Close Menu
News-Desk-KannadaNews-Desk-Kannada
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಇತ್ತೀಚಿನ ಸುದ್ದಿಗಳು
  • ಉದ್ಯೋಗ ಭಾಗ್ಯ
  • ಮಹಾದೇಗುಲ
  • ರುಚಿ ನೋಡಿ
  • ಪೊಲೀಸ್ ನ್ಯೂಸ್
  • ರೋಗ ಮುಕ್ತ
  • ಪ್ರವಾಸಿತಾಣ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Facebook X (Twitter) Instagram
Breaking News
  • ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?
  • *ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*
  • ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!
  • *ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*
  • *ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*
  • *ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*
  • *ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*
  • *ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*
  • *ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*
  • *ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*
News-Desk-KannadaNews-Desk-Kannada




  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
  • ಮಹಾದೇಗುಲ
  • ರುಚಿ ನೋಡಿ
  • ಉದ್ಯೋಗ ಭಾಗ್ಯ
  • ರೋಗ ಮುಕ್ತ
  • ಸಣ್ಣ ಕಥೆ
News-Desk-KannadaNews-Desk-Kannada





Home » *ಸಂಯುಕ್ತ ರಸಗೊಬ್ಬರಗಳ ಬಳಕೆ ಮಾಡಲು ಸಲಹೆ*
ಇತ್ತೀಚಿನ ಸುದ್ದಿಗಳು

*ಸಂಯುಕ್ತ ರಸಗೊಬ್ಬರಗಳ ಬಳಕೆ ಮಾಡಲು ಸಲಹೆ*

June 4, 20242 Mins Read
Facebook WhatsApp Twitter Telegram Copy Link Threads Email LinkedIn Pinterest
Facebook Twitter WhatsApp Email Telegram Copy Link

