Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಶ್ರೀಕೋದಂಡ ರಾಮೋತ್ಸವ ಸಮಿತಿಯಿಂದ ಮಾ.26 ಮತ್ತು 27 ರಂದು 37ನೇ ವರ್ಷದ ಶ್ರೀ ರಾಮೋತ್ಸವ ಹಾಗೂ ದ್ವಿತೀಯ ವರ್ಷದ ಪುನರ್ ಪ್ರತಿಷ್ಠಾಪನಾ ಮಹೋತ್ಸವ*
  • *ಹಾತೂರಿನಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮದ ಸಮಾರೋಪ : ಪ್ರಮಾಣಪತ್ರ ವಿತರಣೆ* 
  • *ಶೈಕ್ಷಣಿಕ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಕ್ರೈಸ್ತ ಮಿಷನರಿಗಳ ಕೊಡುಗೆ ಅಪಾರ : ಅರುಣ್ ಮಾಚಯ್ಯ*
  • *ಪೊನ್ನಂಪೇಟೆ ಮತ್ತು ಶ್ರೀಮಂಗಲ : ಮಾ.26 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*
  • *ಮಾ.27 ರಂದು ಕೂಡಿಗೆಯಲ್ಲಿ ವೃತ್ತಿ ಶಿಕ್ಷಣ ಪ್ರದರ್ಶನ, ವೃತ್ತಿ ಮಾರ್ಗದರ್ಶನ*
  • *ಏ.7 ರಿಂದ 30 ರವರೆಗೆ ಬೇಸಿಗೆ ತರಬೇತಿ ಶಿಬಿರ*
  • *ಮಡಿಕೇರಿಯಲ್ಲಿ ದೇವರ ದಾಸಿಮಯ್ಯ ಜಯಂತಿ :  ಕೈಮಗ್ಗ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಿ : ಟಿ.ಕೆ.ಪಾಂಡುರಂಗ*
  • *ಕೊಡಗು ಪ್ರೆಸ್ ಕ್ಲಬ್ ಕ್ರಿಕೆಟ್ ಪ್ರೀಮಿಯರ್ ಲೀಗ್-4 : ಮೀಡಿಯಾ ಚಾಲೆಂಜರ್ಸ್ ತಂಡ ಚಾಂಪಿಯನ್*
  • *ಕೆ.ಜಿ.ಬೋಪಯ್ಯರಿಂದ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದೆ : ಕಾಂಗ್ರೆಸ್ಸಿಗರು ಅಪಪ್ರಚಾರದಲ್ಲಿ ತೊಡಗಿದ್ದಾರೆ : ಪರಮೇಶ್ವರ್ ಅಸಮಾಧಾನ*
  • *ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ ತೆರೆ ಮಹೋತ್ಸವ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಆಧ್ಯಾತ್ಮಿಕ ಜ್ಞಾನ ಭಂಡಾರ ಹೊತ್ತ ಗುರುಗಳ ಸಾನಿಧ್ಯ ಜನಸಾಮಾನ್ಯರ ಪುಣ್ಯ : ಜಾನಪದ ಪರಿಷತ್ ಜಿಲ್ಲಾ ಅಧ್ಯಕ್ಷ ಬಿ.ಜಿ.ಅನಂತಶಯನ*
ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

*ಆಧ್ಯಾತ್ಮಿಕ ಜ್ಞಾನ ಭಂಡಾರ ಹೊತ್ತ ಗುರುಗಳ ಸಾನಿಧ್ಯ ಜನಸಾಮಾನ್ಯರ ಪುಣ್ಯ : ಜಾನಪದ ಪರಿಷತ್ ಜಿಲ್ಲಾ ಅಧ್ಯಕ್ಷ ಬಿ.ಜಿ.ಅನಂತಶಯನ*

