Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*
  • *ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*
  • *ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*
  • *ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *
  • *ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*
  • *ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*
  • *ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*
  • *ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*
  • *ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*
  • *ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ದಸಂಸಯಿಂದ ಸನ್ಮಾನ : ಪ್ರಜಾಪ್ರಭುತ್ವದ ಮೌಲ್ಯವರ್ಧನೆಗೆ ಸಂವಿಧಾನ ಸೂಕ್ತ ಅಡಿಪಾಯ : ಡಾ.ನವೀನ್ ಕುಮಾರ್ ಅಭಿಮತ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ದಸಂಸಯಿಂದ ಸನ್ಮಾನ : ಪ್ರಜಾಪ್ರಭುತ್ವದ ಮೌಲ್ಯವರ್ಧನೆಗೆ ಸಂವಿಧಾನ ಸೂಕ್ತ ಅಡಿಪಾಯ : ಡಾ.ನವೀನ್ ಕುಮಾರ್ ಅಭಿಮತ*

ಮಾರ್ಚ್ 13, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಮಾ.13 NEWS DESK  : ದೇಶದ ಒಕ್ಕೂಟ ವ್ಯವಸ್ಥೆಗೆ, ಬಲವರ್ಧನೆಗೆ ಮತ್ತು ಪ್ರಜಾಪ್ರಭುತ್ವದ ಮೌಲ್ಯವರ್ಧನೆಗೆ ಶ್ರೇಷ್ಠ ಸಂವಿಧಾನ ಸೂಕ್ತ ಅಡಿಪಾಯ ಹಾಕಿಕೊಟ್ಟಿದೆ ಎಂದು ಮಡಿಕೇರಿಯ ಆರ್.ಆರ್.ಆಸ್ಪತ್ರೆಯ ಖ್ಯಾತ ಮಕ್ಕಳ ತಜ್ಞ ಡಾ.ಬಿ.ಸಿ.ನವೀನ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ.
ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಕೊಡಗು ಜಿಲ್ಲಾ ಘಟಕದ ವತಿಯಿಂದ ನಗರದ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ನಡೆದ ಭಾರತದ ಸಂವಿಧಾನದ ಬಗ್ಗೆ ವಿಚಾರ ಮಂಡನೆ ಹಾಗೂ 2022-23ನೇ ಸಾಲಿನಲ್ಲಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಅತಿ ಹೆಚ್ಚು ಫಲಿತಾಂಶ ಬರಲು ಕಾರಣಕರ್ತರಾದ ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರಿಗೆ ಹಾಗೂ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ, ಸಂವಿಧಾನದ ಆಶಯಗಳ ಕುರಿತು ವಿಚಾರ ಮಂಡನೆ ಮಾಡಿದರು.
