ಮಡಿಕೇರಿ ಏ.24 NEWS DESK : ಖಾಸಗಿ ಬಸ್ ಮತ್ತು ಕಾರೊಂದರ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಕಾರು ಚಾಲಕ ಗಂಭೀರ ಸ್ವರೂಪದಲ್ಲಿ ಗಾಯಗೊಂಡಿರುವ ಘಟನೆ ಬುಧವಾರ ಸಂಜೆ ಮಡಿಕೇರಿ ಸಮೀಪ ಮೇಕೇರಿ ಗ್ರಾಮದಲ್ಲಿ ನಡೆದಿದೆ.
ಮಡಿಕೇರಿಯಿಂದ ಮೂರ್ನಾಡಿನತ್ತ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ವಿರಾಜಪೇಟೆ ಕಡೆಯಿಂದ ಮಡಿಕೇರಿಯತ್ತ ಬರುತ್ತಿದ್ದ ಕಾರಿನ ನಡುವೆ ಡಿಕ್ಕಿ ಸಂಭವಿಸಿದ್ದು, ಈ ಸಂದರ್ಭ ಕಾರು ಚಾಲಕ, ಮೂಲತಃ ವಿರಾಜಪೇಟೆ ಸಮೀಪದ ಪೆರುಂಬಾಡಿ ಗ್ರಾಮದ ಅಶ್ವತ್ಥ್ ಎಂಬವರು ಗಾಯಗೊಂಡಿದ್ದಾರೆ. ಕಾರಿನಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಮಡಿಕೇರಿ ಗ್ರಾಮಾಂತರ ಠಾಣಾ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.