ಏಪ್ರಿಲ್ 28, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಮಡಿಕೇರಿ ಏ.28 NEWS DESK : ಮಾನವ ಧರ್ಮದಲ್ಲಿ ದೇವರ ಬಗ್ಗೆ ಆಸಕ್ತಿ ಮೂಡಲು, ಗುರು ಲಭ್ಯವಾಗಲು ಪುಣ್ಯ ಮಾಡಿರಬೇಕು.ಆಧ್ಯಾತ್ಮಿಕ ಜ್ಞಾನ ಭಂಡಾರ ಹೊತ್ತ ಗುರುಗಳ ಸಾನಿಧ್ಯ ಜನಸಾಮಾನ್ಯರ ಪುಣ್ಯ ಎಂದು ಶಕ್ತಿ ದಿನಪತ್ರಿಕೆಯ ಸಲಹಾ ಸಂಪಾದಕ ಹಾಗೂ ಜಾನಪದ ಪರಿಷತ್ ಜಿಲ್ಲಾ ಅಧ್ಯಕ್ಷ ಬಿ.ಜಿ.ಅನಂತಶಯನ  ಅಭಿಪ್ರಾಯ ವ್ಯಕ್ತಪಡಿಸಿದರು. ಸೋಮವಾರಪೇಟೆ ಸಮೀಪದ ಅಂಕನಹಳ್ಳಿ ಶ್ರೀತಪೋವನ ಕ್ಷೇತ್ರ ಮನೆಹಳ್ಳಿಮಠದ ಆವರಣದಲ್ಲಿ ಶ್ರೀಗುರುಸಿದ್ಧವೀರೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ ಪ್ರಯುಕ್ತ ನಡೆದ “ಜನ ಜಾಗೃತಿ-ಸಾಧನೆ-ಸಮ್ಮಾನ’’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಮಾನವ ಜನ್ಮ, ಭಗವಂತನಲ್ಲಿಆಸಕ್ತಿ ಹಾಗೂ ಮಾರ್ಗದರ್ಶಕ ಗುರುವಿನ ದರ್ಶನ –ಈ ಮೂರು ಅತ್ಯಂತ ಅವಶ್ಯಕತೆಗಳು ದೊರೆತಾಗ ದೈವ ಸಾಕ್ಷಾತ್ಕಾರ ಆಗಲು ಸಾಧ್ಯ ಹಾಗೂ ಜನ್ಮ ಸಾರ್ಥಕವಾಗುತ್ತದೆ.ಪರಿಶ್ರಮದಿಂದ ಸಿಕ್ಕ ಭಾಗ್ಯವನ್ನು ಉಳಿಸಿ, ಬೆಳೆಸಿಕೊಂಡು ಹೋಗಬೇಕು.ಮನಸ್ಸಿನ ಮೂಲ ಹಾಗೂ ಆತ್ಮದ ಮೂಲ ಪರಮಾತ್ಮ.ನಿತ್ಯ ಭಗವಂತನ ಸ್ಮರಣೆ ಮಾಡುವುದರಿಂದ ಮರುಜನ್ಮ ಉಂಟಾಗುತ್ತದೆ.