ಮಡಿಕೇರಿ NEWS DESK : ಜನನಿ ಮಹಿಳಾ ಮಂಡಳಿಯ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಕೊಡಗು ಡಿಸಿಸಿ ಬ್ಯಾಂಕಿನ ನಿವೃತ್ತ ಉಪ ಪ್ರಧಾನ ವ್ಯವಸ್ಥಾಪಕರಾದ ಪಟ್ಟಡ ಪ್ರೇಮ ಕರುಂಬಯ್ಯ ಅವರ ಮನೆಯ ಆವರಣದಲ್ಲಿ ನಡೆಸಲಾಯಿತು.
ಮಂಡಳಿಯ ಅಧ್ಯಕ್ಷೆ ರಾಣಿ ಅರುಣ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಅಪ್ಪನೆರವಂಡ ವಿಲೀನ ದೇವಯ್ಯ ಮಾತನಾಡಿ, ಮಹಿಳೆಯರು ಆರ್ಥಿಕವಾಗಿ ಸಬಲೀಕರಣಗೊಂಡು ಸದೃಡ ಭಾರತ ನಿರ್ಮಿಸುವಲ್ಲಿ ತಮ್ಮ ತಮ್ಮ ಜವಾಬ್ಧಾರಿಯನ್ನು ಅರಿತು ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು.
ಪಟ್ಟಡ ಪ್ರೇಮ ಕರುಂಬಯ್ಯ ಮಾತನಾಡಿ, ಮಹಿಳೆಯರು ಸರಕಾರದಿಂದ ಸಿಗುವ ಸೌಲಭ್ಯಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಂಡು ಆರ್ಥಿಕವಾಗಿ ಸ್ವಾಲಂಭಿಗಳಾಗುವಂತೆ ಅಭಿವೃದ್ಧಿಯತ್ತ ಮುನ್ನಡೆಯಬೇಕೆಂದು ತಿಳಿಸಿದರು.
ಕಾರ್ಯಕ್ರಮದ ಪ್ರಯುಕ್ತ ಜನನಿ ಮಹಿಳಾ ಮಂಡಳಿಯ ಸದಸ್ಯರಿಗೆ ಹಾಗೂ ಮಹಿಳೆಯರಿಗೆ ರಸಪ್ರಶ್ನೆ ಕಾರ್ಯಕ್ರಮ, ವಿವಿಧ ರೀತಿಯ ಆಟಗಳನ್ನು ಏರ್ಪಡಿಸಲಾಗಿ ವಿಜೇತರಿಗೆ ಬಹುಮಾನ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮದಲ್ಲಿ ಸಿಂಡಿಕೇಟ್ ಬ್ಯಾಂಕಿನ ನಿವೃತ ಅಸಿಸ್ಟೆಂಟ್ ಮ್ಯಾನೇಜರ್ ನಾಳಿಯಮಂಡ ಸುಶೀಲಾ ಗಾಂಧಿ, ನಿವೃತ್ತ ಉಪನ್ಯಾಸಕರಾದ ಪಟ್ಟಡ ಕರುಂಬಯ್ಯ ಹಾಜರಿದ್ದರು.
ಜನನಿ ಮಹಿಳಾ ಮಂಡಳಿಯ ಪ್ರಧಾನ ಕಾರ್ಯದರ್ಶಿ ತಾಯಿರಾ ನಿರೂಪಿಸಿದರು, ಉಪಾಧ್ಯಕ್ಷರಾದ ಹೇಮಾವತಿ ಪ್ರಸನ್ನ ಸ್ವಾಗತಿಸಿರು, ನಿರ್ದೇಶಕರಾದ ಪ್ರೇಮ ಪ್ರಾರ್ಥಿಸಿದರು, ಖಜಾಂಚಿ ಜಯಪಾಲಕ್ಷ ವಂದಿಸಿದರು.









