ಸುಂಟಿಕೊಪ್ಪ ಮಾ.4 NEWS DESK : ಪನ್ಯ ಗ್ರಾಮದ ಉದ್ಧಿಬಾಣೆ ಮಠದಲ್ಲಿ ಶ್ರದ್ಧಾಭಕ್ತಿಯಿಂದ ಧರ್ಮ ದೈವಗಳ ನೇಮೋತ್ಸವ ನಡೆಯಿತು.
ಎರಡುದಿನಗಳ ಕಾಲ ವಿವಿಧ ಧಾರ್ಮಿಕ ಪೂಜಾ ವಿಧಿವಿಧಾನಗಳೊಂದಿಗೆ ಜರುಗಿತು.
ಗಣ ಹೋಮ ಮತ್ತು ಸತ್ಯ ನಾರಾಯಣ ಪೂಜೆಯು ನಡೆದು ನೇಮ ಮತ್ತು ದೇವತಾ ಕಾರ್ಯಕ್ಕೆ ವಿಘ್ನ ಬಾರದಂತೆ ಪ್ರಾರ್ಥನೆ ಸಲ್ಲಿಸಲಾಯಿತು.
ರಾತ್ರಿ ಬಂಡಾರ ತೆಗೆಯುವ ಮೂಲಕ ನೇಮೋತ್ಸವಕ್ಕೆ ಚಾಲನೆ ದೊರಕಿತು. ನಂತರ ಕಲ್ಲುರ್ಟಿ ದೈವದ ನೇಮೋತ್ಸವ ಜರುಗಿತು.
ಮುಂಜಾನೆಯಿಂದ ಪಂಜುರ್ಲಿ ಮತ್ತು ಗುಳಿಗ ದೈವದ ನೇಮವು ನಡೆಯಿತು.
ನಂತರ ಕಾರಣಿಕ ದೈವ ಎನಿಸಿದ ಕೊರಗಜ್ಹ ದೈವದ ನೇಮವು ನಡೆಯಿತು. ದೇವಾಲಯ ಸೇರಿದಂತೆ ಭಕ್ತರ ಹರಕೆಯ ಒಟ್ಟು 4 ಕೊರಗಜ್ಹ ದೈವದ ನೇಮವು ನಡೆಯಿತು. ಮಕ್ಕಳ ಜೋತೆ ಕುಣಿದು ಹಾಸ್ಯ ಮಾಡುತ್ತಾ ಎಲ್ಲರನ್ನು ಸಂತೃಪ್ತಿ ಪಡಿಸಿತು.
ನೆರೆದಿದ್ದ ಭಕ್ತರಿಗೆ ಎರಡು ದಿನ ಅನ್ನ ಸಂತರ್ಪಣೆ ನೆರವೇರಿತು.
ಸುಂಟಿಕೊಪ್ಪ, ಕುಶಾಲನಗರ, ಮಡಿಕೇರಿ, ಪನ್ಯ, ಗರಗಂದೂರು, ಮಾದಾಪುರ, ಸುಳ್ಯ, ಪುತ್ತೂರು, ಮಂಗಳೂರು, ಮೈಸೂರು ಸೇರಿದಂತೆ ಹಲವು ಕಡೆಗಳಿಂದ ಆಗಮಸಿದ್ದ ಭಕ್ತರು ದೈವದಲ್ಲಿ ಬೇಡಿಕೆ ಮತ್ತು ಹರಕೆ ಅರ್ಪಿಸಿದರು.
ಮುಖ್ಯಸ್ಥರಾದ ಮೋಣಪ್ಪ ಪೂಜಾರಿ, ಜಿನ್ನಪ್ಪ ಪೂಜಾರಿ, ಸಂಗೀತ ಮಣಿಮುಖೇಶ್, ವೆಂಕಪ್ಪ ಮೈಸೂರು, ಶಾಂತು ಸುಳ್ಯ, ಜಗದೀಶ್ ಸುಳ್ಯ, ರುಕ್ಮಯ್ಯ, ಬೇಬಿ, ಬಿ.ಟಿ.ರಮೇಶ್, ಶೇಖರ್, ದೇವಪ್ಪ ಸೇರಿದಂತೆ ಇತರರು ಇದ್ದರು.