ಸಿಹಿ ನೀರು ಉಪ್ಪಿನ ಮೂಲ ಸಮುದ್ರ ಸೇರುವಂತೆ ನಿತ್ಯ ಭಗವಂತನ ಸ್ಮರಣೆ ಮಾಡಿದರೆ ಜನ್ಮ ಸಾರ್ಥ್ಯಕ್ಯ ಪಡೆಯುತ್ತದೆ ಎಂದು ಹೇಳಿದ ಅನಂತಶಯನ, ಬಸವಣ್ಣನವರ ವಚನವನ್ನು ಸುಶ್ರಾವ್ಯವಾಗಿ ಹಾಡಿ ಸಭಿಕ ಭಕ್ತರನ್ನು ರಂಜಿಸಿದರು. ಮುಖ್ಯ ಅತಿಥಿ ಕೊಡಗು ವಿಶ್ವವಿದ್ಯಾನಿಲಯದ ಉಪನ್ಯಾಸಕ ಜಮೀರ್ ಅಹಮ್ಮದ್ ಮಾತನಾಡಿ, ಕ್ರಿ.ಶ.12 ನೇ ಶತಮಾನದ ಬಸವಣ್ಣ ಸರ್ವ ಸಮಾನತೆ ತಂದುಕೊಟ್ಟ ಕ್ರಾಂತಿಕಾರಿ.ಸಾಂಸ್ಕೃತಿಕ ನಾಯಕರು. .ದಕ್ಷಿಣಕ್ಕೆ ಬಂದ ಶೈವ ಪಂಥದ ಬಸವಾದಿ ಶರಣರು ನಡೆದಾಡಿದ ಪುಣ್ಯದ ಭೂಮಿ ಕರ್ನಾಟಕ.ಬಸವಾದಿ ಶಿವಶರಣರು ಅರಿಷಡ್ವರ್ಗ ದಾಟಿ, ಪಂಚೇಂದ್ರಿಯಗಳನ್ನು ದಾಟಿದ ಸಾಂಸ್ಕೃತಿಕ ಜಗತ್ತಿಗೆ ಕೊಡುಗೆ ನೀಡಿದವರು.ಅಕ್ಷರ ದಾಸೋಹ, ಅನ್ನ ದಾಸೋಹ ಆಶ್ರಯ ಕೊಟ್ಟಂಥ ನಡೆದಾಡುವ ದೈವ ಶಿವಕುಮಾರಸ್ವಾಮಿಯವರ ಪುಣ್ಯ ಭೂಮಿ ಕರ್ನಾಟಕ ಭಾರತ ದೇಶಕ್ಕೆ ಮಾದರಿ. ಅಂತರಂಗ ಶುದ್ಧಿ-ಬಹಿರಂಗ ಶುದ್ಧಿ ಸಂದೇಶ ಸಾರಿದ ವಚನಕಾರರು ಕಾಯಕವೇ ಕೈಲಾಸ ಎಂದು ಬದುಕಿ ಬಾಳಿದವರು.ಗುರು-ಲಿಂಗ-ಜಂಗಮ ದಾಟಿ ಬದುಕಲು ಸಾಧ್ಯವಿಲ್ಲ.ಬಸವಾದಿ ಶರಣರು ವೈಚಾರಿಕತೆ, ಭಕ್ತಿಯ ಮೂಲಕ ಸಕಲರಿಗೂ ಲೇಸನ್ನು ಬಯಸಿದವರು.ಅನುಭವ ಮಂಟಪಕ್ಕೆ ಅಕ್ಕಮಹಾದೇವಿಗೆ ಸ್ವಾಗತ ನೀಡಿ ಸಮಾನತೆ ತೋರಿದ ಮಹಾನುಭವ ಬಸವಣ್ಣ.ವ್ಯಕ್ತಿ ತನ್ನ ವ್ಯಕ್ತಿತ್ವವನ್ನು ಬದಲಾಯಿಸಿಕೊಳ್ಳಲು ಬಸವಣ್ಣನವರ ವಚನಗಳನ್ನು ಓದಬೇಕು ಎಂದು ಕರೆ ನೀಡಿದರು. ಕಿರಿಕೊಡ್ಲಿ ಮಠಾಧೀಶ ಸದಾಶಿವ ಸ್ವಾಮೀಜಿ ಆಶೀರ್ವಚನ ನೀಡಿ, ಜೀವನದಲ್ಲಿ ಸಾಧನೆ ಮಾಡಬಹುದೆಂಬುದಕ್ಕೆ ಮನೇಹಳ್ಳಿ ಮಠದ ಅಭಿವೃದ್ಧಿಯೇ ಸಾಕ್ಷಿ.