ಮಡಿಕೇರಿ ಏ.24 NEWS DESK : ಚುನಾವಣಾ ಮತದಾನದ ಸಂದರ್ಭ ಸಾರ್ವಜನಿಕರೊಂದಿಗೆ ಅತ್ಯಂತ ಸೌಜನ್ಯಯುತವಾಗಿ ವರ್ತಿಸಬೇಕೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಪೊಲೀಸ್ ಸಿಬ್ಬಂದಿಗಳಿಗೆ ಸೂಚನೆ ನೀಡಿದ್ದಾರೆ.
ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡ ಪೊಲೀಸ್ ಸಿಬ್ಬಂದಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಪೊಲೀಸ್ ಸಿಬ್ಬಂದಿಗಳಿಂದ ಚುನಾವಣಾ ಸಂದರ್ಭ ತೊಂದರೆಯಾಗ ಕೂಡದೆಂದು ಸ್ಪಷ್ಟಪಡಿಸಿ, ಜಿಲ್ಲೆಯ ಜನತೆ ಶಿಕ್ಷಣವಂತರು ಮತ್ತು ಸೌಜನ್ಯಪರರು ಹೌದು. ಇವರೊಂದಿಗೆ ಚುನಾವಣಾ ಕರ್ತವ್ಯಕ್ಕೆ ನಿಯುಕ್ತರಾದ ಪೊಲೀಸ್ ಸಿಬ್ಬಂದಿಗಳು ಗೌರವಯುತವಾಗಿ ನಡೆದುಕೊಳ್ಳಬೇಕೆಂದು ಸ್ಪಷ್ಟಪಡಿಸಿದರು.
ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡ ಪ್ರತಿಯೊಬ್ಬ ಪೊಲೀಸ್ ಸಿಬ್ಬಂದಿಯ ಸಮಸ್ಯೆಗಳಿಗೆ ನಾವು ಸ್ಪಂದಿಸುತ್ತೇವೆ. ಆದರೆ, ನಿಮ್ಮಿಂದ ಯಾವುದೇ ತೊಂದರೆಗಳು ಉಂಟಾಗಕೂಡದು. ಆ ರೀತಿಯಲ್ಲಿ ಕಾನೂನಿಗೆ ಅನುಗುಣವಾಗಿ ಕರ್ತವ್ಯ ನಿರ್ವಹಿಸುವಂತೆ ತಿಳಿಸಿದರು.