Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*
  • *ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*
  • *ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*
  • *ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *
  • *ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*
  • *ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*
  • *ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*
  • *ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*
  • *ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*
  • *ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»ರಾಜ್ಯದಲ್ಲಿ ರೂ. 17,836 ಕೋಟಿ ಮೊತ್ತದ ಬಂಡವಾಳ ಹೂಡಿಕೆ: 27,067 ಹೊಸ ಉದ್ಯೋಗ ಸೃಷ್ಟಿ: ಮುಖ್ಯಮಂತ್ರಿ ಸಿದ್ದರಾಮಯ್ಯ*
ಇತ್ತೀಚಿನ ಸುದ್ದಿಗಳು ಕರ್ನಾಟಕ

ರಾಜ್ಯದಲ್ಲಿ ರೂ. 17,836 ಕೋಟಿ ಮೊತ್ತದ ಬಂಡವಾಳ ಹೂಡಿಕೆ: 27,067 ಹೊಸ ಉದ್ಯೋಗ ಸೃಷ್ಟಿ: ಮುಖ್ಯಮಂತ್ರಿ ಸಿದ್ದರಾಮಯ್ಯ*

ಮಾರ್ಚ್ 8, 20243 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಬೆಂಗಳೂರು ಮಾ.8 NEWS DESK : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ  ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿಯ (ಎಸ್‌ಎಚ್‌ಎಲ್‌ಸಿಸಿ) 63ನೇ ಸಭೆಯಲ್ಲಿ, ರಾಜ್ಯದಾದ್ಯಂತ 27,067 ಉದ್ಯೋಗಗಳನ್ನು ಸೃಷ್ಟಿಸುವ ರೂ. 17835.9 ಕೋಟಿ ಮೊತ್ತದ ಯೋಜನೆಗಳಿಗೆ ಅನುಮೋದನೆ ದೊರೆತಿದ್ದು, ಇದರಲ್ಲಿ ರೂ. 8220.05 ಕೋಟಿ ಮೊತ್ತದ 6 ಹೊಸ ಯೋಜನೆಗಳು ಮತ್ತು ರೂ. 9,615.85 ಕೋಟಿ ಮೊತ್ತದ ಹೆಚ್ಚುವರಿ ಬಂಡವಾಳ ಹೂಡಿಕೆಯ 8 ಯೋಜನೆಗಳು ಇವೆ.

ʼಉತ್ತರ ಕರ್ನಾಟಕದ ವಿಜಯಪುರ, ಕಲಬುರಗಿ, ಬಳ್ಳಾರಿ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಹೊಸ ಹೂಡಿಕೆ ಮತ್ತು ಹೆಚ್ಚುವರಿ ಬಂಡವಾಳ ಹೂಡಿಕೆಯ 8 ಯೋಜನೆಗಳಿಗೆ ದೊರೆತಿರುವ ಅನುಮತಿಗಳಿಂದ ಈ ಜಿಲ್ಲೆಗಳಲ್ಲಿ ಒಟ್ಟಾರೆ ರೂ. 10,433.72 ಕೋಟಿ ಮೊತ್ತದ ಬಂಡವಾಳ ಹೂಡಿಕೆ ಆಗಲಿದೆʼ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

‘ವಿಸ್ಟ್ರಾನ್ ಇನ್ಫೊಕಾಂ ಮ್ಯಾನುಫ್ಯಾಕ್ಚರಿಂಗ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕೋಲಾರ ಜಿಲ್ಲೆಯ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ₹ 2095 ಕೋಟಿ ವೆಚ್ಚದಲ್ಲಿ ಸ್ಮಾರ್ಟ್‌ಫೋನ್‌ ತಯಾರಿಕಾ ಘಟಕ ಆರಂಭಿಸಲಿದೆ. ಇದರಿಂದ 21723 ಜನರಿಗೆ ಉದ್ಯೋಗಗಳು ದೊರೆಯಲಿವೆʼ ಎಂದು ಅವರು ಮಾಹಿತಿ ನೀಡಿದ್ದಾರೆ.

ಸಭೆಯಲ್ಲಿ ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲ, ಐಟಿ/ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ.ರಜನೀಶ್ ಗೋಯಲ್, ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯೂ ಆಗಿರುವ ಹಣಕಾಸು ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿ ಎಲ್.ಕೆ.ಅತೀಕ್ ಅವರು ಉಪಸ್ಥಿತರಿದ್ದರು.