ಪವಿತ್ರ ಕ್ಷೇತ್ರವಾಗಿರುವ ಮಠ ಎಲ್ಲಾ ಭಕ್ತರಿಗೆ ಸಂಸ್ಕಾರ, ಜ್ಞಾನ, ಭಕ್ತಿ ನೀಡುವುದರ ಜತೆಗೆ ಗೋಶಾಲೆ ನಿರ್ಮಾಣದ ಜತೆಗೆ ಸಮಾಜ ಮುಖಿ ಕೆಲಸಗಳನ್ನು ಮಾಡುತ್ತಿದೆ.ಶರಣರ ಚಿಂತನೆ, ವಚನಗಳು ಜನಸಾಮಾನ್ಯರಿಗೆ ದಾರಿದೀಪವಾಗಿವೆ ಎಂದರು.     ಮುದ್ದಿನಕಟ್ಟೆ ಮಠಾಧೀಶ ಅಭಿನವ ಸಿದ್ದಲಿಂಗ ಶಿವಾಚಾರ್ಯ ಸ್ವಾಮೀಜಿ ಆಶೀರ್ವಚನ ನೀಡಿ, ಮಠ-ಮಂದಿರಗಳು ಸಂಸ್ಕಾರ ಕಲಿಸುತ್ತವೆ.ಶರಣರ ವಚನಗಳನ್ನುಅರಿತು ಜೀವನದಲ್ಲಿ ಅಳವಡಿಸಿಕೊಂಡು ಬದುಕನ್ನು ಹಸನು ಮಾಡಿಕೊಳ್ಳಬೇಕು ಎಂದರು. ಜಾತ್ರಾ ಮಹೋತ್ಸವದ ಕಾರ್ಯಕ್ರಮ ಆಯೋಜಕ ಹಾಗೂ ಹಿರಿಯ ಪತ್ರಕರ್ತ ಎಸ್.ಮಹೇಶ್ ಪ್ರಾಸ್ತಾವಿಕ ನುಡಿಗಳನ್ನಾಡಿ, ಮಠದಲ್ಲಿ ಜಾತ್ರಾ ಮಹೋತ್ಸವದ ಕಾರ್ಯಕ್ರಮಗಳಲ್ಲಿ ದಾಸೋಹದ ಜತೆ ಜ್ಞಾನ ದಾಸೋಹ ಸಹ ನಡೆಯುತ್ತಿದೆ.ಹಾದಿ ತಪ್ಪುತ್ತಿರುವ ಯುವಜನತೆಯಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಜನ ಜಾಗೃತಿ, ಸಾಧನೆ, ಸಮ್ಮಾನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು. ಕಾರ್ಯಕ್ರಮದಲ್ಲಿ ಜಾನಪದ ಪರಿಷತ್ ಜಿಲ್ಲಾ ಅಧ್ಯಕ್ಷ ಬಿ.ಜಿ.ಅನಂತಶಯನ , ಹಿರಿಯ ಪತ್ರಕರ್ತ ಎಚ್.ಟಿ.