ಬೆಂಗಳೂರು ಫೆ.20 NEWS DESK : ವೈದ್ಯಕೀಯ ಶಿಕ್ಷಣ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಶರಣ್ ಪ್ರಕಾಶ್ ಪಾಟೀಲ್ ಅವರ ಅದ್ಯಕ್ಷತೆಯಲ್ಲಿ ಮಂಗಳವಾರ ವಿಕಾಸಸೌಧದಲ್ಲಿ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಕಾಲೇಜು ಆಡಳಿತ ಮಂಡಳಿಯ ಸಭೆ ನಡೆಸಲಾಯಿತು. ಸಭೆಯಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂಥರ್ ಗೌಡ, ವೈದ್ಯಕೀಯ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಮೊಹಮ್ಮದ್ ಮೋಸಿನ್, ಕಾರ್ಯದರ್ಶಿ(ಹಣಕಾಸು) ಆರ್.ವಿಶಾಲ್, ಸಂಸ್ಥೆಯ ನಿದೇರ್ಶಕ ಡಾ. ವಿಶಾಲ್ ಕುಮಾರ್, ವೈದ್ಯಕೀಯ ಶಿಕ್ಷಣ ಇಲಾಖೆಯ ನಿರ್ದೇಶಕಿ ಡಾ.ಸುಜಾತಾ ರಾಥೋಡ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.