ಹೊಸ ಬಂಡವಾಳ ಹೂಡಿಕೆ ಪ್ರಸ್ತಾವನೆಗಳು : ರಾಜ್ಯದಲ್ಲಿ ಹೊಸದಾಗಿ ಬಂಡವಾಳ ಹೂಡಿಕೆ ಮಾಡಲಿರುವ ಒಟ್ಟು 6 ಕಂಪನಿಗಳಾದ – ಎಸ್‍ಟಿಟಿ ಗ್ಲೋಬಲ್ ಡೇಟಾ ಸೆಂಟರ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್, ಇಂಡಿಯನ್ ಕೇನ್ ಪವರ್ ಲಿಮಿಟೆಡ್, ಐ.ಸಿ.ಟಿ ಸರ್ವಿಸ್ ಮ್ಯಾನೇಜ್‌ಮೆಂಟ್‌ ಸೊಲ್ಯೂಷನ್ಸ್ (ಇಂಡಿಯಾ) ಪ್ರೈವೇಟ್ ಲಿಮಿಟೆಡ್, ಶ್ರೀ ಬಾಲಾಜಿ ಷುಗರ್ಸ್ ಮತ್ತು ಕೆಮಿಕಲ್ಸ್ ಪ್ರೈವೇಟ್ ಲಿಮಿಟೆಡ್ ಮತ್ತು ಏರ್ ಇಂಡಿಯಾ ಲಿಮಿಟೆಡ್‌ನ ಒಟ್ಟು ರೂ. 8220.05 ಕೋಟಿ ಮೊತ್ತದ ಬಂಡವಾಳ ಹೂಡಿಕೆಗಳಿಗೆ ಸಮಿತಿಯು ಒಪ್ಪಿಗೆ ನೀಡಿದೆ. ಈ ಹೊಸ ಯೋಜನೆಗಳಿಂದ ರಾಜ್ಯದಲ್ಲಿ ಒಟ್ಟು 27,067
ಹೊಸ ಉದ್ಯೋಗ ಅವಕಾಶಗಳು ಸೃಷ್ಟಿಯಾಗಲಿವೆ.

ಹೆಚ್ಚುವರಿ ಹೂಡಿಕೆ ಪ್ರಸ್ತಾವನೆಗಳು : ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ಕಂಪನಿಗಳ ಸಾಮರ್ಥ್ಯ ವಿಸ್ತರಣೆ ಉದ್ದೇಶದ ಹೆಚ್ಚುವರಿ ಹೂಡಿಕೆಯ 8 ಪ್ರಸ್ತಾವನೆಗಳಿಗೂ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.

ಬಂಡವಾಳ ಹೂಡಿಕೆ ಹೆಚ್ಚಳದ ಪ್ರಸ್ತಾವನೆಗಳಲ್ಲಿ – ಅಲ್ಟ್ರಾಟೆಕ್ ಸಿಮೆಂಟ್ ಲಿಮಿಟೆಡ್, ಆರ್‌ಬಿಎಸ್‌ಎಸ್‌ಎನ್‌ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್, ಎಂವಿ ಎನರ್ಜಿ ಪ್ರೈವೇಟ್ ಲಿಮಿಟೆಡ್ (ಈ ಹಿಂದಿನ ಎಂವೆ ಫೋಟೊ ವೋಲ್ಟಾಯಿಕ್ ಪವರ್ ಪ್ರೈವೇಟ್ ಲಿಮಿಟೆಡ್), ಇಂಡಿಯನ್ ಕೇನ್ ಪವರ್ ಲಿಮಿಟೆಡ್ (ಅಳಗವಾಡಿ ಬೀರೇಶ್ವರ ಷುಗರ್ಸ್ ಘಟಕ ), ಗ್ರೀನ್ಕೊ ಕೆಎ01 ಐಆರ್‍ಇಪಿ ಪ್ರೈವೇಟ್ ಲಿಮಿಟೆಡ್ (ಈ ಹಿಂದಿನ ಗ್ರೀನ್ಕೊ ಸೋಲಾರ್ ಎನರ್ಜಿ ಪ್ರೈವೇಟ್ ಲಿಮಿಟೆಡ್), ಅಥಣಿ ಷುಗರ್ಸ್ ಲಿಮಿಟೆಡ್, ಉಕೆಮ್ ಅಗ್ರಿ ಇನ್‌ಫ್ರಾ ಲಿಮಿಟೆಡ್ ಮತ್ತು ಸ್ನೈಡರ್ ಎಲೆಕ್ಟ್ರಿಕ್ ಐಟಿ ಬಿಸಿನೆಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸೇರಿವೆ. ಇವುಗಳ ಹೆಚ್ಚುವರಿ ಹೂಡಿಕೆಯ ಮೊತ್ತವು ರೂ. 9,615.85 ಕೋಟಿಗಳಷ್ಟಿದೆ.

