ನಾಪೋಕ್ಲು ಫೆ.22 NEWS DESK : ಮೂರ್ನಾಡಿನ ನಕ್ಷತ್ರ ಆಟೋ ಮಾಲೀಕರ ಹಾಗೂ ಚಾಲಕರ ಸಂಘದ ವತಿಯಿಂದ ಆಟೋ ಮಾಲೀಕರ ಹಾಗೂ ಚಾಲಕರ ಕುಟುಂಬಗಳ ಸಮ್ಮಿಲನ ಕಾರ್ಯಕ್ರಮ ಮೂರ್ನಾಡು ಪಾಂಡಾಣೆ ಮೈದಾನದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಗಣ್ಯರು ಉದ್ಘಾಟಿಸಿ, ಕಾರ್ಯಕ್ರಮಕ್ಕೆ ಶುಭಹಾರೈಸಿದರು.
ನಕ್ಷತ್ರ ಆಟೋ ಮಾಲೀಕರ ಹಾಗೂ ಚಾಲಕರ ಸಂಘದ ಅಧ್ಯಕ್ಷ ಬಿ.ಡಿ.ಉಮೇಶ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ
ಕಾಂತೂರು ಗ್ರಾ.ಪಂ ಅಧ್ಯಕ್ಷ ಬಿ.ಎಸ್.ಕುಶನ್ ರೈ, ತ್ರಿನೇತ್ರ ವಾಹನ ಮಾಲೀಕರ ಮತ್ತು ಚಾಲಕರ ಸಂಘದ ಅಧ್ಯಕ್ಷ ಕರವಂಡ ಸಜನ್ ಗಣಪತಿ ,ಫ್ರೆಂಡ್ಸ್ ವಾಹನ ಮಾಲೀಕ ಮತ್ತು ಚಾಲಕರ ಸಂಘದ ಅಧ್ಯಕ್ಷ ರಿಯಾಜ್, ನಾಪೋಕ್ಲುವಿನ ಆಟೋ ಮಾಲೀಕರ ಮತ್ತು ಚಾಲಕರ ಸಂಘದ ಅಧ್ಯಕ್ಷ ರಾಜೀವ್, ಅಮ್ಮತಿಯ ಆಟೋ ಮಾಲೀಕರ ಹಾಗೂ ಚಾಲಕರ ಸಂಘದ ಅಧ್ಯಕ್ಷ ಅಭಿಜಿತ್, ಮೂರ್ನಾಡು ಪೋಲಿಸ್ ಉಪಠಾಣೆಯ ಪಿ.ಟಿ.ಶ್ರೀನಿವಾಸ್ ,ಮೂರ್ನಾಡು ಪೊಲೀಸ್ ಉಪಠಾಣೆ ಸಿಬ್ಬಂದಿ ರಾಜೇಂದ್ರ ,ಕಾಂತೂರು ಗ್ರಾ.ಪಂ ಸದಸ್ಯ ಎಚ್.ಎನ್.ರಘು,ನಕ್ಷತ್ರ ಆಟೋ ಮಾಲೀಕರ ಹಾಗೂ ಚಾಲಕರ ಸಂಘದ ಗೌರವ ಅಧ್ಯಕ್ಷ ತಿಮ್ಮಪ್ಪ ,ನಕ್ಷತ್ರ ಆಟೋ ಮಾಲೀಕರ ಹಾಗೂ ಚಾಲಕರ ಸಂಘದ ಪ್ರಧಾನ ಕಾರ್ಯದರ್ಶಿ ಟಿ.ಕೆ.ಚಂದ್ರ, ಕಾರ್ಯದರ್ಶಿ ಎಚ್.ಎಸ್.ಸತೀಶ್ ಸದಸ್ಯರ ಹಾಗೂ ಇನ್ನಿತರರು ಪಾಲ್ಗೊಂಡಿದ್ದರು.
ಸನ್ಮಾನ :: ಕಾರ್ಯಕ್ರಮದಲ್ಲಿ ಸಂಘದ ವತಿಯಿಂದ ಹಿರಿಯ ಚಾಲಕರಾದ ವೇಣುಗೋಪಾಲ್ , ಬಿ.ಆರ್.ಗಣೇಶ್, ಚೆಟ್ಟಿಮಾಡ ದಿವಿ, ಭೋಜಣ್ಣ , ಅಂಥೋನಿ, ರಘುಪತಿ ಮತ್ತು ದ್ವಿತೀಯ ಪಿಯುಸಿ ಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ಸಂಘದ ಸದಸ್ಯ ಸುಬಾನ್ ಅವರ ಪುತ್ರಿ ಎಂ.ಎ.ಇನ್ಷ, ದೇರಜೆ ಸತೀಶ್ ಅವರ ಮಗಳಾದ ಭವಿತ ಅವರನ್ನು ಸಂಘದ ವತಿಯಿಂದ ಸನ್ಮಾನಿಸಲಾಯಿತು.
ಸಂಘದ ಪುರುಷ ಸದಸ್ಯರಿಗೆ ಕ್ರಿಕೆಟ್ ಪಂದ್ಯಾವಳಿ, ಹಗ್ಗ ಜಗ್ಗಾಟ ಮತ್ತು ಮಹಿಳೆಯರಿಗೆ ನಿಂಬೆಹಣ್ಣಿನ ಓಟ, ಇನ್ನಿತರ ಆಟೋ ಮತ್ತು ಮಕ್ಕಳಿಗೆ ವಿವಿಧ ಬಗ್ಗೆ ಆಟೋಟ ನಡೆಯಿತು.
ಕ್ರೀಡಾ ವಿಜೇತರು :: ಕ್ರಿಕೆಟ್ ಪಂದ್ಯದಲ್ಲಿ ಖಜಾಂಚಿ 9, ತಂಡ ಪ್ರಥಮ ಸ್ಥಾನವನ್ನು ಅಧ್ಯಕ್ಷ 9 ತಂಡ ದ್ವಿತೀಯ ಸ್ಥಾನವನ್ನು ಗಳಿಸಿತು. ಮಹಿಳೆಯರ ಹಗ್ಗ ಜಗ್ಗಾಟ ಸ್ಪರ್ಧೆಯಲ್ಲಿ ಅನಿತಾ ಮತ್ತು ತಂಡದವರು ಪ್ರಥಮ ಸ್ಥಾನ ಗಳಿಸಿದರು. ಶೋಭ ಮತ್ತು ತಂಡದವರು ದ್ವಿತೀಯ ಸ್ಥಾನ ಗಳಿಸಿದರು.
ವರದಿ : ದುಗ್ಗಳ ಸದಾನಂದ.








