ವಿರಾಜಪೇಟೆ ಮಾ.23 NEWS DESK : ಇನ್ನರ್ ವೀಲ್ ಕ್ಲಬ್ ಆಫ್ ಮಡಿಕೇರಿ ವತಿಯಿಂದ ಜಯಪ್ರಕಾಶ್ ನಾರಾಯಣ ಸ್ಮಾರಕ ಪ್ರೌಢಶಾಲೆಯ ಕಣ್ಣಿನ ದೋಷ ಇರುವಂತ ವಿದ್ಯಾರ್ಥಿಗಳಿಗೆ ಕನ್ನಡಕಗಳನ್ನು ವಿತರಿಸಲಾಯಿತು.
ಶಾಲೆಯ ಡಾ. ಎಂ.ಎಂ.ಚಂಗಪ್ಪ ಮೆಮೋರಿಯಲ್ ಹಾಲ್ನಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಶಾಲೆಯ ಆಡಳಿತ ಮಂಡಳಿಯ ಅಧ್ಯಕ್ಷ ಡಾ. ಎಂ.ಸಿ.ಕಾರ್ಯಪ್ಪ, ವಿದ್ಯಾರ್ಥಿಗಳು ಕಣ್ಣಿನ ಹಿತದೃಷ್ಟಿಯಿಂದ ಮಿತಿಯಲ್ಲಿ ಮೊಬೈಲ್ ಬಳಕೆ ಮಾಡಬೇಕು. ಸಮತೋಲನ ಆಹಾರದ ಸೇವನೆ ಮಾಡಬೇಕು. ಪ್ರತಿದಿನ ಕಣ್ಣಿನ ಶುಚಿತ್ವದೊಂದಿಗೆ ಕಣ್ಣಿನ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಹಿತನುಡಿಗಳನ್ನು ಹೇಳಿದರು.
ಮುಖ್ಯ ಅತಿಥಿಗಳಾದ ಐಚ್ಚೆಟ್ಟಿರ ಚಿಣ್ಣಪ್ಪ ಮಾತನಾಡಿ ನಮ್ಮ ಕಣ್ಣನ್ನು ಹೇಗೆ ನಾವು ಸುರಕ್ಷಿತವಾಗಿಟ್ಟುಕೊಳ್ಳಬೇಕು ಎಂಬುದನ್ನು ವಿದ್ಯಾರ್ಥಿಗಳಿಗೆ ತಿಳಿಸಿಕೊಟ್ಟರು.
ಕ್ಷೇತ್ರ ಸಮನ್ವಯ ಅಧಿಕಾರಿಗಳಾದ ವನಜಾಕ್ಷಿ ವಿದ್ಯಾರ್ಥಿಗಳಿಗೆ ಹಿತನುಡಿಗಳನ್ನಾಡಿದರು.
ಜಯಪ್ರಕಾಶ್ ನಾರಾಯಣ ಸ್ಮಾರಕ ಪ್ರೌಢಶಾಲೆಯ ನಿವೃತ್ತ ಮುಖ್ಯ ಶಿಕ್ಷಕ ಬಿ.ಎಸ್.ಲಾಲ್ ಕುಮಾರ್ ಇನ್ನರ್ ವೀಲ್ ಸಂಸ್ಥೆಯ ಬಗ್ಗೆ ಪರಿಚಯ ಮಾಡಿದರು.
ಇನ್ನರ್ವೀಲ್ ಸಂಸ್ಥೆಯ ಅಧ್ಯಕ್ಷ ಕಣ್ಣು ದೇವರಾಜ್ ಉಪಸ್ಥಿತರಿದ್ದರು.
ಇನ್ನರ್ವಿಲ್ ಸಂಸ್ಥೆಯ ಮಾಜಿ ಅಧ್ಯಕ್ಷೆ ಲತಾ ಚಂಗಪ್ಪ ಸಹ ಹಾಜರಿದ್ದರು.
ಜಯ ಪ್ರಕಾಶ್ ನಾರಾಯಣ ಸ್ಮಾರಕ ಪ್ರೌಢಶಾಲೆಯ ನಿರ್ದೇಶಕರಾದ ಡಾ.ಫಾತಿಮಾ ಕಾರ್ಯಪ್ಪ ಹಾಗೂ ಮುಖ್ಯ ಶಿಕ್ಷಕರಾದ ರಾಜೇಗೌಡ, ಶ್ವೇತಾ ಅಯ್ಯಪ್ಪ, ದಿವ್ಯ ಮುತ್ತಣ್ಣ ಹಾಜರಿದ್ದರು.
ವಿದ್ಯಾರ್ಥಿಗಳಿಗೆ ಕನ್ನಡಕವನ್ನು ವಿತರಿಸುವ ಕಾರ್ಯಕ್ರಮವನ್ನು ಶ್ವೇತ ಅಯ್ಯಪ್ಪ ನಡೆಸಿಕೊಟ್ಟರು. ಸುಮಾರು 32 ಬೇರೆ ಬೇರೆ ಶಾಲೆಯ ವಿದ್ಯಾರ್ಥಿಗಳಿಗೆ ಕನ್ನಡಕವನ್ನು ವಿತರಿಸಲಾಯಿತು.