ಅನಿಲ್, ಉಪನ್ಯಾಸಕ ಜಮೀರ್ ಅಹಮ್ಮದ್, ಜಿಲ್ಲಾ ವಿದ್ಯಾಸಾಗರ ಕಲಾ ತಂಡದ ಕಲಾವಿದ ಈ. ರಾಜು ಮತ್ತು ತಂಡದವರು, ಶೌರ್ಯ ಮತ್ತು ತಂಡದವರು, ಪತ್ರಕರ್ತ ಪ್ರಕಾಶ್ಚಂದ್ರ ಹಾಗೂ ವಿವಿಧ ಕ್ಷೇತ್ರದ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಯಿತು. ಕಲಾವಿದ ಈ. ರಾಜು ಮತ್ತು ತಂಡದವರು ಜಾನಪದ ಗೀತೆಗಳನ್ನು ಹಾಡಿ ರಂಜಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಹಿರಿಯ ಪತ್ರಕರ್ತ ಎಚ್.ಟಿ.ಅನಿಲ್ ಮಾತನಾಡಿ, ತಪೋವನ ಕ್ಷೇತ್ರ ಜಿಲ್ಲೆಯ 10 ಕ್ಷೇತ್ರಗಳಲ್ಲಿ ಒಂದಾಗಿದ್ದು ಅಭಿವೃದ್ಧಿ ಸಾಧಿಸುತ್ತಿದೆ.ಮಠ ಗೋಶಾಲೆ ನಿರ್ಮಿಸಿ ಗೋವುಗಳ ರಕ್ಷಣೆಯ ಪುಣ್ಯ ಕಾರ್ಯ ಮಾಡುತ್ತಿದೆ.ಮಠಧ್ಯಕ್ಷ ಮಹಾಂ ಸ್ವಾಮೀಜಿಯವರ ಧಾರ್ಮಿಕ ಪ್ರವಚನ ಹಳ್ಳಿಯ ವಾತಾವರಣದ ಮಕ್ಕಳ ಬೌದ್ಧಿಕ ಬೆಳವಣಿಗೆಗೆ ಪೂರಕವಾಗಿದೆ.ಇಂದು ಧಾರ್ಮಿಕ ಶಿಕ್ಷಣ ಅಗತ್ಯವಾಗಿದ್ದು ಆಧ್ಯಾತ್ಮಿಕತೆಗೂ ಹೆಚ್ಚಿನ ಆಸಕ್ತಿ, ಆದ್ಯತೆ ತೋರಬೇಕು ಎಂದರು.       ಶ್ರೀತಪೋವನ ಕ್ಷೇತ್ರ ಮನೇಹಳ್ಳಿ ಮಠಾಧೀಶ ಮಹಾಂತ ಶಿವಲಿಂಗ ಸ್ವಾಮೀಜಿ, ಬಸವಪಟ್ಟಣ ತೋಂಟದಾರ್ಯ ಮಠದ ಸ್ವತಂತ್ರ ಬಸವಲಿಂಗ ಸ್ವಾಮೀಜಿ, ಪತ್ರಕರ್ತ ಎಸ್.ಮಹೇಶ್, ಇತರರು  ಉಪಸ್ಥಿತರಿದ್ದರು.ಲೇಖಕಿ ಗೀತಾಂಜಲಿ ಹಾಗೂ ಮುಖ್ಯಶಿಕ್ಷಕಿ ಪ್ರೇಮಾ ಸಾಧಕರನ್ನು ಪರಿಚಯಿಸಿ, ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಶ್ರೀಕೋದಂಡ ರಾಮೋತ್ಸವ ಸಮಿತಿಯಿಂದ ಮಾ.26 ಮತ್ತು 27 ರಂದು 37ನೇ ವರ್ಷದ ಶ್ರೀ ರಾಮೋತ್ಸವ ಹಾಗೂ ದ್ವಿತೀಯ ವರ್ಷದ ಪುನರ್ ಪ್ರತಿಷ್ಠಾಪನಾ ಮಹೋತ್ಸವ*

