ಸುಂಟಿಕೊಪ್ಪ ಜೂ.7 NEWS DESK : ಸುಂಟಿಕೊಪ್ಪ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಆವರಣದಲ್ಲಿ ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಗಿಡಗಳನ್ನು ನೆಟ್ಟು ಪರಿಸರದ ಮಹತ್ವದ ಕುರಿತು ಜಾಗೃತಿ ಮೂಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಶ್ರೀಲತಾ, ಪರಿಸರದ ಮೇಲೆ ಆಗುತ್ತಿರುವ ಅಪಾಯಕಾರಿ ಚಟುವಟಿಕೆಗಳ ಕುರಿತು ಮಾಹಿತಿ ನೀಡಿದರು.
ಪರಿಸರ ಸಂರಕ್ಷಣೆಯು ನಮ್ಮೆಲ್ಲದ ಆದ್ಯ ಕರ್ತವ್ಯವಾಗಬೇಕು. ಪರಿಸರ ಮಾಲಿನ್ಯವನ್ನು ಉಂಟು ಮಾಡುವ ಯಾವುದೇ ಕೆಲಸದಲ್ಲಿ ವಿದ್ಯಾರ್ಥಿಗಳು ತೊಡಗಬಾರದೆಂದು ಸಲಹೆ ನೀಡಿದರು. ಅರಣ್ಯ ನಾಶದಿಂದಾಗಿ ಪ್ರಸ್ತುತ ತಾಪಮಾನವು ದಿನದಿಂದ ದಿನಕ್ಕೆ ಏರುತ್ತಿರುವುದರಿಂದ ಜೀವಸಂಕುಲದ ಉಳಿಯುವಿಕೆಗೆ ಮಾರಕವಾಗಿದೆ ಎಂದರು.
ಜೀವಶಾಸ್ತ್ರ ವಿಭಾಗದ ಉಪನ್ಯಾಸಕಿ ಹಾಗೂ ನಿಸರ್ಗ ಇಕೋಕ್ಲಬ್ ಸಂಚಾಲಕಿ ಪದ್ಮಾವತಿ ದಿನದ ಮಹತ್ವದ ಕುರಿತು ಮಾತನಾಡಿ, ವಿಶ್ವಪರಿಸರ ದಿನಾಚರಣೆಯ -2024 ರ ಘೋಷವಾಕ್ಯವಾದ “ಭುಮಿಯ ಪುನರುತ್ತಾನ ಹಾಗೂ ಮರುಭುಮಿ ತಡೆಗಟ್ಟುವಿಕೆ” ವಿಚಾರದ ಬಗ್ಗೆ ಮಾಹಿತಿಯನ್ನು ನೀಡಿದರು.
ಅರಣ್ಯನಾಶದಿಂದಾಗಿ ಭೂಮಿ ಮರುಭೂಮಿಯಾಗುತ್ತಿರುವ ಬಗ್ಗೆ ಗಂಭೀರ ಸಮಸ್ಯೆಯ ಕುರಿತು ವಿದ್ಯಾರ್ಥಿಗಳಿಗೆ ಎಚ್ಚರಿಕೆಯ ಸಂದೇಶ ನೀಡಿದರು. ನದಿಮೂಲ, ಜಲಮೂಲಗಳು ಬರಿದಾಗುತ್ತಿರುವ ಬಗ್ಗೆ ಮಾಹಿತಿ ನೀಡಿದರು.
ಈ ಸಂದರ್ಭ ಕಾಲೇಜಿನ ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಹಾಜರಿದ್ದರು. 









