಾರ್ ಕಲಾಡ್ಚ” ವಾರ್ಷಿಕೋತ್ಸವ*

February 13, 2026

*16ನೇ ಅಂತರಾಷ್ಟ್ರೀಯ ಮಟ್ಟದ ಆನ್‌ಲೈನ್ ಬ್ರೈನೋಬ್ರೈನ್ ಸ್ಪರ್ಧೆಯಲ್ಲಿ ಮಡಿಕೇರಿ ಮಕ್ಕಳ ಸಾಧನೆ*

February 13, 2026

*ಫೆ. 15ರಂದು ಚೆಟ್ಟಳ್ಳಿಯಲ್ಲಿ ಮಹಾಶಿವರಾತ್ರಿ ಆಚರಣೆ*

February 13, 2026

*ಲಂಡನ್‌ನಿಂದ ನೇರವಾಗಿ ಜೈಲಿಗೆ? ವಿಜಯ್ ಮಲ್ಯಗೆ ಸುಪ್ರೀಂ ಕೋರ್ಟ್ ನೀಡಿದ ಅಂತಿಮ ವಾರ್ನಿಂಗ್‌ನ ಸಾರಾಂಶ ಇಲ್ಲಿದೆ!*

February 13, 2026

*ಸಂಭ್ರಮದಿಂದ ಜರುಗಿದ ವಿರಾಜಪೇಟೆಯ ಸಂತ ಅನ್ನಮ್ಮ ಚರ್ಚ್ ನ ವಾರ್ಷಿಕ ಮಹೋತ್ಸವ. ಮೈಸೂರು ಧರ್ಮಾಧ್ಯಕ್ಷರಾದ ಬಿಷಪ್ ಫ್ರಾನ್ಸಿಸ್ ಸೆರಾವೋ ರವರ ನೇತೃತ್ವದಲ್ಲಿ ಜರುಗಿದ ದಿವ್ಯ ಬಲಿಪೂಜೆ*

February 13, 2026

*ಫೆ.15 ರಂದು ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ಶಿವರಾತ್ರಿ ಹಬ್ಬದ ಪ್ರಯುಕ್ತ ವಿಶೇಷ ಪೂಜೆ*

February 13, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.