ಮಡಿಕೇರಿ ಫೆ.20 NEWS DESK : ರಾಷ್ಟ್ರೀಯ ಆಯುಷ್ ಅಭಿಯಾನ ಯೋಜನೆಯಡಿ ಸಮುದಾಯ ಆರೋಗ್ಯ ಅಧಿಕಾರಿ ಹಾಗೂ ಮಲ್ಟಿಪರ್ಪಸ್ ವರ್ಕರ್ ಹುದ್ದೆಗಳ ನೇಮಕಾತಿ ಸಂಬಂಧ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಜಿಲ್ಲಾ ಆಯುಷ್ ಕಚೇರಿ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.
ಆಯ್ಕೆಪಟ್ಟಿ ಕುರಿತಂತೆ ಆಕ್ಷೇಪಣೆಗಳು ಇದ್ದಲ್ಲಿ ಫೆ.26 ರ ಸಂಜೆ 4 ಗಂಟೆಯೊಳಗೆ ಜಿಲ್ಲಾ ಆಯುಷ್ ಅಧಿಕಾರಿ, ಆಯುಷ್ ಇಲಾಖೆ, ಮಹದೇವಪೇಟೆ, ಮಡಿಕೇರಿ ಕೊಡಗು ಜಿಲ್ಲೆ ಇವರಿಗೆ ಮನವಿ ಮೂಲಕ ಸಲ್ಲಿಸಬಹುದಾಗಿದೆ. ಈ ಅವಧಿಯ ನಂತರ ಸ್ವೀಕೃತವಾದ ಆಕ್ಷೇಪಣೆಗಳನ್ನು ತಿರಸ್ಕರಿಸಲಾಗುವುದು ಎಂದು ಜಿಲ್ಲಾ ಆಯುಷ್ ಅಧಿಕಾರಿ ಡಾ.ರೇಣುಕಾದೇವಿ ತಿಳಿಸಿದ್ದಾರೆ.