ಮಡಿಕೇರಿ ಜೂ.4 NEWS DESK : ಸಸ್ಯಗಳ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಹದಿನೇಳು ಪೋಷಕಾಂಶಗಳ ಅಗತ್ಯವಿರುತ್ತದೆ. ಇವುಗಳಲ್ಲಿ ಇಂಗಾಲ, ಜಲಜನಕ ಮತ್ತು ಆಮ್ಲಜನಕವು ಸ್ವಾಭಾವಿಕವಾಗಿ ದೊರೆಯಲಿದ್ದು, ಗಾಳಿ ಮತ್ತು ನೀರಿನ ಮೂಲಕ ಸಸ್ಯಗಳಿಗೆ ಲಭ್ಯವಾಗುತ್ತವೆ. ಉಳಿದ ಹದಿನಾಲ್ಕು ಪೋಷಕಾಂಶಗಳಲ್ಲಿ ಸಾರಜನಕ, ರಂಜಕ, ಪೊಟ್ಯಾಷ್ ಹೆಚ್ಚಿನ ಪ್ರಮಾಣದಲ್ಲಿ ಬೇಕಿದ್ದು ಇವುಗಳನ್ನು ಪ್ರಧಾನ ಪೋಷಕಾಂಶಗಳೆಂದು, ಕ್ಯಾಲ್ಸಿಯಂ, ಮೆಗ್ನೆಷಿಯಂ, ಗಂಧಕ, ಕಬ್ಬಿಣ, ಜಿಂಕ್, ಬೋರಾನ್, ತಾಮ್ರ, ಮ್ಯಾಂಗನೀಸ್, ಮಾಲಿಬಿನಂ, ಕ್ಲೋರಿನ್ ಮತ್ತು ನಿಕಲ್ ಕಡಿಮೆ ಪ್ರಮಾಣದಲ್ಲಿ ಬೇಕಿದ್ದು ಇವುಗಳನ್ನು ಲಘು ಪೋಷಕಾಂಶಗಳೆಂದು ವಿಂಗಡಿಸಲಾಗಿದೆ. ಇವುಗಳಲ್ಲಿ ಯಾವುದೇ ಒಂದು ಪೋಷಕಾಂಶದ ಕೊರತೆಯಾದರೂ ಸಸ್ಯಗಳ ಬೆಳವಣಿಗೆ ಮತ್ತು ಅಭಿವೃದ್ಧಿಯ ಮೇಲೆ ಪರಿಣಾಮ ಬೀರಿ ಇಳುವರಿ ಕುಂಠಿತವಾಗುತ್ತದೆ.
ಪ್ರಧಾನ ಪೋಷಕಾಂಶಗಳು ಮತ್ತು ಲಘು ಪೋಷಕಾಂಶಗಳಿಗೆ ಭೂಮಿಯೇ ಮುಖ್ಯ ಆಧಾರ, ಮಣ್ಣಿನಿಂದ ಈ ಎಲ್ಲಾ ಪೋಷಕಾಂಶಗಳು ಬೆಳೆಗಳಿಗೆ ಬೇಕಾದ ಪ್ರಮಾಣದಲ್ಲಿ ದೊರೆಯುವುದಿಲ್ಲವಾದ್ದರಿಂದ ಬಾಹ್ಯವಾಗಿ ನೀಡುವುದು ಅನಿವಾರ್ಯ. ಬೆಳೆಗಳಿಗೆ ಬೇಕಾಗುವ ಈ ಬಾಹ್ಯ ಪೋಷಕಾಂಶಗಳನ್ನು ಸಾವಯವ (ಕೊಟ್ಟಿಗೆ ಗೊಬ್ಬರ, ಹಸಿರೆಲೆ ಗೊಬ್ಬರ ಹಿಂಡಿ ಮತ್ತಿತರ) ಮತ್ತು ರಸಗೊಬ್ಬರಗಳಿಂದ ಒದಗಿಸಬೇಕಾಗಿದ್ದು ರಸಗೊಬ್ಬರಗಳಲ್ಲಿ ಪೋಷಕಾಂಶಗಳು ಹೆಚ್ಚಿನ ಪ್ರಮಾಣದಲ್ಲಿ ಮತ್ತು ನೇರವಾಗಿ ದೊರೆಯುವ ರೂಪದಲ್ಲಿದ್ದು ಅವುಗಳ ಬಳಕೆ ಅತ್ಯಗತ್ಯವಾಗಿದೆ.
ರೈತರು ಕೇವಲ ಒಂದು ಅಥವಾ ಎರಡು ಪೋಷಕಾಂಶ ಒದಗಿಸುವ ಯೂರಿಯಾ ಹಾಗೂ ಡಿ.ಎ.ಪಿ.ಯನ್ನು ರೂಢಿಗತವಾಗಿ ಬಳಸುತ್ತಿದ್ದು, ಇವುಗಳಲ್ಲಿ ಸಾರಜನಕ ಮತ್ತು ರಂಜಕದ ಅಂಶ ಮಾತ್ರವಿರುತ್ತದೆ. ಆದರೆ, ಬೆಳೆಗಳಿಗೆ ಬರ ಮತ್ತು ರೋಗ ನಿರೋಧಕ ಶಕ್ತಿ ನೀಡಿ ಕಾಳಿನ ತೂಕ ಹೆಚ್ಚಿಸಲು ಅತ್ಯಂತ ಅವಶ್ಯಕವಾಗಿರುವ ಪೊಟ್ಯಾಷ್ ಲಭ್ಯವಿರುವುದಿಲ್ಲ. ಮಾರುಕಟ್ಟೆಯಲ್ಲಿ ವಿವಿಧ ಶ್ರೇಣಿಯ (ಗ್ರೇಡ್) ಸಾರಜನಕ, ರಂಜಕ ಮತ್ತು ಪೊಟ್ಯಾಷ್ ಯುಕ್ತ ಬಹಳಷ್ಟು ರಸಗೊಬ್ಬರಗಳು ಲಭ್ಯವಿದ್ದು, ಶಿಫಾರಸ್ಸಿನಂತೆ ವಿವಿಧ ರಸಗೊಬ್ಬರಗಳ ಸಂಯೋಜನೆಯೊಂದಿಗೆ ಬಳಸಬಹುದಾಗಿದೆ. ಶಿಫಾರಸ್ಸಿನಂತೆ ಬೆಳೆಗಳಿಗೆ ಸಾರಜನಕ, ರಂಜಕ, ಪೊಟ್ಯಾಷ್ ರಸಗೊಬ್ಬರಗಳನ್ನು 4:2:1 ರ ಅನುಪಾತದಲ್ಲಿ ಬಳಸಬೇಕಾಗಿರುತ್ತದೆ. ಆದರೆ ಇತ್ತೀಚಿನ ವರ್ಷಗಳಲ್ಲಿ ರೈತರು ಬಳಸುತ್ತಿರುವ ರಸಗೊಬ್ಬರಗಳ ಅನುಪಾತವು ರಾಜ್ಯದಲ್ಲಿ 5:3:1 ಆಗಿರುತ್ತದೆ. ಇದನ್ನು ಸಮತೋಲನಾತ್ಮಕ ರಸಗೊಬ್ಬರಗಳ ಬಳಕೆಯನ್ನು ಉತ್ತೇಜಿಸಲು ಪೊಟ್ಯಾಷ್ ಯುಕ್ತ ಸಂಯುಕ್ತ ರಸಗೊಬ್ಬರಗಳ ಬಳಕೆಯನ್ನು ಪ್ರೇರೇಪಿಸುವುದು ಮುಖ್ಯವಾಗಿರುತ್ತದೆ.
ಅಲ್ಲದೆ, ರೈತರು ರಸಗೊಬ್ಬರವನ್ನು ಕೇವಲ ಒಂದೇ ಸಂಸ್ಥೆಯ ಅಥವಾ ಒಂದೇ ರಸಗೊಬ್ಬರಕ್ಕೆ ಆದ್ಯತೆ ನೀಡದೆ, ಡಿ.ಎ.ಪಿ. ರಸಗೊಬ್ಬರಕ್ಕೆ ಪರ್ಯಾಯವಾಗಿ ಗಂಧಕ ಒದಗಿಸುವ 20:20:0:13 ಹಾಗೂ ಪೊಟ್ಯಾಷ್ ಒದಗಿಸುವ ಇತರೆ ಸಂಯುಕ್ತ (ಕಾಂಪ್ಲೆಕ್ಸ್) ರಸಗೊಬ್ಬರಗಳಾದ 15:15:15, 10:26:26, 12:32:16, 22:22:11, 14:35:14, 17:17:17, 14:28:14, 19:19:19, 20:10:10 ಮತ್ತಿತರ ರಸಗೊಬ್ಬರಗಳನ್ನೂ ಸಹ ಬಳಸಬಹುದಾಗಿದೆ ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

