Close Menu
News Desk KannadaNews Desk Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • *ಪೊಲೀಸ್ ವಸತಿ ಗೃಹಗಳ ಸ್ಥಿತಿಗತಿ ಪರಿಶೀಲಿಸಿದ ಕೊಡಗು ಎಸ್‌ಪಿ*
  • *ಮಾ.9 ರಂದು ರೆಡ್ ಕ್ರಾಸ್ ನಿಂದ ಕ್ಯಾನ್ಸರ್ ತಪಾಸಣಾ ಶಿಬಿರ : ಮಹಿಳಾ ದಿನಾಚರಣೆ ಅಂಗವಾಗಿ ವೈವಿಧ್ಯಮಯ ಕಾಯ೯ಕ್ರಮ*
  • *ಮಾ.8ರಂದು ಚೇರಂಬಾಣೆ ಗೌಡ ಮಹಿಳಾ ಒಕ್ಕೂಟದ ವಾರ್ಷಿಕೋತ್ಸವ ಮತ್ತು ವಿಶ್ವ ಮಹಿಳಾ ದಿನಾಚರಣೆ*
  • *ಮಾ.6 ರಂದು ಮಿನಿ ಉದ್ಯೋಗ ಮೇಳ*
  • ಶ್ರದ್ಧಾಭಕ್ತಿಯಿಂದ ಜರುಗಿದ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ
  • *ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವು ಅಗತ್ಯ : ಕೈಬುಲಿರ ಪಾರ್ವತಿ ಬೋಪಯ್ಯ*
  • *ಸೋಮವಾರಪೇಟೆಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ : ಮಕ್ಕಳಲ್ಲಿ ದೇಶ ಪ್ರೇಮವನ್ನು ಬೆಳೆಸಿ : ಸುಧಾಕರ್ ಸಲಹೆ*
  • *ಶಾಸ್ತ ಯುವಕ ಸಂಘದಿಂದ ರುದ್ರಭೂಮಿಯಲ್ಲಿ ಶ್ರಮದಾನ*
  • *ಗುಂಡು ಹೊಡೆದುಕೊಂಡು ವ್ಯಕ್ತಿ ಆತ್ಮಹತ್ಯೆ*
  • *21ನೇ ವರ್ಷದ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿ*
News Desk KannadaNews Desk Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News Desk KannadaNews Desk Kannada





Home»ಇತ್ತೀಚಿನ ಸುದ್ದಿಗಳು»*ಡಾ.ಧನಂಜಯ ಸರ್ಜಿ ಅವರನ್ನು ಗೆಲ್ಲಿಸಿ, ವಿಧಾನ ಪರಿಷತ್ ಗೆ ಕಳುಹಿಸಿ : ಡಾ.ನಾಗರಾಜ್ ಮನವಿ* 
ಇತ್ತೀಚಿನ ಸುದ್ದಿಗಳು ಕರ್ನಾಟಕ ಕೊಡಗು ಜಿಲ್ಲೆ

*ಡಾ.ಧನಂಜಯ ಸರ್ಜಿ ಅವರನ್ನು ಗೆಲ್ಲಿಸಿ, ವಿಧಾನ ಪರಿಷತ್ ಗೆ ಕಳುಹಿಸಿ : ಡಾ.ನಾಗರಾಜ್ ಮನವಿ* 

ಮೇ 18, 20242 Mins ReadBy admin
Facebook WhatsApp Twitter Telegram Copy Link Threads Email LinkedIn Pinterest
Follow us on
Google News Facebook
Facebook Twitter WhatsApp Email Telegram Copy Link

