
ವಿರಾಜಪೇಟೆ ಜೂ.11 NEWS DESK : ಮಳೆ ಬಂದಾಗ ಕದನೂರು ರಸ್ತೆಯ ಮೋರಿಗಳು ತುಂಬಿ ರಸ್ತೆಯಲ್ಲಿ ನೀರು ಹರಿಯುತ್ತಿದ್ದು, ಇದರಿಂದ ಪಾದಚಾರಿಗಳಿಗೆ ಹಾಗೂ ವಾಹನಗಳ ಸಂಚಾರಕ್ಕೆ ತೀವ್ರ ಅಡಚಣೆ ಉಂಟಾಗುತ್ತಿತ್ತು. ಈ ಬಗ್ಗೆ ಮಾಹಿತಿ ತಿಳಿದು ಸ್ಥಳಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಸಂಬಂಧಪಟ್ಟ ಅಧಿಕಾರಿಗಳಿಗೆ ಶೀಘ್ರವಾಗಿ ಸಮಸ್ಯೆಯನ್ನು ಪರಿಹರಿಸಲು ಸೂಚನೆ ನೀಡಿದರು.