Share. Facebook Twitter Pinterest LinkedIn Tumblr Email WhatsApp
Previous Article*ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಯದುವೀರ ವಿಜಯ*
Next Article *ಕೊಡಗಿನಲ್ಲಿ ಯದುವೀರ್ ಒಡೆಯರ್ ರಿಗೆ 73859 ಮತಗಳು ಲೀಡ್*

Related Posts

ಬಂಗಾರ ಕೊಳ್ಳುವವರಿಗೆ ಹಬ್ಬದ ಸಂಭ್ರಮ: ದಿಢೀರ್ ಇಳಿಕೆಯಾದ ಚಿನ್ನದ ದರ, ಎಷ್ಟಿದೆ ಗೊತ್ತಾ?

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ*

February 11, 2026

ಮಡಿಕೇರಿ, NEWS DESK ಫೆ.11 : ದಕ್ಷಿಣ ಕೊಡಗಿನ ಪೊನ್ನಂಪೇಟೆ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ನಿರಂತರವಾಗಿ ಜಾನುವಾರುಗಳ ಮೇಲೆ ದಾಳಿ…

ನಾಳೆ ದೇಶಾದ್ಯಂತ ಕಾರ್ಮಿಕ ಸಂಘಟನೆಗಳ ಮುಷ್ಕರ: ಬಸ್, ಬ್ಯಾಂಕ್, ಶಾಲಾ-ಕಾಲೇಜುಗಳ ಸ್ಥಿತಿ ಏನು? ಹೊರಗಡೆ ಹೋಗುವ ಮುನ್ನ ಈ ಸುದ್ದಿ ಓದಿ!