ಶಿವಮೊಗ್ಗ ಮೇ 18 NEWS DESK : ನಗರದ ಪಿಇಎಸ್ ಕಾಲೇಜ್ ಸಭಾಂಗಣದಲ್ಲಿ ಶನಿವಾರ ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಯ ಹಿನ್ನೆಲೆ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮತಯಾಚಿಸಿದರು. ಈ ಸಂದರ್ಭದಲ್ಲಿ ಪಿಎಸ್ ಕಾಲೇಜಿನ ಆಡಳಿತ ಸಂಯೋಜಕರಾದ ಡಾ. ನಾಗರಾಜ್ ಮಾತನಾಡಿ, ಡಾ. ಧನಂಜಯ ಸರ್ಜಿ ಅವರು ರಾಜ್ಯದ ಹೆಸರಾಂತ ಮಕ್ಕಳ ತಜ್ಞರು, ವಿದ್ಯಾವಂತರು ರಾಜಕೀಯಕ್ಕೆ ಬರಬೇಕು ಎಂದು ಪ್ರಧಾನಿ ನರೇಂದ್ರ ಮೋದಿಯವರು ಪ್ರತಿ ಬಾರಿ ಹೇಳುತ್ತಲೇ ಇರುತ್ತಾರೆ , ಅಂತೆಯೇ ಡಾ. ಧನಂಜಯ ಸರ್ಜಿ ಇಂದು ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ನಮ್ಮ ಮುಂದಿದ್ದಾರೆ. ಕೃಷಿ ಮತ್ತು ವ್ಯಾಪಾರ ಕುಟುಂಬದ ಹಿನ್ನೆಲೆಯಲ್ಲಿ ಬಂದ ಸರ್ಜಿ, ಉತ್ತಮ ಸೇವೆ ಸಲ್ಲಿಸುವ ಮೂಲಕ ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆ ಮಾಡಿ ಇದೀಗ ನೈರುತ್ಯ ಪದವೀಧರ ಕ್ಷೇತ್ರದ ಮೂಲಕ  ರಾಜಕೀಯಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಸರ್ಜಿ ಅವರಿಗೆ ಮತ ಹಾಕುವುದರ ಮೂಲಕ ಈ ಬಾರಿ ಅವರನ್ನು ವಿಧಾನ ಪರಿಷತ್ ಗೆ ಆಯ್ಕೆ ಮಾಡಿ ಕಳುಹಿಸಬೇಕು ಎಂದು ಮನವಿ ಮಾಡಿದರು. ರಾಜ್ಯ ಪ್ರಕೋಸ್ಟಗಳ ಸಂಯೋಜಕರಾದ ಎಸ್. ದತ್ತಾತ್ರಿ ಮಾತನಾಡಿ, ಕಳೆದ ಮೂವತ್ತು ವರ್ಷಗಳಿಂದ ನೈರುತ್ಯ ಪದವೀಧರ ಕ್ಷೇತ್ರದಲ್ಲಿ  ಬಿಜೆಪಿ ಗೆದ್ದಿದೆ. ಈ ಹಿಂದೆ ನೈರುತ್ಯ ಪದವೀಧರ ಕ್ಷೇತ್ರವನ್ನು ಡಿ. ಎಚ್. ಶಂಕರಮೂರ್ತಿಯವರು  ಪ್ರತಿನಿಧಿಸುತ್ತಿದ್ದರು  