ಮಡಿಕೇರಿ ಫೆ.26 NEWS DESK : ಮಂಜಿನ ನಗರಿ ಮಡಿಕೇರಿಯಲ್ಲಿ ಬಿಸಿಲಿನ ಕಾವು ಏರುತ್ತಲೇ ಇದೆ. ಇದರ ಪರಿಣಾಮ ನಗರದ ಕೆಲವು ಪ್ರದೇಶಗಳಲ್ಲಿ ಕಾಡ್ಗಿಚ್ಚು ಕಾಣಿಸಿಕೊಳ್ಳತೊಡಗಿದೆ.
ಇಂದು ಮಡಿಕೇರಿ ನಗರದ ಈದ್ಗಾ ಮೈದಾನದಲ್ಲಿ ಸುಮಾರು ಮೂರು ಎಕರೆ ಪ್ರದೇಶದಲ್ಲಿ ಎರಡು ಬಾರಿ ಬೆಂಕಿ ಕಾಣಿಸಿಕೊಂಡಿತು. ಸ್ಥಳಕ್ಕೆ ಬಂದ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಅಗ್ನಿಯನ್ನು ನಿಯಂತ್ರಿಸಿದರು. ಇತ್ತೀಚೆಗೆ ಜಿಲ್ಲೆಯ ವಿವಿಧೆಡೆ ಅರಣ್ಯ ಮತ್ತು ಕಾಫಿ ತೋಟಗಳಲ್ಲಿ ಕಾಡ್ಗಿಚ್ಚು ಕಾಣಿಸಿಕೊಳ್ಳುತ್ತಿದ್ದು, ಆತಂಕ ಮೂಡಿದೆ. ಸಾರ್ವಜನಿಕರು ಅರಣ್ಯ ಇಲಾಖೆ ಮತ್ತು ಅಗ್ನಿ ಶಾಮಕ ದಳದೊಂದಿಗೆ ಸಹಕರಿಸಬೇಕೆಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.