ಅಭಿವೃದ್ಧಿ ಆಯುಕ್ತೆ ಶ್ರೀಮತಿ ಡಾ.ಶಾಲಿನಿ ರಜನೀಶ್, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಎಸ್.ಸೆಲ್ವಕುಮಾರ್, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಆಯುಕ್ತರಾದ ಶ್ರೀಮತಿ ಗುಂಜನ್ ಕೃಷ್ಣ ಹಾಗೂ ವಿವಿಧ ಇಲಾಖೆಗಳ ಉನ್ನತ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಹೊಸ ಬಂಡವಾಳ ಹೂಡಿಕೆಯ ಪ್ರಸ್ತಾವನೆಗಳ ವಿವರ :: 
ಕ್ರಮ ಸಂಖ್ಯೆ ಕಂಪನಿ ಹೆಸರು ವಿವರ ಹೂಡಿಕೆ
( ರೂ. ಕೋಟಿಗಳಲ್ಲಿ) ಉದ್ಯೋಗ ಅವಕಾಶಗಳು
1. ಎಸ್‍ಟಿಟಿ ಗ್ಲೋಬಲ್ ಡೇಟಾ ಸೆಂಟರ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಬೆಂಗಳೂರು ಗ್ರಾಮಾಂತರ ಜಿಲ್ಲೆ- ದೇವನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಡೇಟಾ ಸೆಂಟರ್‌ 1352.3 250
2. ವಿಸ್ಟ್ರಾನ್ ಇನ್ಫೊಕಾಂ ಮ್ಯಾನುಫ್ಯಾಕ್ಚರಿಂಗ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕೋಲಾರ ಜಿಲ್ಲೆ- ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಸ್ಮಾರ್ಟ್‌ಫೋನ್‌ ತಯಾರಿಕಾ ಘಟಕ 2095 21723

3. ಇಂಡಿಯನ್ ಕೇನ್ ಪವರ್ ಲಿಮಿಟೆಡ್ ವಿಜಯಪುರ ಜಿಲ್ಲೆ- ಕಂಬಾಗಿ ಹಾಗೂ ಶೇಗುಣಶಿ ಗ್ರಾಮಗಳ ವ್ಯಾಪ್ತಿಯಲ್ಲಿ ಸಕ್ಕರೆ ಕಾರ್ಖಾನೆ 1078 309

4. ಐ.ಸಿ.ಟಿ ಸರ್ವಿಸ್ ಮ್ಯಾನೇಜ್‌ಮೆಂಟ್‌ ಸೊಲ್ಯೂಷನ್ಸ್ (ಇಂಡಿಯಾ) ಪ್ರೈವೇಟ್ ಲಿಮಿಟೆಡ್ ಬೆಂಗಳೂರು ಗ್ರಾಮಾಂತರ ಜಿಲ್ಲೆ- ರಕ್ಷಣಾ ಹಾಗೂ ವೈಮಾಂತರಿಕ್ಷ ಪಾರ್ಕ್‌. ಲ್ಯಾಪ್‌ಟಾಪ್‌ ಹಾಗೂ ಎಲೆಕ್ಟ್ರಾನಿಕ್‌ ಉಪಕರಣಗಳ ತಯಾರಿಕಾ ಘಟಕ 1450 2500
5. ಶ್ರೀ ಬಾಲಾಜಿ ಷುಗರ್ಸ್ ಮತ್ತು ಕೆಮಿಕಲ್ಸ್ ಪ್ರೈವೇಟ್ ಲಿಮಿಟೆಡ್ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ಯರಗಲ್‌. ಸಕ್ಕರೆ ಕಾರ್ಖಾನೆಯ ಸಾಮರ್ಥ್ಯ ವೃದ್ಧಿ 494.75 1085
6. ಏರ್ ಇಂಡಿಯಾ ಲಿಮಿಟೆಡ್ ಬೆಂಗಳೂರು ಗ್ರಾಮಾಂತರ ಜಿಲ್ಲೆ- ವಿಮಾನಗಳ ನಿರ್ವಹಣೆ ಹಾಗೂ ದುರಸ್ತಿ ಘಟಕ 1750 1200

ಹೆಚ್ಚುವರಿ ಬಂಡವಾಳ ಹೂಡಿಕೆ ಪ್ರಸ್ತಾವನೆಗಳು :: 

ಕ್ರಮ ಸಂಖ್ಯೆ ಕಂಪನಿ ಹೆಸರು ಸ್ಥಳ ಹೂಡಿಕೆ
( ರೂ.ಕೋಟಿ )
1. ಅಲ್ಟ್ರಾಟೆಕ್ ಸಿಮೆಂಟ್ ಲಿಮಿಟೆಡ್
ಕಲಬುರಗಿ ಜಿಲ್ಲೆಯಲ್ಲಿ ಗಣಿಗಾರಿಕೆ 490.38