ಈ ಬಾರಿ ಡಾ. ಧನಂಜಯ ಸರ್ಜಿ ಅವರಿಗೆ ಗುರುತಿಸಿ ಪಕ್ಷ ಟಿಕೆಟ್ ನೀಡಿದೆ. ನಾವೆಲ್ಲರೂ ಸರ್ಜಿ ಅವರ ರಾಯಭಾರಿಗಳಾಗಿ ಕೆಲಸ ಮಾಡಬೇಕು ಎಂದರು. ಈ ಚುನಾವಣೆಯಲ್ಲಿ ಇವಿಎಂ ಇರುವುದಿಲ್ಲ, ಬದಲಾಗಿ ಬ್ಯಾಲೆಟ್ ಪೇಪರ್ ಇರುತ್ತದೆ, ತಾವೆಲ್ಲರೂ ಡಾ.ಧನಂಜಯ ಸರ್ಜಿ  ಹೆಸರಿನ ಮುಂದೆ ಒಂದು ಗೆರೆ ಎಳೆಯುವ ಮೂಲಕ ಮೊದಲ ಪ್ರಾಶಸ್ತ್ಯ ದ ಮತವನ್ನು ಹಾಕಬೇಕು. ಮಧ್ಯ ಕರ್ನಾಟಕದ ಭಾಗದಲ್ಲಿ ಹೆಚ್ಚು ಪ್ರಖ್ಯಾತಿ ಹೊಂದಿರುವ ಡಾ.ಸರ್ಜಿ ವಿಧಾನ ಪರಿಷತ್ ಗೆ ಆಯ್ಕೆಯಾಗಿ ಹೋದರೆ ಪದವೀಧರರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಸಫಲರಾಗುತ್ತಾರೆ ಎಂದು ಹೇಳಿದರು. ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಮಾತನಾಡಿ, ಹುಟ್ಟಿದಾಗ ಹೆಸರು ಇರುವುದಿಲ್ಲ, ಉಸಿರು ಇರುತ್ತದೆ, ಮರಣ ಹೊಂದಿದ ಮೇಲೆ ಉಸಿರು ಇರುವುದಿಲ್ಲ, ಹೆಸರು ಇರುತ್ತದೆ, ಹುಟ್ಟು ಮತ್ತು ಸಾವುಗಳ ನಡುವೆ ನಾವು ಸಾಧನೆಗಳನ್ನು ಮಾಡಿ  ಹೆಸರನ್ನ ಸಂಪಾದಿಸಬೇಕು. ರೈತರು, ಯೋಧರಂತೆ ದೇಶದ ಬೆನ್ನೆಲುಬು ಪದವೀಧರರು. ದೇಶದ ಭವ್ಯ ಭವಿಷ್ಯದ  ನಿರ್ಮಾಣದಲ್ಲಿ ಪದವೀಧರರ ಪಾತ್ರ ಬಹಳ ಮುಖ್ಯ. ಪದವೀಧರರ ಸಮಸ್ಯೆಗಳನ್ನು ಅತಿ ಹತ್ತಿರದಿಂದ ಬಲ್ಲವನಾಗಿದ್ದು, ಪದವೀಧರ  ಸಮಸ್ಯೆಗಳಿಗೆ  ಸ್ಪಂದಿಸುತ್ತೇನೆ ಎಂದು ಭರವಸೆ ನೀಡಿದರು. ಈ ವೇಳೆ  ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿ. ಎಚ್. ಮಾಲತೇಶ್  ಹಾಜರಿದ್ದರು. ಈ ವೇಳೆ ಕಾಲೇಜಿನ ಉಪನ್ಯಾಸಕರು, ಸಿಬ್ಬಂದಿ, ಪದವೀಧರರು ಹಾಜರಿದ್ದರು.