ಮಾರ್ಚ್ 24, 2026

*ಹಾತೂರಿನಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮದ ಸಮಾರೋಪ : ಪ್ರಮಾಣಪತ್ರ ವಿತರಣೆ* 

ಮಾರ್ಚ್ 23, 2026

*ಶೈಕ್ಷಣಿಕ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಕ್ರೈಸ್ತ ಮಿಷನರಿಗಳ ಕೊಡುಗೆ ಅಪಾರ : ಅರುಣ್ ಮಾಚಯ್ಯ*

ಮಾರ್ಚ್ 23, 2026

*ಹಾತೂರಿನಲ್ಲಿ ಹೊಲಿಗೆ ತರಬೇತಿ ಕಾರ್ಯಕ್ರಮದ ಸಮಾರೋಪ : ಪ್ರಮಾಣಪತ್ರ ವಿತರಣೆ* 

ಮಾರ್ಚ್ 23, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ವಿರಾಜಪೇಟೆ ಮಾ.23 NEWS DESK : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಜ್ಞಾನವಿಕಾಸ ಕಾರ್ಯಕ್ರಮದಲ್ಲಿ ವಿರಾಜಪೇಟೆ ತಾಲ್ಲೂಕಿನ ಗೋಣಿಕೊಪ್ಪ…

*ಶೈಕ್ಷಣಿಕ ಹಾಗೂ ವೈದ್ಯಕೀಯ ಕ್ಷೇತ್ರದಲ್ಲಿ ಕ್ರೈಸ್ತ ಮಿಷನರಿಗಳ ಕೊಡುಗೆ ಅಪಾರ : ಅರುಣ್ ಮಾಚಯ್ಯ*

ಮಾರ್ಚ್ 23, 2026

*ಪೊನ್ನಂಪೇಟೆ ಮತ್ತು ಶ್ರೀಮಂಗಲ : ಮಾ.26 ರಂದು ವಿವಿಧೆಡೆ ವಿದ್ಯುತ್ ವ್ಯತ್ಯಯ*

ಮಾರ್ಚ್ 23, 2026

*ಮಾ.27 ರಂದು ಕೂಡಿಗೆಯಲ್ಲಿ ವೃತ್ತಿ ಶಿಕ್ಷಣ ಪ್ರದರ್ಶನ, ವೃತ್ತಿ ಮಾರ್ಗದರ್ಶನ*

ಮಾರ್ಚ್ 23, 2026

*ಏ.7 ರಿಂದ 30 ರವರೆಗೆ ಬೇಸಿಗೆ ತರಬೇತಿ ಶಿಬಿರ*

ಮಾರ್ಚ್ 23, 2026

*ಮಡಿಕೇರಿಯಲ್ಲಿ ದೇವರ ದಾಸಿಮಯ್ಯ ಜಯಂತಿ :  ಕೈಮಗ್ಗ ಉತ್ಪನ್ನಗಳಿಗೆ ಮಾರುಕಟ್ಟೆ ಕಲ್ಪಿಸಿ : ಟಿ.ಕೆ.ಪಾಂಡುರಂಗ*

ಮಾರ್ಚ್ 23, 2026

*ಕೊಡಗು ಪ್ರೆಸ್ ಕ್ಲಬ್ ಕ್ರಿಕೆಟ್ ಪ್ರೀಮಿಯರ್ ಲೀಗ್-4 : ಮೀಡಿಯಾ ಚಾಲೆಂಜರ್ಸ್ ತಂಡ ಚಾಂಪಿಯನ್*

ಮಾರ್ಚ್ 23, 2026

*ಕೆ.ಜಿ.ಬೋಪಯ್ಯರಿಂದ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದೆ : ಕಾಂಗ್ರೆಸ್ಸಿಗರು ಅಪಪ್ರಚಾರದಲ್ಲಿ ತೊಡಗಿದ್ದಾರೆ : ಪರಮೇಶ್ವರ್ ಅಸಮಾಧಾನ*

ಮಾರ್ಚ್ 23, 2026

*ಸುಂಟಿಕೊಪ್ಪದಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ಶ್ರೀ ಚಾಮುಂಡೇಶ್ವರಿ, ಶ್ರೀಮುತ್ತಪ್ಪ ಮತ್ತು ಪರಿವಾರ ದೇವರುಗಳ ತೆರೆ ಮಹೋತ್ಸವ*

ಮಾರ್ಚ್ 23, 2026

*ಕಾಸ್ಮೋಪಾಲಿಟನ್ ಕ್ಲಬ್ ಅಧ್ಯಕ್ಷರಾಗಿ ರತನ್ ತಮ್ಮಯ್ಯ ಆಯ್ಕೆ*

ಮಾರ್ಚ್ 23, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.