2. ಆರ್‌ಬಿಎಸ್‌ಎಸ್‌ಎನ್‌ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್.
ಬಳ್ಳಾರಿ ಜಿಲ್ಲೆಯಲ್ಲಿ 130 ಮೆಗಾವಾಟ್‌ ವಿದ್ಯುತ್‌ ಘಟಕ 1620.80
3. ಎಂವಿ ಎನರ್ಜಿ ಪ್ರೈವೇಟ್ ಲಿಮಿಟೆಡ್ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಸೌರಫಲಕಗಳ ತಯಾರಿಕಾ ಘಟಕ 676.28

4. ಇಂಡಿಯನ್ ಕೇನ್ ಪವರ್ ಲಿಮಿಟೆಡ್ ಬೆಳಗಾವಿ ಜಿಲ್ಲೆ. ಅಳಗವಾಡಿ ಬೀರೇಶ್ವರ ಷುಗರ್ಸ್ ಸಕ್ಕರೆ ಕಾರ್ಖಾನೆಯ ಸಾಮರ್ಥ್ಯ ವೃದ್ಧಿ 492.29
5. ಗ್ರೀನ್ಕೊ ಕೆಎ01 ಐಆರ್‍ಇಪಿ ಪ್ರೈವೇಟ್ ಲಿಮಿಟೆಡ್ ಬೆಳಗಾವಿ ಜಿಲ್ಲೆ – ಜಲ ಸಂಗ್ರಹಾಗಾರದ (ಪಂಪ್ಡ್‌ ಸ್ಟೋರೇಜ್‌) ಸಾಮರ್ಥ್ಯ ವೃದ್ಧಿ 5948.06

6. ಅಥಣಿ ಷುಗರ್ಸ್ ಲಿಮಿಟೆಡ್ ಬೆಳಗಾವಿ ಜಿಲ್ಲೆ- ಡಿಸ್ಟಿಲರಿ ಘಟಕದ ವಿಸ್ತರಣೆ 205.89

7. ಉಕೆಮ್ ಅಗ್ರಿ ಇನ್ಫ್ರಾ ಲಿಮಿಟೆಡ್ ಕೊಪ್ಪಳ ಜಿಲ್ಲೆ- ಸಕ್ಕರೆ ಕಾರ್ಖಾನೆಯ ಸಾಮರ್ಥ್ಯ ಹೆಚ್ಚಳ 103.55

8. ಸ್ನೈಡರ್ ಇಲೆಕ್ಟ್ರಿಕ್ ಐಟಿ ಬಿಸಿನೆಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಬೆಂಗಳೂರು ನಗರ ಜಿಲ್ಲೆ. ಎಲೆಕ್ಟ್ರಾನಿಕ್‌ ಪರಿಕರಗಳ ತಯಾರಿಕಾ ಘಟಕ 78.60

ಅನುಮೋದನೆ ಪಡೆದ ಒಟ್ಟಾರೆ ಹೂಡಿಕೆ ಹಾಗೂ ಉದ್ಯೋಗ ಅವಕಾಶಗಳ ವಿವರ :: 

ಕ್ರಮ ಸಂಖ್ಯೆ ಹೆಸರು ಯೋಜನೆಗಳ ಸಂಖ್ಯೆ ಹೂಡಿಕೆ( ರೂ.ಕೋಟಿ) ಉದ್ಯೋಗ
1. ಹೊಸ / ವಿಸ್ತರಣಾ ಯೋಜನೆಗಳು 6 8220.05 27,067
2. ಹೆಚ್ಚುವರಿ ಬಂಡವಳ ಹೂಡಿಕೆಯ ಯೋಜನೆಗಳು (ತಿದ್ದುಪಡಿ) 8 9615.85
ಒಟ್ಟು 14 17835.92 27,067

 

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ.24 : ನಾಪೋಕ್ಲುವಿನ ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆ ನಾಪೋಕ್ಲು, ರೋಟರಿ ಮಿಸ್ಟಿ ಹಿಲ್ಸ್…

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *

ಆಗಷ್ಟ್ 24, 2026

*ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*

ಆಗಷ್ಟ್ 24, 2026

*ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*

ಆಗಷ್ಟ್ 24, 2026

*ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 24, 2026

*ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 24, 2026

*ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*

ಆಗಷ್ಟ್ 24, 2026

*ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*

ಆಗಷ್ಟ್ 24, 2026

*ಮಳೆಗಾಗಿ ಸಚಿವರಿಂದ ವಿಶೇಷ ಪೂಜೆ*

ಆಗಷ್ಟ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.