ಸಂವಿಧಾನ ಎನ್ನುವುದು ದೇಶದ ಜೀವ ಸಂಕುಲಗಳನ್ನು ರಕ್ಷಿಸಿ ಉತ್ತಮವಾದ ಬದುಕು ಕಟ್ಟಿಕೊಡುವ ಆಡಳಿತಾತ್ಮಕ ಕಾನೂನು. ಪ್ರಜಾತಂತ್ರ ವ್ಯವಸ್ಥೆಯಲ್ಲಿ ಎಲ್ಲರಿಗೂ ಸಲ್ಲುವ ಹಕ್ಕು ಮತ್ತು ಕರ್ತವ್ಯವನ್ನು ಅಳವಡಿಸುವ ಮೂಲಕ ಜವಾಬ್ದಾರಿಯುತ ಭಾರತವನ್ನು ನಿರ್ಮಿಸಿ ಕೊಡುವಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಕೊಡುಗೆ ಅಪಾರ ಎಂದು ಶ್ಲಾಘಿಸಿದರು.
ಸಂವಿಧಾನ ರಚನಾ ಸಭೆ ಅಧ್ಯಕ್ಷರಾಗಿ ಎಲ್ಲರಿಗೂ ಸಮಾನ ನ್ಯಾಯವನ್ನು ಒದಗಿಸಿಕೊಟ್ಟ ಅಂಬೇಡ್ಕರ್ ಅವರು ಕಾನೂನಿನ ಎದುರು ಸರ್ವರು ಸಮಾನರು ಎಂಬುವುದನ್ನು ಪ್ರತಿಪಾದಿಸಿದ್ದಾರೆ. ಅಲ್ಲದೇ ಅನ್ಯಾಯಕ್ಕೆ ಒಳಗಾದವರನ್ನು ವಿಶೇಷ ಕಾನೂನಿನ ಮೂಲಕ ಸಮಾಜದಲ್ಲಿ ಉತ್ತಮ ರೀತಿಯಲ್ಲಿ ಬದುಕಲು ಪ್ರೇರೆಪಿಸಿದ್ದಾರೆ. ಅವರ ವಿಚಾರಧಾರೆಗಳು ಎಲ್ಲರಿಗೂ ಮಾದರಿಯಾಗಬೇಕು ಎಂದರು.
ಸಂವಿಧಾನ ಎನ್ನುವುದು ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಮಾತ್ರ ಸೀಮಿತವಾಗಿಲ್ಲ, ಅದನ್ನು ಎಲ್ಲರೂ ಅರಿತುಕೊಳ್ಳುವ ಅಗತ್ಯವಿದೆ. ಆ ಮೂಲಕ ಅವರನ್ನು ಸದಾ ಸ್ಮರಣೆ ಮಾಡುವಂತಾಗಬೇಕು ಎಂದು ತಿಳಿಸಿದರು.
ಸಮಾಜಮುಖಿಯಾಗಿ ಕೆಲಸ ಮಾಡುವವರನ್ನು ಸಮಾಜ ಯಾವಾಗಲು ನೆನಪಿನಲ್ಲಿಟ್ಟುಕೊಳ್ಳುತ್ತದೆ. ದೇಶ ರಕ್ಷಣೆ ವಿಚಾರ ಬಂದಾಗ ವಿದ್ಯಾರ್ಥಿಗಳು ಸದಾ ಮುಂದಿರಬೇಕು. ಭಾರತದ ಪರಂಪರೆಯನ್ನು ಉಳಿಸಿಕೊಳ್ಳುವ ಮೂಲಕ ಉತ್ತಮ ಸಮಾಜವನ್ನು ನಿರ್ಮಾಣ ಮಾಡಬೇಕು ಮತ್ತು ಸಮಾಜಮುಖಿಯಾಗಿ ಬದುಕಬೇಕು. ಪ್ರಕೃತಿ ಉಳಿಸಿ ಬೆಳೆಸಬೇಕು, ನೀರಿನ ಮಹತ್ವವನ್ನು ಅರಿತು ಬದುಕುವುದು ನಮ್ಮ ಕರ್ತವ್ಯವಾಗಿದೆ ಎಂದು ಡಾ.ನವೀನ್ ಕುಮಾರ್ ಹೇಳಿದರು.
ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಹೆಚ್.ಎಲ್.ದಿವಾಕರ್, ಮಾತನಾಡಿ ಶಿಕ್ಷಣದ ಪ್ರಗತಿ ಭಾರತ ರತ್ನ ಡಾ.ಬಿ.ಆರ್.ಅಬೇಂಡ್ಕರ್ ಅವರ ಕನಸಿನ ರೂಪವಾಗಿದೆ. ಬಡತನದಲ್ಲಿದ್ದರೂ ಶಿಕ್ಷಣಕ್ಕೆ ಒತ್ತು ನೀಡುವ ಮೂಲಕ ಸಮಾಜದಲ್ಲಿ ಎಲ್ಲರಿಗೂ ಸಮಾನವಾದ ಹಕ್ಕುಗಳನ್ನು ನೀಡಿದ್ದಾರೆ ಎಂದರು.
ದಲಿತರ ಮೇಲಿನ ದೌರ್ಜನ್ಯವನ್ನು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ದಲಿತ ಸಂಘರ್ಷ ಸಮಿತಿಯನ್ನು ರಚನೆ ಮಾಡಲಾಗಿದೆ. ಶಿಕ್ಷಣದಿಂದ ಮಾತ್ರ ಸಮಾಜದ ಬದಲಾವಣೆ ಸಾಧ್ಯ ಎಂಬ ನಿಟ್ಟಿನಲ್ಲಿ ಸಂಘಟನೆಯ ಮೂಲಕ ಕಳೆದ 10 ವರ್ಷಗಳಿಂದ ಶಿಕ್ಷಕರನ್ನು ಹಾಗೂ ವಿದ್ಯಾರ್ಥಿಗಳನ್ನು ಸನ್ಮಾನಿಸುವ ಕಾರ್ಯಕ್ರಮ ನಡೆಯುತ್ತಿದೆ. ಇದು ವಿದ್ಯಾರ್ಥಿಗಳಲ್ಲಿ ಹೊಸ ಸ್ಫೂರ್ತಿಯನ್ನು ತುಂಬಿ ಹೆಚ್ಚಿನ ಫಲಿತಾಂಶಕ್ಕೆ ಪ್ರೇರಣೆ ನೀಡುತ್ತಿದೆ ಎಂದು ಅಭಿಪ್ರಾಯಪಟ್ಟರು.
ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಸಾಧನೆಯ ನಂತರ ಉನ್ನತ ಸ್ಥಾನಗಳಲ್ಲಿ ಗುರುತಿಸಿಕೊಳ್ಳುವಂತಾಗಬೇಕು ಮತ್ತು ಶಿಕ್ಷಕರನ್ನು ಗೌರವಿಸುವ ಗುಣವನ್ನು ಬೆಳೆಸಿಕೊಳ್ಳಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲ ಡಿ.ಜೆ.ಜವರಪ್ಪ, ದಲಿತ ಸಂಘರ್ಷ ಸಮಿತಿ ಶಿಕ್ಷಕರನ್ನು ಹಾಗೂ ವಿದ್ಯಾರ್ಥಿಗಳನ್ನು ಉತ್ತೇಜಿಸುವ ಕಾರ್ಯವನ್ನು ಮಾಡುತ್ತಿದೆ. ಸಂಘಟನೆಯ ಸಾಮಾಜಿಕ ಚಿಂತನೆ ಮತ್ತು ಶಿಕ್ಷಣದ ಬಗ್ಗೆ ಅದಕ್ಕಿರುವ ಕಾಳಜಿ ಶ್ಲಾಘನೀಯ ಎಂದರು.
::: ಸನ್ಮಾನ :::
ಅತಿ ಹೆಚ್ಚು ಅಂಕ ಪಡೆದ ಮೂವರು ವಿದ್ಯಾರ್ಥಿನಿಯರು, ಹೆಚ್ಚು ಅಂಕ ಗಳಿಸಲು ಕಾರಣಕರ್ತರಾದ ಪ್ರಾಂಶುಪಾಲರು ಹಾಗೂ ಉಪನ್ಯಾಸಕರನ್ನು ಸನ್ಮಾನಿಸಿ ಗೌರವಿಸಲಾಯಿತು.
ವಿದ್ಯಾರ್ಥಿನಿಯರಾದ ಮೌಲ್ಯ ಹಾಗೂ ರಾಜೇಶ್ವರಿ ಪ್ರಾರ್ಥಿಸಿ, ಸಂಘಟನೆಯ ಸದಸ್ಯೆ ಹಾಗೂ ನಿವೃತ್ತ ಶಿಕ್ಷಕಿ ಪ್ರೇಮ ಕೃಷ್ಣಪ್ಪ ಸ್ವಾಗತಿಸಿದರು. ಉಪನ್ಯಾಸಕಿ ಡಾ.ಕನ್ನಿಕಾ ನಿರೂಪಿಸಿ, ನಿರ್ಮಲ ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಕೊಡಗಿನಲ್ಲಿ ಮೋಡಬಿತ್ತನೆ ಬೇಡ ಬಿಜೆಪಿ ಕೃಷಿಮೋರ್ಚಾ ಒತ್ತಾಯ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ರೋಟರಿ ನಮನ*