February 11, 2026

*ಪಿ.ಕೃಷ್ಣೇಗೌಡ ನೇತೃತ್ವದ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಕೆ.ಉದಯಕುಮಾರ್ ಆಯ್ಕೆ*

February 11, 2026

*ಆಹಾರ ಭದ್ರತಾ ಕಾಯ್ದೆ ಪರಿಣಾಮಕಾರಿಯಾಗಿ ಜಾರಿಗೊಳಿಸಿ: ಡಾ.ಎಚ್.ಕೃಷ್ಣ*

February 11, 2026

*ಅರಣ್ಯ ಹಕ್ಕು ಕಾಯ್ದೆ ಆದಿವಾಸಿಗಳಿಗೆ ತಲುಪಿಸಿ: ಗಿರಿಧರ*

February 11, 2026

*ಕಾರ್ಮಿಕ ವರ್ಗದ ತುರ್ತು ರೋಗಿಗಳಿಗೆ ಸರತಿ ಸಾಲು ಬೇಡ : ಜಿಲ್ಲಾ ಸರ್ಜನ್ ಗೆ ಮನವಿ ಸಲ್ಲಿಸಿದ ಎಸ್‌ಡಿಟಿಯು*

February 11, 2026

*ಮೈಸೂರಿನಲ್ಲಿ ಪೂರ್ಣ ಪ್ರಮಾಣದ ಪಾಸ್‌ಪೋರ್ಟ್‌ ಸೇವಾ ಕೇಂದ್ರ ಆರಂಭಕ್ಕೆ ಯದುವೀರ್‌ ಒತ್ತಡ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿರುವ ಮೈಸೂರು-ಕೊಡಗು ಸಂಸದರು*

February 11, 2026

*ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿಯಿಂದ ಮಡಿಕೇರಿಯಲ್ಲಿ ಪ್ರತಿಭಟನೆ*

February 11, 2026

*ಸಾಂತ್ವನ ಮಹಿಳಾ ಸಹಾಯವಾಣಿ : ಕೊಡಗಿನಲ್ಲಿ 5657 ಪ್ರಕರಣಗಳು ಇತ್ಯರ್ಥ*

February 11, 2026

*ಕಾಯಕ ಶರಣರ ಜಯಂತಿ ಸಮ ಸಮಾಜ ನಿರ್ಮಾಣದಲ್ಲಿ ಕಾಯಕ ಶರಣರ ಕೊಡುಗೆ ಅಪಾರ: ಹೇಮಲತಾ*

February 10, 2026
  • Facebook
  • Twitter
  • Instagram
  • WhatsApp
  • YouTube
Quick Links
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ
Quick Links
  • ಮಹಾದೇಗುಲ
  • ರುಚಿ ನೋಡಿ
  • ರೋಗ ಮುಕ್ತ
  • ಉದ್ಯೋಗ ಭಾಗ್ಯ
  • ಸಣ್ಣ ಕಥೆ
  • ವಿಡಿಯೋ ಗ್ಯಾಲರಿ
Contact

www.newsdeskkannada.com
News Desk,
Industrial Area,
Pathrika Bhavan Building,
Madikeri, Kodagu, Karnataka.
Phone: 94481 00724
              76766 24467
Email: newsdeskkodagu@gmail.com

© 2026 All Rights Reserved. Designed by Blueline Computers.
  • ಮುಖಪುಟ
  • ಕೊಡಗು ಜಿಲ್ಲೆ
  • ಕರ್ನಾಟಕ
  • ಭಾರತ
  • ಪೊಲೀಸ್ ನ್ಯೂಸ್
  • ಪ್ರವಾಸಿತಾಣ

Type above and press Enter to search. Press Esc to cancel.