ಮಡಿಕೇರಿ ಫೆ.22 NEWS DESK : ಅರಣ್ಯ ಹಕ್ಕು ಕಾಯ್ದೆ 2012 ರ ತಿದ್ದುಪಡಿ ಕಾಯ್ದೆ ಪ್ರಕಾರ ಒಂದೊಂದು ಕುಟುಂಬಕ್ಕೆ ತಲಾ 5 ಎಕರೆ ಕೃಷಿ ಭೂಮಿಯನ್ನು ಮಂಜೂರು ಮಾಡುವಂತೆ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕೊಡಗು ಜಿಲ್ಲಾ ಜೇನು ಕುರುಬರ ಸಂಘ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದೆ.
ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಸಂಘದ ಪ್ರಮುಖರು, ಜೇನು ಕುರುಬರ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಕೊಡಗು ಮತ್ತು ಮೈಸೂರು ಜಿಲ್ಲೆಗಳಲ್ಲಿ ವಾಸಿಸುತ್ತಿದ್ದಾರೆ. ಸ್ವತಂತ್ರ ಪೂರ್ವದಿಂದಲೂ ನಮ್ಮ ಸಮುದಾಯವು ತುಳಿತಕ್ಕೆ ಒಳಗಾಗಿದೆ. ಪ್ರಮುಖವಾಗಿ ನಮ್ಮ ಸಮುದಾಯಕ್ಕೆ ಉತ್ತಮ ಗುಣಮಟ್ಟದ ಶಿಕ್ಷಣ, ಹುಣಸೂರು ತಾಲ್ಲೂಕಿನಲ್ಲಿ ಜೇನುಕುರುಬರ ಕಚೇರಿಯನ್ನು ಮರುಸ್ಥಾಪಿಸಿ P.V.T.G ಅನುದಾನವನ್ನು ಜಿ.ಕೆ ಕಚೇರಿಯ ಮೂಲಕವೇ ನಮ್ಮ ಸಮುದಾಯಕ್ಕೆ ತಲುಪಿಸುವುದು. ಅರಣ್ಯ ಹಕ್ಕು ಕಾಯ್ದೆ 2012 ರ ತಿದ್ದುಪಡಿ ಕಾಯ್ದೆ ಪ್ರಕಾರ ಒಂದೊಂದು ಕುಟುಂಬಕ್ಕೆ ತಲಾ 5 ಎಕರೆ ಕೃಷಿ ಭೂಮಿಯನ್ನು ಮಂಜೂರು ಮಾಡುವಂತೆ ಮನವಿ ಮಾಡಿದರು.
ನಿಯೋಗದಲ್ಲಿ ಸಂಘದ ಉಪಾಧ್ಯಕ್ಷರಾದ ಜಿ.ಕೆ.ಮುತ್ತಮ್ಮ ಹಾಗೂ ಪದಾಧಿಕಾರಿಗಳು ಹಾಜರಿದ್ದರು.