ಆಗಷ್ಟ್ 24, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ, NEWS DESK ಆ.24 : ನಾಪೋಕ್ಲುವಿನ ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆ ನಾಪೋಕ್ಲು, ರೋಟರಿ ಮಿಸ್ಟಿ ಹಿಲ್ಸ್…

*ಮಡಿಕೇರಿ ಬ್ರಹ್ಮಾಕುಮಾರಿ ಲೈಟ್ ಹೌಸ್ ನಲ್ಲಿ ರಕ್ತದಾನ ಶಿಬಿರ*

ಆಗಷ್ಟ್ 24, 2026

*ಎಸ್‍ಐಆರ್ ಪ್ರಕ್ರಿಯೆ, ಸೆ.23 ರ ವರೆಗೆ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಕೆಗೆ ಅವಕಾಶ : ಕರಡು ಮತದಾರರ ಪಟ್ಟಿ : ಜಿಲ್ಲೆಯಲ್ಲಿ 4,05,803 ಮಂದಿ ಮತದಾರರು : ಡಿಸಿ ಮಾಹಿತಿ *

ಆಗಷ್ಟ್ 24, 2026

*ಪೊನ್ನಾಡ್ ರೈತ ಉತ್ಪಾದಕ ಸಂಸ್ಥೆ(ಎಫ್‌ಪಿಓ)ಗೆ ಮಾರುಕಟ್ಟೆ ವಿಭಾಗದಲ್ಲಿ ರಾಜ್ಯ ಮಟ್ಟದ ಶ್ರೇಷ್ಠತಾ ಪ್ರಶಸ್ತಿ*

ಆಗಷ್ಟ್ 24, 2026

*ಪೂಂಪುಹಾರ್ ವರೆಗೆ 16ನೇ ವರ್ಷದ ಕಾವೇರಿ ಜಾಗೃತಿ ರಥಯಾತ್ರೆ : ಅ.26ರಿಂದ ತಲಕಾವೇರಿಯಿಂದ ಆರಂಭ*

ಆಗಷ್ಟ್ 24, 2026

*ಕಟ್ಟೆಮಾಡು ಸಕಾ೯ರಿ ಶಾಲೆಯಲ್ಲಿ ಹಿರಿಯ ಜೀವಿಗಳಿಗೆ ಗೌರವ ನಮನ*

ಆಗಷ್ಟ್ 24, 2026

*ಬುಡಕಟ್ಟು ಸಾಂಸ್ಕೃತಿಕ ಕಾರ್ಯಕ್ರಮ, ವೈದ್ಯಕೀಯ ತಪಾಸಣೆ ಹಾಗೂ ರಕ್ತದಾನ ಶಿಬಿರ : ಸಂಸ್ಕೃತಿ ಉಳಿಸಿ ಬೆಳೆಸುವಲ್ಲಿ ಯುವಜನರ ಪಾತ್ರ ಮಹತ್ವದ್ದು : ಶಾಸಕ ಎ.ಎಸ್.ಪೊನ್ನಣ್ಣ*

ಆಗಷ್ಟ್ 24, 2026

*ಹಿರಿಯ ಜೀವಿಗಳಿಗೆ  ಮರಗೋಡು ಸಕಾ೯ರಿ ಶಾಲೆಯಲ್ಲಿ ಗೌರವ ನಮನ*

ಆಗಷ್ಟ್ 24, 2026

*ಪಾರಾಣೆಯ ಸಕಾ೯ರಿ ಶಾಲೆಯಲ್ಲಿ ಹಿರಿಯ ನಾಗರಿಕರಿಗೆ ಗೌರವ ಸಲ್ಲಿಕೆ ; ಕನ್ನಡದಲ್ಲಿ ಓದಿಯೂ ಉತ್ತಮ ಹುದ್ದೆಗೇರಲು ಸಾಧ್ಯ – ಕೆ.ಎ.ಉಮ್ಮರ್*

ಆಗಷ್ಟ್ 24, 2026

*ಮಳೆಗಾಗಿ ಸಚಿವರಿಂದ ವಿಶೇಷ ಪೂಜೆ*

ಆಗಷ್ಟ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.