ಮಡಿಕೇರಿ ಮಾ.7 NEWS DESK : ಭಾರತೀಯ ಜನತಾ ಪಾರ್ಟಿಯ ಸೋಮವಾರಪೇಟೆ ರೈತ ಮೋರ್ಚಾದ ಅಧ್ಯಕ್ಷರಾಗಿ ಮಚ್ಚಂಡ ಪ್ರಕಾಶ್ ಆಯ್ಕೆಯಾಗಿದ್ದಾರೆ.
ಪಕ್ಷದ ಮುಂದಿನ ಸಂಘಟನಾತ್ಮಕ ಚಟುವಟಿಕೆಗಳನ್ನು ಮುಂದುವರೆಸುವ ದೃಷ್ಟಿಯಿಂದ ಜಿಲ್ಲಾಧ್ಯಕ್ಷ ನಾಪಂಡ ರವಿ ಕಾಳಪ್ಪ ಅವರ ಅನುಮೋದನೆ ಮೇರೆಗೆ ಪ್ರಕಾಶ್ ಅವರನ್ನು ನೇಮಕ ಮಾಡಲಾಗಿದೆ ಎಂದು ಬಿಜೆಪಿಯ ಸೋಮವಾರಪೇಟೆ ಮಂಡಲದ ಅಧ್ಯಕ್ಷ ಗೌತಮ್ ಗೌಡ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.