Follow us Follow us
Share. WhatsApp Facebook Twitter Email Telegram Copy Link

Website design development company services in Mangalore

Forex Trading Teacher in India

Related Posts

*ಪೊಲೀಸ್ ವಸತಿ ಗೃಹಗಳ ಸ್ಥಿತಿಗತಿ ಪರಿಶೀಲಿಸಿದ ಕೊಡಗು ಎಸ್‌ಪಿ*

ಮಾರ್ಚ್ 6, 2026

*ಮಾ.9 ರಂದು ರೆಡ್ ಕ್ರಾಸ್ ನಿಂದ ಕ್ಯಾನ್ಸರ್ ತಪಾಸಣಾ ಶಿಬಿರ : ಮಹಿಳಾ ದಿನಾಚರಣೆ ಅಂಗವಾಗಿ ವೈವಿಧ್ಯಮಯ ಕಾಯ೯ಕ್ರಮ*

ಮಾರ್ಚ್ 6, 2026

*ಮಾ.8ರಂದು ಚೇರಂಬಾಣೆ ಗೌಡ ಮಹಿಳಾ ಒಕ್ಕೂಟದ ವಾರ್ಷಿಕೋತ್ಸವ ಮತ್ತು ವಿಶ್ವ ಮಹಿಳಾ ದಿನಾಚರಣೆ*

ಮಾರ್ಚ್ 6, 2026

*ಮಾ.9 ರಂದು ರೆಡ್ ಕ್ರಾಸ್ ನಿಂದ ಕ್ಯಾನ್ಸರ್ ತಪಾಸಣಾ ಶಿಬಿರ : ಮಹಿಳಾ ದಿನಾಚರಣೆ ಅಂಗವಾಗಿ ವೈವಿಧ್ಯಮಯ ಕಾಯ೯ಕ್ರಮ*

ಮಾರ್ಚ್ 6, 2026 ಇತ್ತೀಚಿನ ಸುದ್ದಿಗಳು ಕೊಡಗು ಜಿಲ್ಲೆ

ಮಡಿಕೇರಿ NEWS DESK  ಮಾ.6 :  ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಕೊಡಗು ಜಿಲ್ಲಾ ಘಟಕದಿಂದ ಮಾ.9 ರಂದು ಸೋಮವಾರ…

*ಮಾ.8ರಂದು ಚೇರಂಬಾಣೆ ಗೌಡ ಮಹಿಳಾ ಒಕ್ಕೂಟದ ವಾರ್ಷಿಕೋತ್ಸವ ಮತ್ತು ವಿಶ್ವ ಮಹಿಳಾ ದಿನಾಚರಣೆ*

ಮಾರ್ಚ್ 6, 2026

*ಮಾ.6 ರಂದು ಮಿನಿ ಉದ್ಯೋಗ ಮೇಳ*

ಮಾರ್ಚ್ 5, 2026

ಶ್ರದ್ಧಾಭಕ್ತಿಯಿಂದ ಜರುಗಿದ ಬೊಟ್ಲಪ್ಪ ದೇವರ ವಾರ್ಷಿಕ ಉತ್ಸವ

ಮಾರ್ಚ್ 5, 2026

*ವಿದ್ಯಾರ್ಥಿಗಳಿಗೆ ಜ್ಞಾನದ ಹಸಿವು ಅಗತ್ಯ : ಕೈಬುಲಿರ ಪಾರ್ವತಿ ಬೋಪಯ್ಯ*

ಮಾರ್ಚ್ 5, 2026

*ಸೋಮವಾರಪೇಟೆಯಲ್ಲಿ ಹಿಂದೂ ಸಂಗಮ ಕಾರ್ಯಕ್ರಮ : ಮಕ್ಕಳಲ್ಲಿ ದೇಶ ಪ್ರೇಮವನ್ನು ಬೆಳೆಸಿ : ಸುಧಾಕರ್ ಸಲಹೆ*

ಮಾರ್ಚ್ 5, 2026

*ಶಾಸ್ತ ಯುವಕ ಸಂಘದಿಂದ ರುದ್ರಭೂಮಿಯಲ್ಲಿ ಶ್ರಮದಾನ*

ಮಾರ್ಚ್ 5, 2026

*ಗುಂಡು ಹೊಡೆದುಕೊಂಡು ವ್ಯಕ್ತಿ ಆತ್ಮಹತ್ಯೆ*

ಮಾರ್ಚ್ 5, 2026

*21ನೇ ವರ್ಷದ ಕೊಡಗು ಮುಸ್ಲಿಂ ಕಪ್ ಕ್ರಿಕೆಟ್ ಪಂದ್ಯಾವಳಿ*

ಮಾರ್ಚ್ 5, 2026

*ಕೊಡಗಿನ ಗಡಿಭಾಗದ ಗೇಟ್‌ಗಳನ್ನು ಬಂದ್ ಮಾಡಿ ಹೋರಾಟ*

ಮಾರ್ಚ್ 5, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.

Ad Blocker Enabled!
Ad Blocker Enabled!
Our website is made possible by displaying online advertisements to our visitors. Please support us by disabling your Ad Blocker.